ಒಂದು ಹೊತ್ತಿನ ಊಟಕ್ಕೂ ಹೆಣಗಾಡುತ್ತಿರುವ 600ಕ್ಕೂ ಹೆಚ್ಚು ಕೂಲಿ ಕಾರ್ಮಿಕರು


Team Udayavani, Apr 12, 2020, 7:11 PM IST

ಒಂದು ಹೊತ್ತಿನ ಊಟ ಹೆಣಗಾಡುತ್ತಿರುವ 600ಕ್ಕೂ ಹೆಚ್ಚು ಕೂಲಿ ಕಾರ್ಮಿಕರು

ಸಾಂದರ್ಭಿಕ ಚಿತ್ರ

ಮುಂಬಯಿ: ಘಾಟ್‌ಕೋಪರ್‌ ಪೂರ್ವದ ಪ್ರಾದೇಶಿಕ ಸಾರಿಗೆ ಕಚೇರಿ(ಆರ್‌ಟಿಒ) ಹಿಂಭಾಗದಲ್ಲಿರುವ ಕೊಳೆಗೇರಿ ಪ್ರದೇಶದ ಸುಮಾರು 600 ದೈನಂದಿನ ಕೂಲಿ ಕಾರ್ಮಿಕರು ಲಾಕ್‌ಡೌನ್‌ ಘೋಷಿಸಿದಾಗಿನಿಂದ ದಿನಕ್ಕೆ ಒಂದು ಹೊತ್ತಿನ ಊಟವನ್ನು ಸಹ ಪಡೆಯಲು ಹೆಣಗಾಡುತ್ತಿದ್ದಾರೆ. ಸ್ಥಳೀಯ ಶಾಸಕರ ಆಶ್ವಾಸನೆಗಳ ಹೊರತಾಗಿಯೂ ಕಾರ್ಮಿಕರು ಯಾವುದೇ ಸರಿಯಾದ ಆಹಾರ ಧಾನ್ಯಗಳನ್ನು ಹೊಂದಿರದ ಕಾರಣ ಸರಿಯಾಗಿ ಊಟ ಮಾಡದೆ ಎರಡು ವಾರಗಳಿಗಿಂತ ಹೆಚ್ಚು ಸಮಯವಾಗಿದೆ ಎಂದು ಕಾರ್ಮಿಕರು ಹೇಳುತ್ತಾರೆ.

ಪ್ರದೇಶದ ಸಾಮಾಜಿಕ ಕಾರ್ಯಕರ್ತೆ ರಜಿಯಾ ಅಖಾಡೆ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕರ ಗಮನ ಸೆಳೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅಗತ್ಯವಿರುವ ಜನರ ಪಟ್ಟಿಯನ್ನು ಶಾಸಕರ ಕಚೇರಿಗೆ ಕಳುಹಿಸಲು ನಮ್ಮನ್ನು ಕೇಳಲಾಯಿತು. ಪಟ್ಟಿಯನ್ನು ಕಳುಹಿಸಿದರೂ ಯಾವುದೇ ಪರಿಹಾರ ನಮಗೆ ತಲುಪಿಲ್ಲ. ಇತರ ಪ್ರದೇಶಗಳ ಜನರು ನಮ್ಮ ಕೋಟಾದಿಂದ ಆಹಾರ ಸಾಮಗ್ರಿಗಳನ್ನು ಸಂಗ್ರಹಿಸುತ್ತಿದ್ದಾರೆಂದು ನಾನು ತಿಳಿದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.

ದೈನಂದಿನ ಕೂಲಿ ಕಾರ್ಮಿಕ 37 ವರ್ಷದ ಅಹ್ಮದ್‌ ಹುಸೈನ್‌ ಅವರು ಮಾತನಾಡಿ ನಮ್ಮ ಪರಿಸ್ಥಿತಿ ಕಠಿಣವಾಗಿದೆ. ನಾವು ಬೆಳಗ್ಗೆ ಆಹಾರವನ್ನು ಪಡೆದರೆ ಮಧ್ಯಾಹ್ನ ಅಥವಾ ಸಂಜೆ ನಮಗೆ ಏನಾದರೂ ತಿನ್ನಲು ಸಿಗಬಹುದೆ ಎಂದು ನಮಗೆ ಖಚಿತವಿಲ್ಲ. ನನ್ನ ಕುಟುಂಬದಲ್ಲಿ ಐದು ಜನ ಸದಸ್ಯರಿದ್ದಾರೆ. ಎಲ್ಲರೂ ನನ್ನ ಮೇಲೆ ಅವಲಂಬಿತರಾಗಿದ್ದಾರೆ. ನಮ್ಮಲ್ಲಿ ಪಡಿತರ ಸಂಗ್ರಹವು ಮುಗಿದಿದೆ. ಮುಂದೆ ನಾವು ಹೇಗೆ ಬದುಕುಳಿಯುತ್ತೇವೆ ಎಂದು ನನಗೆ ತಿಳಿದಿಲ್ಲ ಎಂದು ತಿಳಿಸಿದ್ದಾರೆ. ಕೆಲವರು ನಮ್ಮ ಸ್ಥಳದಿಂದ ಒಂದು ಅಥವಾ ಎರಡು ಕಿಲೋಮೀಟರ್‌ ದೂರದಲ್ಲಿ ಆಹಾರದೊಂದಿಗೆ ಬರುತ್ತಾರೆ. ಆದರೆ ಪೊಲೀಸರು ನಮ್ಮ ಪ್ರದೇಶದಿಂದ ಹೊರಗೆ ಹೋಗಲು ಅನುಮತಿ ನೀಡುವುದಿಲ್ಲ ಎಂದು ಅವರು ಹೇಳಿದರು.

ಆ ಪ್ರದೇಶದ ಇನ್ನೊಬ್ಬ ನಿವಾಸಿ ಮಂದಾ ಯೆಡೆ, ನಾನು ರಸ್ತೆ ಮತ್ತು ಕಸದ ರಾಶಿಯಿಂದ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸಂಗ್ರಹಿಸು ಕಾರ್ಯದಲ್ಲಿ ತೊಡಗಿದ್ದೆನ್ನೆ. ನನ್ನ ಜೀವನೋಪಾಯವು ಅದರ ಮೇಲೆ ಅವಲಂಬಿತವಾಗಿದೆ. ನನಗೆ ಇಬ್ಬರು ಮಕ್ಕಳಿದ್ದಾರೆ. ಅವರು ನಿರ್ಮಾಣ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಲಾಕ್‌ಡೌನ್‌ ಆದಾಗಿನಿಂದ ನಾವೆಲ್ಲರೂ ಮನೆಯಲ್ಲಿ ಕುಳಿತಿದ್ದೇವೆ. ಅವರ ನಿಯಮಗಳನ್ನು ಅನುಸರಿಸಿ ಮತ್ತು ಎಲ್ಲಿಯೂ ಹೋಗದೆ ನಾವು ಸರ್ಕಾರದೊಂದಿಗೆ ಸಹಕರಿಸುತ್ತಿದ್ದೇವೆ, ಆದರೆ ಬದುಕಲು ನಮಗೆ ಆಹಾರ ಬೇಕು ಎಂದು ತಿಳಿಸಿದ್ದಾರೆ.

ಮಧ್ಯಾಹ್ನ ಸ್ಥಳೀಯ ಬಿಜೆಪಿ ಶಾಸಕ ಪರಾಗ್‌ ಷಾ ಅವರನ್ನು ಸಂಪರ್ಕಿಸಿದಾಗ, ನಾವು ಪ್ರತಿ ಮನೆಯನ್ನೂ ತಲುಪಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ. ನಾನು ಈಗಾಗಲೇ ಕೊಳೆಗೇರಿ ಪ್ರದೇಶಗಳಲ್ಲಿ 12,000 ಆಹಾರ ಪ್ಯಾಕೆಟ್‌ಗಳನ್ನು ವಿತರಿಸಿದ್ದೇವೆ.ಒಂದು ಲಕ್ಷಕ್ಕೂ ಹೆಚ್ಚು ಜನರು ಅಲ್ಲಿ ವಾಸಿಸುತ್ತಿರುವುದರಿಂದ ಕೊಳೆಗೇರಿ ಜನಸಂಖ್ಯೆ ತುಂಬಾ ದೊಡ್ಡದಾಗಿದೆ. ಆದ್ದರಿಂದ ಎಲ್ಲರಿಗೂ ತಲುಪುವುದು ಕಷ್ಟ. ಆದರೆ ರಾಜ್ಯ ಸರ್ಕಾರದ ಪರಿಹಾರ ಶೀಘ್ರದಲ್ಲೇ ಜನರನ್ನು ತಲುಪಲಿದೆ ಎಂದು ನನಗೆ ಖಾತ್ರಿಯಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಮಸ್ಕತ್‌: ಬಂಟ್ಸ್‌ ಸಮುದಾಯ-ವಿಷು ಆಚರಣೆ

Desi Swara: ಮಸ್ಕತ್‌: ಬಂಟ್ಸ್‌ ಸಮುದಾಯ-ವಿಷು ಆಚರಣೆ

ಕತಾರ್‌: “ಅವಳಿಗೆ ಇಫ್ತಾರ್‌’ ಕಾರ್ಯಕ್ರಮ

ಕತಾರ್‌: “ಅವಳಿಗೆ ಇಫ್ತಾರ್‌’ ಕಾರ್ಯಕ್ರಮ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.