ವಿವಿಧೆಡೆ ತಂಪೆರೆದ ಬೇಸಗೆ ಮಳೆ
Team Udayavani, Apr 13, 2020, 6:46 AM IST
ಉಡುಪಿ/ಕಾರ್ಕಳ/ಹೆಬ್ರಿ/ಪಳ್ಳಿ/ಶಿರ್ವ: ಬೇಸಗೆ ಧಗೆ ತೀವ್ರವಾಗಿರು ವಂತೆಯೇ, ಜಿಲ್ಲೆಯ ಕೆಲವು ಭಾಗಗಳಲ್ಲಿ ರವಿವಾರ ಸುರಿದ ಮಳೆ ತಂಪೆರೆದಿದೆ.
ಕಾರ್ಕಳ ತಾಲೂಕಿನಲ್ಲಿ ರವಿವಾರ ಗುಡುಗು, ಗಾಳಿ, ಮಿಂಚು ಸಹಿತ ಆಲಿಕಲ್ಲು ಮಳೆಯಾಗಿದೆ. ಮಧ್ಯಾಹ್ನ 2.45ರ ವೇಳೆ ಗುಡುಗು ಮಳೆ ಪ್ರಾರಂಭವಾಗಿ ಸುಮಾರು 3.15ರ ತನಕ ಸುರಿಯಿತು. ಕಾರ್ಕಳ ನಗರ, ಕುಕ್ಕುಂದೂರು, ಸಾಣೂರು, ಬಜಗೋಳಿ, ದುರ್ಗ, ಜೋಡುರಸ್ತೆ, ಜೋಡುಕಟ್ಟೆ, ಇರ್ವತ್ತೂರು ಭಾಗದಲ್ಲಿ ಅಧಿಕ ಮಳೆಯಾಗಿದೆ.
ಹೆಬ್ರಿ ತಾಲೂಕಿನ ಹೆಬ್ರಿ ಬೇಳಂಜೆ, ಮುದ್ರಾಡಿ, ಕುಚ್ಚಾರು, ಕಬ್ಬಿನಾಲೆ ಮುನಿಯಾಲು, ಶಿವಪುರ ಪಡುಕುಡೂರು, ಖಜಾನೆ ಎಳ್ಳಾರೆ ಸೇರಿದಂತೆ ವಿವಿಧೆಡೆ ರವಿವಾರ ಸಂಜೆ 4 ಗಂಟೆಯಿಂದ ಗುಡುಗು ಸಿಡಿಲು ಗಾಳಿ ಸಹಿತ ಮಳೆಯಾಗಿದೆ.
ಗಾಳಿಗೆ ಶಿವಪುರ ಒಳಬೈಲು ಕೃಷ್ಣ ನಾಯ್ಕ ಅವರ ಮನೆ ಮೇಲೆ ಮರವೊಂದು ಬಿದ್ದ ಪರಿಣಾಮ ಹಾನಿಯಾಗಿದೆ. ಶಿವಪುರ ಮುಳ್ಳುಗುಡ್ಡೆ ಸರಕಾರಿ ಅಂಗನವಾಡಿ ಶಾಲೆಯ ಹೆಂಚು ಹಾರಿಹೋಗಿದ್ದು ನಷ್ಟ ಸಂಭವಿಸಿದೆ. ಬೇಳಂಜೆ ಹಾಗೂ ಕಬ್ಬಿನಾಲೆ ಪರಿಸರದಲ್ಲಿ ಆಲಿಕಲ್ಲು ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಅಪಘಾತ