ಅಕ್ಕಿ ಮಾರಿದರೆ ಪಡಿತರ ಚೀಟಿ ರದ್ದು: ರೇಣುಕಾಪ್ರಸಾದ್‌


Team Udayavani, Apr 13, 2020, 6:11 PM IST

13-April-38

ಎನ್‌.ಆರ್‌.ಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಎಸಿ ರೇಣುಕಾಪ್ರಸಾದ್‌ ಅಧ್ಯಕ್ಷತೆಯಲ್ಲಿ  ಅಧಿಕಾರಿಗಳ ಸಭೆ ನಡೆಯಿತು

ಎನ್‌.ಆರ್‌.ಪುರ: ಕೋವಿಡ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಪಡಿತರದಾರರಿಗೆ ಎರಡು ತಿಂಗಳ ಪಡಿತರವನ್ನು ಒಮ್ಮೆಲೆ ವಿತರಿಸುತ್ತಿದ್ದು, ಪಡಿತರದಾರರೇನಾದರೂ ಅಕ್ಕಿ ಮಾರಾಟ ಮಾಡಿದರೆ ಅಂತಹ ಪಡಿತರದಾರರ ಕಾರ್ಡನ್ನು ರದ್ದು ಪಡಿಸಲು ಮುಂದಾಗುವಂತೆ ತಹಶೀಲ್ದಾರ್‌ ಎಚ್‌.ಎಸ್‌.ಪರಮೇಶ್‌ಗೆ ಎಸಿ ರೇಣುಕಾಪ್ರಸಾದ್‌ ಸೂಚಿಸಿದರು.

ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಕೋವಿಡ್ ಸೋಂಕು ತಡೆಗಟ್ಟುವ ಸಭೆಯಲ್ಲಿ ಮಾತನಾಡಿದ ಅವರು, ಪಡಿತರದಾರರ ಅಕ್ಕಿಯನ್ನು ಪಡೆಯುವ ಅಂಗಡಿಗಳ ಮಾಲೀಕರಿಗೂ ಎಚ್ಚರಿಕೆ ನೀಡಬೇಕು. ಯಾವುದೇ ಕಾರಣಕ್ಕೂ ಸರ್ಕಾರದಿಂದ ವಿತರಿಸುವ ಪಡಿತರ ಮಾರಾಟವಾಗಬಾರದು ಎಂದರು. ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡಿತರದಾರರು ಜಾಸ್ತಿ ಇದ್ದಲ್ಲಿ ಆಯಾ ಗ್ರಾಮಗಳ ಪಡಿತರದಾರರ ಪಟ್ಟಿ ತಯಾರು ಮಾಡಿಕೊಂಡು ಗೂಡ್ಸ್‌ ವಾಹನದಲ್ಲಿ ಪಡಿತರ ಒಯ್ದು ಗ್ರಾಮದ ಒಂದು ಭಾಗದಲ್ಲಿ ನಿಂತು ವಿತರಿಸಬೇಕು ಎಂದರು.

ಗ್ರಾಮೀಣ ಭಾಗದಲ್ಲಿ ಕೆಲ ಅಂಗಡಿಗಳಲ್ಲಿ ಪೆಟ್ರೋಲ್‌, ಮದ್ಯ ಮಾರಾಟ ಮಾಡುತ್ತಿದ್ದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿ ಕಳ್ಳಭಟ್ಟಿ ಅಡ್ಡೆ ಮೇಲೆ ಇಲಾಖಾ ಅಧಿಕಾರಿಗಳು ದಾಳಿ ನಡೆಸಿ, ಕಳ್ಳಭಟ್ಟಿ ತಯಾರಿಕೆಗೆ ಕಡಿವಾಣ ಹಾಕಬೇಕು. ಪೊಲೀಸ್‌ ಹಾಗೂ ಅಬಕಾರಿ ಇಲಾಖೆಯವರು ಈ ಬಗ್ಗೆ ಗಮನಹರಿಸಬೇಕೆಂದರು. ವೈದ್ಯರು ಮುಂದಿನ ಸಾಲಿನ ಯೋಧರಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ವೈದ್ಯರೊಂದಿಗೆ ಎಲ್ಲಾ ಇಲಾಖಾ ಧಿಕಾರಿಗಳೂ ಕೈಜೋಡಿಸಬೇಕು ಎಂದರು.

ಬೇಕರಿಗಳಲ್ಲಿ ಕೇವಲ ಬ್ರೆಡ್‌, ಸ್ವೀಟ್ಸ್‌, ಬಿಸ್ಕೆಟ್ಸ್‌, ಬನ್‌ ಗಳನ್ನು ಮಾತ್ರ ಮಾರಾಟ ಮಾಡಬೇಕು. ಯಾವುದೇ ರೀತಿಯ ಕರಿದ ತಿಂಡಿಗಳನ್ನು ಮಾರುವಂತಿಲ್ಲ ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದರು. ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಬೇರೆ ಜಿಲ್ಲೆಯಿಂದ ಬೇರೆ ರಾಜ್ಯದಿಂದ ಬಂದವರ ಮಾಹಿತಿ ಕಲೆ ಹಾಕಿ ಅಂತಹವರ ಆರೋಗ್ಯ ತಪಾಸಣೆ ಕಡ್ಡಾಯವಾಗಿ ಮಾಡಿ, ಮನೆಯಿಂದ ಹೊರಗಡೆ ತಿರುಗಾಡದಂತೆ ಎಚ್ಚರಿಕೆ ನೀಡಬೇಕೆಂದು ಸೂಚಿಸಿದರು.

ಪ.ಪಂ. ವ್ಯಾಪ್ತಿಯ ಎಲ್ಲಾ ಪೌರಕಾರ್ಮಿಕರ ಆರೋಗ್ಯ ತಪಾಸಣೆ ಮಾಡಿಸಬೇಕೆಂದರು. ತಾಲೂಕು ಆಡಳಿತ ವೈದ್ಯಾ ಧಿಕಾರಿ ಡಾ|ವೀರಪ್ರಸಾದ್‌ ಮಾತನಾಡಿ 1215 ಜನ ಹೋಂ ಕ್ವಾರಂಟೈನ್‌ನಲ್ಲಿದ್ದು, ಅದರಲ್ಲಿ 169 ಜನ ಅವ ಧಿಯನ್ನು ಮುಗಿಸಿದ್ದಾರೆ. 1046 ಜನ
ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ತಾಲೂಕಿಗೆ ಹೊರ ಜಿಲ್ಲೆಯಿಂದ ಬರುವವರ ಸಂಖ್ಯೆ ಜಾಸ್ತಿಯಾಗುತ್ತಿದೆ. ಅಂತಹವರ ಆರೋಗ್ಯ ತಪಾಸಣೆ ಮಾಡಿ, ಹೋಂ ಕ್ವಾರಂಟೈನ್‌ನಲ್ಲಿರಿಸಲಾಗಿದೆ ಎಂದು ತಿಳಿಸಿದರು. ತಹಶೀಲ್ದಾರ್‌ ಪರಮೇಶ್‌, ತಾ.ಪಂ. ಇಒ ನಯನ, ಸಿಪಿಐ ಸುರೇಶ್‌, ಶಿರಸ್ತೇದಾರ್‌ ನಾಗೇಂದ್ರನಾಯ್ಕ, ಮೆಸ್ಕಾಂ ಎಇಇ ಗೌತಮ್‌ ಇತರರು ಹಾಜರಿದ್ದರು.

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.