ಕೊಪ್ಪಳ ಪೊಲೀಸ್ ಪಡೆಯಿಂದ ಮನೆ ಮನೆಗೆ ಉಚಿತವಾಗಿ ತರಕಾರಿ ವಿತರಣೆ


Team Udayavani, Apr 13, 2020, 2:49 PM IST

ಕೊಪ್ಪಳ ಪೊಲೀಸ್ ಪಡೆಯಿಂದ ಮನೆ ಮನೆಗೆ ಉಚಿತವಾಗಿ ತರಕಾರಿ ವಿತರಣೆ

ಕೊಪ್ಪಳ: ಕೊಪ್ಪಳ ಜಿಲ್ಲೆಯು ಲಾಕ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಜಿಲ್ಲಾಕೇಂದ್ರ ಕೊಪ್ಪಳದಲ್ಲಿ ನಗರ ಹಾಗೂ ಗ್ರಾಮೀಣ ಠಾಣೆಯ ಪೊಲೀಸ್ ಪಡೆಯಿಂದ ಮನೆ ಮನೆಗೆ ಉಚಿತವಾಗಿ ತರಕಾರಿ ಕಿಟ್ ವಿತರಣೆ ಮಾಡಿ ಗಮನ ಸೆಳೆದಿದ್ದಾರೆ.

ಜಿಲ್ಲೆಯೂ ಈಗ ಸಂಪೂರ್ಣ ಲಾಕ್ ಡೌನ್ ಆಗಿದೆ. ಹೀಗಾಗಿ ಜನತೆಗೆ ದಿನಸಿ ಸಾಮಗ್ರಿ ಹಾಗೂ ತರಕಾರಿ ಖರೀದಿ ಸಮಸ್ಯೆಯಾಗಿದೆ. ಇದನ್ನರಿತು ಜಿಲ್ಲಾಡಳಿತ ಮನೆ ಮನೆಗೆ ತರಕಾರಿ ಪೂರೈಕೆಗೆ ವ್ಯವಸ್ಥೆ ಮಾಡಿದೆ. ಆದರೆ ನಗರದಲ್ಲಿ‌ ಕೆಲವು ಬಡ ಕುಟುಂಬಗಳಿಗೆ ಸಹಾಯ, ಸೇವೆ ಮಾಡಲು ಗ್ರಾಮೀಣ ಸಿಪಿಐ ರವಿ ಉಕ್ಕುಂದ ಹಾಗೂ ನಗರ ಠಾಣೆ ಪಿಐ ಮೌನೇಶ್ವರ ಪಾಟೀಲ್ ಅವರ ನೇತೃತ್ವದ ಪೊಲೀಸ್ ಪಡೆಯು ಇಂದು ಹಳ್ಳಿಗೆ ತೆರಳಿ ನೇರವಾಗಿ 30 ಕ್ವಿಂಟಲ್ ನಷ್ಟು ರೈತರು ಬೆಳೆದ ತರಕಾರಿಯನ್ನು ಖರೀದಿ ಮಾಡಿ, ಠಾಣೆಯಲ್ಲಿ 5 ಕೆಜಿ ತರಕಾರಿ ಕಿಟ್ ಸಿದ್ದಪಡಿಸಿ ಟಾಟಾಎಸ್ ವಾಹನದಲ್ಲಿ ಮನೆ ಮನೆಗೆ ತೆರಳಿ ವಿತರಣೆ ಮಾಡಿದರು.

700 ಪಾಕೇಟ್ ತರಕಾರಿ ಕಿಟ್ ನಲ್ಲಿ ಬದನೆಕಾಯಿ ಹೂಕೋಸು, ಹಸಿ ಮೆಣಸಿನಕಾಯಿ, ನುಗ್ಗೆಕಾಯಿ, ಟೊಮೇಟೊ, ಆಲುಗಡ್ಡೆ ಸೇರಿ ಇತರೆ ತರಕಾರಿಯ ಕಿಟ್ ಸಿದ್ದಪಡಿಸಿ ವಿತರಣೆ ಮಾಡಿದರು. ಸಿಪಿಐ ಹಾಗೂ ಪಿಐ ಅವರೇ ಅಂದಾಜು 20 ಸಾವಿರ ರೂ ಬೆಲೆಯ ತರಕಾರಿಯನ್ನು ತಾವೇ ಕೊಟ್ಟು ನೇರ ರೈತರಿಂದ ಖರೀದಿ ಮಾಡಿ ಬಡ ಜನತೆಗೆ ವಿತರಣೆ ಮಾಡಿದರು.

ತರಕಾರಿ ವಿತರಣೆಯ ವೇಳೆ ಲಾಕ್ ಡೌನ್ ಇದೆ. ಯಾರೂ ಮನೆಯಿಂದ ಹೊರಗೆ ಬರಬೇಡಿ, ಮನೆಯಲ್ಲಿಯೇ ಸುರಕ್ಷಿತವಾಗಿ ಇರಬೇಕು. ನಿಮ್ಮ ಆರೋಗ್ಯ ಕಾಪಾಡಬೇಕು ಎಂದು ಜಾಗೃತಿ ಮೂಡಿಸಿದರು‌.

ಇನ್ನೂ ಉದಯವಾಣಿ ಜೊತೆ ಮಾತನಾಡಿದ ಅವರು, ರೈತರ ಬೆಳೆಯೂ ಹೊಲದಲ್ಲಿ ಹಾನಿಯಾಗುತ್ತಿದೆ. ಹೀಗಾಗಿ ನಾವು ರೈತರಿಂದಲೇ ಖರೀದಿ ಮಾಡಿ ಉಚಿತವಾಗಿ ಜನತೆಗೆ ಕೊಡುತ್ತಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.