30 ಕೋಟಿ ಬಡವರಿಗೆ 29 ಸಾವಿರ ಕೋಟಿ: ಕೇಂದ್ರ
Team Udayavani, Apr 14, 2020, 7:27 PM IST
ಪಿಎಂ ಕಿಸಾನ್ ಯೋಜನೆಯನ್ವಯ, 6.93 ಕೋಟಿ ರೈತರಿಗೆ 13,855 ಕೋಟಿ ರೂ. ಮೊತ್ತವನ್ನು ವರ್ಗಾವಣೆ ಮಾಡಲಾಗಿದೆ.
ನವದೆಹಲಿ: ಇದುವರೆಗೆ 27 ರಾಜ್ಯಗಳ 78 ಸಾವಿರ ಸ್ವಸಹಾಯ ಸಂಘಗಳ ಸದಸ್ಯರು ಒಟ್ಟು 1.96 ಕೋಟಿ ಮಾಸ್ಕ್ ಗಳನ್ನು ತಯಾರಿಸಿಕೊಟ್ಟಿದ್ದಾರೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಪ್ಯಾಕೇಜ್ ಅನ್ವಯ, ಸುಮಾರು 30 ಸಾವಿರ ಬಡವರಿಗೆ ಏ.10ರವರೆಗೆ 28,256 ಕೋಟಿ ರೂ.ಗಳ ಆರ್ಥಿಕ ನೆರವು ನೀಡಲಾಗಿದೆ. ಪಿಎಂ ಕಿಸಾನ್ ಯೋಜನೆಯನ್ವಯ, 6.93 ಕೋಟಿ ರೈತರಿಗೆ 13,855 ಕೋಟಿ ರೂ. ಮೊತ್ತವನ್ನು ವರ್ಗಾವಣೆ ಮಾಡಲಾಗಿದೆ. ಜತೆಗೆ, ವಿಧವೆಯರು, ಹಿರಿಯ ನಾಗರಿಕರು ಮತ್ತು ದಿವ್ಯಾಂಗರಿಗೂ ಆರ್ಥಿಕ ನೆರವು ಒದಗಿಸಲಾಗಿದೆ ಎಂದೂ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ಸಾಧನ-ಸಲಕರಣೆಗಳಿವೆ: ಇನ್ನೂ 6 ದಿನಗಳ ಕಾಲ ಸ್ಯಾಂಪಲ್ ಗಳ ಪರೀಕ್ಷೆ ನಡೆಸಲು ಅಗತ್ಯವಾದ ಎಲ್ಲ ಸಾಧನಗಳೂ ಸರ್ಕಾರದ ಬಳಿಯಿದೆ. ಈವರೆಗೆ ಸುಮಾರು 2 ಲಕ್ಷ ಸ್ಯಾಂಪಲ್ ಗಳನ್ನು ಪರೀಕ್ಷಿಸಲಾಗಿದೆ ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ತಿಳಿಸಿದ್ದಾರೆ. ಜತೆಗೆ, ಏ.15ರಂದು ಚೀನಾದಿಂದ ಪರೀಕ್ಷಾ ಕಿಟ್ಗಳು ಬಂದು ತಲುಪುವ ನಿರೀಕ್ಷೆಯಿದೆ ಎಂದಿದ್ದಾರೆ.
ರೆಮ್ ಡೆಸಿವಿಯರ್ ಪರಿಣಾಮಕಾರಿ?
ಎಬೊಲಾ ವೈರಸ್ ಸೋಂಕಿತರಿಗೆ ನೀಡಲಾಗುವ ಆಂಟಿ-ವೈರಲ್ ಔಷಧವಾದ ರೆಮ್ ಡೆಸಿವಿಯರ್, ಕೋವಿಡ್ ಸೋಂಕಿನ ವಿರುದ್ಧವೂ ಪರಿಣಾಮಕಾರಿಯಾಗಬಹುದು ಎಂದು ಐಸಿಎಂಆರ್ನ ಡಾ.ಆರ್.ಆರ್.ಗಂಗಾಖೇಡ್ಕರ್ ಸೋಮವಾರ ಹೇಳಿದ್ದಾರೆ. ಈ ಔಷಧವನ್ನು ಈ ಹಿಂದೆ ಎಬೊಲಾ ವೈರಸ್ ಸೋಂಕಿತ ವ್ಯಕ್ತಿಗಳ ಮೇಲೆ ಪ್ರಯೋಗಿಸಲಾಗಿತ್ತು.
ಜತೆಗೆ ಮರ್ಸ್ ಮತ್ತು ಸಾರ್ಸ್ ಸೋಂಕಿತರ ಮೇಲೂ ಇದು ಸಕಾರಾತ್ಮಕ ಫಲಿತಾಂಶ ನೀಡಿತ್ತು. ಕಳೆದ ತಿಂಗಳು ವಿಶ್ವ ಆರೋಗ್ಯ ಸಂಸ್ಥೆಯು ಈ ಔಷಧವನ್ನು ಕೋವಿಡ್ ಸೋಂಕಿತರ ಮೇಲೆ ಪ್ರಯೋಗ ಮಾಡಿದ್ದು, ವೆಂಟಿಲೇಟರ್ ಅಗತ್ಯವಿದ್ದ ಮೂವರ ಪೈಕಿ ಇಬ್ಬರು ರೋಗಿಗಳಿಗೆ ಇದರಿಂದ ಅನುಕೂಲ ಆಯಿತು ಎಂದೂ ಗಂಗಾಖೇಡ್ಕರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ
Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ ಹತ್ಯೆ; ಆಪ್ತರ ಮೇಲೆ ಶಂಕೆ
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?
ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ