ರಕ್ತದಾನ ಮಾಡಿ ಮಾನವೀಯತೆ ಮೆರೆದ ಭಾರತೀಯ ಫ‌ುಟ್ಬಾಲಿಗ ಲಾಲ್ಬೆಕುಲುವಾ


Team Udayavani, Apr 13, 2020, 5:53 AM IST

ರಕ್ತದಾನ ಮಾಡಿ ಮಾನವೀಯತೆ ಮೆರೆದ ಭಾರತೀಯ ಫ‌ುಟ್ಬಾಲಿಗ ಲಾಲ್ಬೆಕುಲುವಾ

ಹೊಸದಿಲ್ಲಿ: ಕೋವಿಡ್‌-19 ವೈರಸ್‌ನಿಂದ ಎಲ್ಲೆಡೆ ಲಾಕ್‌ಡೌನ್‌ ಆಗಿದ್ದರಿಂದ ಆಸ್ಪತ್ರೆಯಲ್ಲಿ ರೋಗಿಗಳು ರಕ್ತ ಸಿಗದೆ ಪರದಾಟ ನಡೆಸುತ್ತಿದ್ದಾರೆ. ಇಂತಹ ತುರ್ತು ಪರಿಸ್ಥಿತಿಯಲ್ಲಿ ಖ್ಯಾತ ಫ‌ುಟ್ಬಾಲ್‌ ಆಟಗಾರರೊಬ್ಬರು ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ. ಅವರು ಬೇರ್ಯಾರೂ ಅಲ್ಲ, ಫ‌ುಟ್ಬಾಲ್‌ ಪ್ರೇಮಿಗಳಿಗೆ ನೆಚ್ಚಿನ ಆಟಗಾರ ಜೆಜೆ ಲಾಲ್ಬೆಕುಲುವಾ.

ಹೌದು, 29 ವರ್ಷದ ಲಾಲ್ಬೆಕುಲುವಾ, ಮಿಜೋರಾಂ ಮೂಲದವರು, ಭಾರತ ತಂಡದ ಖ್ಯಾತ ಆಟಗಾರರಲ್ಲಿ ಒಬ್ಬರು, ಸದ್ಯ ಐಎಸ್‌ಎಲ್‌ನ ಪ್ರಮುಖ ತಂಡವಾಗಿರುವ ಚೆನ್ನೈಯನ್‌ ತಂಡದ ಪ್ರತಿನಿಧಿ.

ಲಾಲ್ಬೆಕುಲುವಾ ಶ್ರೇಷ್ಠದಾನ ಮೂರು ವಾರಗಳಿಂದ ಮಿಜೋರಾಂ ಕೂಡ ಲಾಕ್‌ಡೌನ್‌ನಲ್ಲಿದೆ. ಈಗ ಮತ್ತೆ ಎರಡು ವಾರ ಲಾಕ್‌ಡೌನ್‌ ಅನ್ನು ಕೇಂದ್ರ ಸರಕಾರ ವಿಸ್ತರಿಸಿದೆ. ಈ ಬೆನ್ನಲ್ಲೇ ಮಿಜೋರಾಂನ ರಕ್ತ ನಿಧಿ ಕೇಂದ್ರದಲ್ಲಿ ರಕ್ತ ಶೇಖರಣೆ ಕಡಿಮೆ ಆಗಿದೆ. ಇದರಿಂದ ನೂರಾರು ರೋಗಿಗಳು ತೊಂದರೆಗೆ ಸಿಲುಕಿದ್ದಾರೆ, ಈ ವಿಷಯ ತಿಳಿಯುತ್ತಿದ್ದಂತೆ ಲಾಲೆºಕುಲುವಾ ಸ್ವತಃ ಕಾರ್ಯಪ್ರವೃತ್ತರಾಗಿದ್ದಾರೆ.

ಈ ಬಗ್ಗೆ ಲಾಲ್ಬೆಕುಲುವಾ ಹೇಳಿದ್ದು ಹೀಗೆ, “ಲಾಕ್‌ಡೌನ್‌ ಇರುವುದರಿಂದ ಎಲ್ಲ ರಕ್ತ ನಿಧಿ ಘಟಕಗಳಲ್ಲಿ ರಕ್ತದ ಕೊರತೆ ಉಂಟಾಗಿದೆ. ಹೀಗಾಗಿ ಆಸ್ಪತ್ರೆಯವರು ಸರಕಾರೇತರ ಸಂಘ ಸಂಸ್ಥೆ “ಯಂಗ್‌ ಮಿಝೊ ಸಂಸ್ಥೆ’ಯ ಸಹಾಯ ಬೇಡಿಕೊಂಡರು. ಈ ವಿಷಯ ನನಗೆ ಗೊತ್ತಾಯಿತು, ತಡ ಮಾಡದೇ ತತ್‌ಕ್ಷಣ ಮಿಜೋರಾಂನ ಡಾರ್ಟ್‌ ಲ್ಯಾಂಗ್‌ನಲ್ಲಿರುವ ಸೈನೊದ್‌ ಆಸ್ಪತ್ರೆಗೆ ಭೇಟಿ ನೀಡಿದೆ. ಒಟ್ಟು ನನ್ನೊಂದಿಗೆ 33 ಮಂದಿ ರಕ್ತದಾನ ಮಾಡಲು ತಯಾರಾಗಿದ್ದರು, ಪರೀಕ್ಷೆ ನಡೆಸಿದ ವೈದ್ಯರು 27 ಮಂದಿ ರಕ್ತ ನೀಡಬಹುದು ಎಂದರು, ನಾನು ಅಥವಾ ಬೇರ್ಯಾರೋ ಅನ್ನುವ ವಿಷಯ ಇಲ್ಲಿ ಬರುವುದಿಲ್ಲ,ಕೋವಿಡ್‌-19 ವಿರುದ್ಧ ಎಲ್ಲರೂ ಒಟ್ಟಾಗಿ ಹೋರಾಡುವ ಅಗತ್ಯವಿದೆ. ಇಂತಹ ಒಂದು ಪುಣ್ಯ ಕಾರ್ಯದಲ್ಲಿ ನೆರವಾಗಲು ನನಗೆ ಶಕ್ತಿ ನೀಡಿದ ಸರ್ವಶಕ್ತನಿಗೆ ನಾನು ಕೃತಜ್ಞನಾಗಿದ್ದೇನೆ. ಸದ್ಯದ ಪರಿಸ್ಥಿತಿಯಲ್ಲಿ ಎಲ್ಲರೂ ಮನೆಯಲ್ಲೇ ಇರಿ, ಹೊರಗಡೆ ಬರಬೇಡಿ’ ಎಂದು ಲಾಲೆºಕುಲುವಾ ತಿಳಿಸಿದ್ದಾರೆ.

ಟಾಪ್ ನ್ಯೂಸ್

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.