ಅಕ್ರಮ ದಾಸ್ತಾನಿನ ಸವಾಲು ಕಠಿನ ಕ್ರಮ ಅಗತ್ಯ


Team Udayavani, Apr 13, 2020, 12:01 AM IST

ಅಕ್ರಮ ದಾಸ್ತಾನಿನ ಸವಾಲು ಕಠಿನ ಕ್ರಮ ಅಗತ್ಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಾಕ್‌ಡೌನ್‌ನ ಈ ಸಮಯದಲ್ಲಿ ದೇಶದ ಬಹುತೇಕ ಕೆಲಸ ಕಾರ್ಯಗಳು ನಿಂತಿವೆ. ಜನರು ಮನೆಯಲ್ಲೇ ಇದ್ದಾರೆ. ಈ ಸಮಯದಲ್ಲಿ ಯಾರಿಗೂ ಅಗತ್ಯ ವಸ್ತುಗಳ ಅದರಲ್ಲೂ ಆಹಾರ ಸಾಮಗ್ರಿಗಳ ಪೂರೈಕೆಯ ಕೊರತೆ ಕಾಡದಂತೆ ನೋಡಿಕೊಳ್ಳುವ ಬೃಹತ್‌ ಸವಾಲು ಕೇಂದ್ರ ಮತ್ತು ರಾಜ್ಯ ಸರಕಾರಗಳ ಮೇಲಿದೆ. ಈ ಕಾರಣಕ್ಕಾಗಿ ನಿತ್ಯವೂ ಗೂಡ್ಸ್‌  ರೈಲುಗಳು ದೇಶಾದ್ಯಂತ ಅಗತ್ಯ ಆಹಾರ ಪದಾರ್ಥಗಳ ಪೂರೈಕೆ ಮಾಡಲು ಓಡಾಡುತ್ತಿವೆ. ಆದಾಗ್ಯೂ ಸಾರ್ವಜನಿಕ ವಿತರಣೆ ವ್ಯವಸ್ಥೆ, ಕಿರಾಣಿ ಅಂಗಡಿಗಳು ಹಾಗೂ ರೇಶನ್‌ ಅಂಗಡಿಗಳು ತೆರೆದಿರಲು ಹಾಗೂ ಆನ್‌ಲೈನ್‌ ಖರೀದಿಗೂ ಹಲವೆಡೆ ಅವಕಾಶ ನೀಡಲಾಗಿದೆ.

ಇದೇ ವೇಳೆಯಲ್ಲೇ ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೂಡ ಯಾವುದೇ ಕಾರಣಕ್ಕೂ ಅಗತ್ಯ ವಸ್ತುಗಳನ್ನು ಮೂಲಬೆಲೆಗಿಂತ ಅಧಿಕ ಮೊತ್ತಕ್ಕೆ ಮಾರಾಟ ಮಾಡುವಂತಿಲ್ಲ ಎಂದು ಎಚ್ಚರಿಸಿವೆ. ಆದರೂ ವಾಸ್ತವವೇನೆಂದರೆ, ತರಕಾರಿ, ಹಣ್ಣು ಮತ್ತು ಅಗತ್ಯ ಆಹಾರ ಪದಾರ್ಥಗಳ ಮೇಲಿನ ಬೆಲೆಯನ್ನು ಬಾಯಿಗೆ ಬಂದ ದರದಲ್ಲಿ ಮಾರಲಾಗುತ್ತಿದೆ.

ಈ ರೀತಿ ಅಧಿಕ ಬೆಲೆಗೆ ಆಹಾರ ಪದಾರ್ಥಗಳ, ಅಗತ್ಯ ವಸ್ತುಗಳ ಮಾರಾಟ ಮಾಡಿದ ಅನೇಕರ ವಿರುದ್ಧ ಈಗ ಕ್ರಮ ಕೈಗೊಳ್ಳಲಾಗುತ್ತಿದೆಯಾದರೂ ಪರಿಸ್ಥಿತಿ ಮಾತ್ರ ಬದಲಾಗುತ್ತಿಲ್ಲ. ಇದನ್ನು ಪ್ರಶ್ನಿಸಿದವರಿಗೆ, “ವಸ್ತುಗಳ ಪೂರೈಕೆಯೇ ಆಗುತ್ತಿಲ್ಲ, ಅದಕ್ಕೆ ಹೆಚ್ಚು ಬೆಲೆ’ ಎಂದು ಹೇಳಲಾಗುತ್ತಿದೆ. ಅಭಾವ ನಿಜಕ್ಕೂ ಇದೆಯೋ ಅಥವಾ ಅಕ್ರಮ ದಾಸ್ತಾನುಕೋರರಿಂದಾಗಿ ಈ ಅಭಾವ ಎದುರಾಗುತ್ತಿದೆಯೋ ತಿಳಿಯದಾಗಿದೆ.

ಅದರಲ್ಲೂ ರೇಶನ್‌ ಅಂಗಡಿಗಳ ಮುಂದಂತೂ ದಿನಗಟ್ಟಲೇ ಜನರ ಕ್ಯೂ ಇರುತ್ತದೆ. ದೇಶಾದ್ಯಂತ ಹಲವೆಡೆ, ತಮಗೆ ಅಗತ್ಯ ಪ್ರಮಾಣದಲ್ಲಿ ಆಹಾರ ಪದಾರ್ಥ ಸಿಗುತ್ತಿಲ್ಲ ಎಂದು  ಜನರು ದೂರುತ್ತಿದ್ದಾರೆ. ಈ ಕಾರಣಕ್ಕಾಗಿಯೇ ಗೃಹಸಚಿವಾಲಯವು, ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದೆ. ಅಗತ್ಯ ಸರಕುಗಳ ಕಾಯ್ದೆ 1955ರ ಅಡಿಯಲ್ಲಿ ಈ ಕೃತ್ಯ ಎಸಗುವವರಿಗೆ ಏಳು ವರ್ಷ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸ ಬಹುದಾಗಿದೆ.

ಆಹಾರ ಪದಾರ್ಥಗಳ ಅಕ್ರಮ ದಾಸ್ತಾನು ಮಾಡಿ ಕೃತಕ ಅಭಾವ ಸೃಷ್ಟಿಸುವುದರಿಂದಾಗಿ ಮಾರುಕಟ್ಟೆಯಲ್ಲಿ ಅವುಗಳ ಬೆಲೆ ಗಗನಕ್ಕೇರುತ್ತದೆ. ಇದೇನೂ ದೇಶಕ್ಕೆ ಹೊಸ ಅನುಭವವಲ್ಲ. ದೇಶ ಸಂಕಷ್ಟ ಎದುರಿಸಿದಾಗಲೆಲ್ಲ ಇಂಥ ಕರಾಳ ಪ್ರವೃತ್ತಿಗಳ ಹಾವಳಿ ಅಧಿಕವಾಗಿಬಿಡುತ್ತದೆ.

ರೋಗಗಳು ಹಬ್ಬಿದಾಗ, ಬರ ಬಂದಾಗ, ನೆರೆ ಬಂದಾಗ ಅಥವಾ ವಿದೇಶದಿಂದ ಯಾವುದಾದರೂ ಖಾದ್ಯ ಸಾಮಗ್ರಿಯ ಆಮದು ನಿಂತು ಹೋಗುತ್ತಿದ್ದಂತೆಯೇ ಅಕ್ರಮ ದಾಸ್ತಾನುಕೋರರು ಎಚ್ಚೆತ್ತು ಬಿಡುತ್ತಾರೆ. ಖಾದ್ಯ ತೈಲ, ಈರುಳ್ಳಿ- ಟೊಮೆಟೋ ಮತ್ತು ಬೇಳೆಕಾಳುಗಳ ವಿಷಯದಲ್ಲಿ ಈ ರೀತಿಯ ಅಕ್ರಮ ದಾಸ್ತಾನು ಹೇಗೆಲ್ಲ ಜನರನ್ನು ಹೈರಾಣಾಗಿಸಿವೆ ಎನ್ನುವುದನ್ನು ಅನೇಕ ಬಾರಿ ನೋಡಿದ್ದೇವೆ.

ಆದಾಗ್ಯೂ ಪೂರೈಕೆ ವ್ಯವಸ್ಥೆ ಕೂಡ ಸಂಪೂರ್ಣ ಚಾಲನೆಗೆ ಬರುವ ಅಗತ್ಯವೂ ಇದೆ. ರೈತರ ಬೆಳೆಗಳು, ಸಾರ್ವಜನಿಕರವರೆಗೆ ಮುಟ್ಟುವವರೆಗೆ ಯಾವುದೇ ಅಡಚಣೆಗಳು ಎದುರಾಗದಂತೆ ಖಾತ್ರಿಪಡಿಸಬೇಕಿದೆ. ಅನೇಕ ರಾಜ್ಯಗಳ ಗಡಿಗಳು ಬಂದ್‌ ಆಗಿರುವುದರಿಂದ, ಆಗತ್ಯವಸ್ತುಗಳ ಪೂರೈಕೆ ಸೇವೆಯ ವೇಗ ಹಿಂದಿನಂತೆ ಇಲ್ಲ. ಇದಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳುವ ಅಗತ್ಯವಿದೆ. ಅಲ್ಲದೇ, ಅಕ್ರಮ ದಾಸ್ತಾನುಕೋರರನ್ನು ಹುಡುಕಿ ಕಠಿನ ಶಿಕ್ಷೆಯನ್ನು ತ್ವರಿತವಾಗಿ ಜಾರಿಗೆ ತರುವುದರಿಂದಲೂ ಸಮಸ್ಯೆಗೆ ಪರಿಹಾರ ಸಿಗಬಹುದು.

ಟಾಪ್ ನ್ಯೂಸ್

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.