ಪತ್ರಿಕೋದ್ಯಮದ ರಕ್ಷಣೆಗೆ ಮುಂದಾಗಿ: ಕೇಂದ್ರಕ್ಕೆ ಐಎನ್‌ಎಸ್‌ ಮನವಿ

ಜಾಹೀರಾತು ಬಾಕಿ ಪಾವತಿಗೆ ಕೋರಿಕೆ

Team Udayavani, Apr 15, 2020, 6:51 AM IST

ಪತ್ರಿಕೋದ್ಯಮದ ರಕ್ಷಣೆಗೆ ಮುಂದಾಗಿ: ಕೇಂದ್ರಕ್ಕೆ ಐಎನ್‌ಎಸ್‌ ಮನವಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಪತ್ರಿಕೆಗಳಿಗೆ ಜಾಹೀರಾತಿನಿಂದ ಬರುತ್ತಿದ್ದ ಆದಾಯ ನಿಂತಿದೆ. ಹೀಗಾಗಿ, ಕೇಂದ್ರ ಸರಕಾರ ತಕ್ಷಣ ಮಧ್ಯ ಪ್ರವೇಶಿಸಿ, ಆರ್ಥಿಕ ನೆರವು ಕಲ್ಪಿಸಬೇಕು. ಆ ಮೂಲಕ ಪತ್ರಿಕೋದ್ಯಮದ ರಕ್ಷಣೆಗೆ ಮುಂದಾಗಬೇಕು ಎಂದು ಐಎನ್‌ಎಸ್‌ (ಇಂಡಿಯನ್‌ ನ್ಯೂಸ್‌ ಪೇಪರ್‌ ಸೊಸೈಟಿ) ಕೇಂದ್ರಕ್ಕೆ ಲಿಖಿತ ಮನವಿ ಸಲ್ಲಿಸಿದೆ.

ಎರಡು ವರ್ಷಗಳ ತೆರಿಗೆ ರಜೆ ಘೋಷಿಸಬೇಕು. ನ್ಯೂಸ್‌ಪ್ರಿಂಟ್‌ (ವೃತ್ತ ಪತ್ರಿಕೆ ಕಾಗದ) ಮೇಲಿನ ಆಮದು ಸುಂಕವನ್ನು (ಶೇ.5ರಷ್ಟು) ರದ್ದು ಮಾಡಬೇಕು. ಡಿಎವಿಪಿ (ಜಾಹೀರಾತು ಮತ್ತು ದೃಶ್ಯ ಪ್ರಸಾರದ ನಿರ್ದೇಶನಾಲಯ) ಜಾಹೀರಾತು ದರದಲ್ಲಿ ಶೇ.50ರಷ್ಟು ಏರಿಕೆ ಮಾಡಬೇಕು, ಮುದ್ರಣ ವಲಯಕ್ಕಾಗಿ ಬಜೆಟ್‌ನಲ್ಲಿ ಮೀಸಲಿರಿಸಲಾದ ಹಣವನ್ನು ಸಂಪೂರ್ಣ ಬಳಸಬೇಕು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆಯ ಕಾರ್ಯದರ್ಶಿ ರವಿ ಮಿಟ್ಟಲ್‌ ಅವರಿಗೆ ಸಲ್ಲಿಸಲಾದ ಲಿಖಿತ ಮನವಿಯಲ್ಲಿ ಒತ್ತಾಯಿಸಿದೆ. ಅಲ್ಲದೆ, ಕೇಂದ್ರ ಸರಕಾರ, ಜಾಹೀರಾತಿನ ಬಾಕಿ ಹಣವನ್ನು ತಕ್ಷಣವೇ ಪಾವತಿಸಬೇಕು. ಜೊತೆಗೆ, ಬಾಕಿ ಹಣ ಪಾವತಿ ಮಾಡುವಂತೆ ರಾಜ್ಯ ಸರಕಾರಗಳಿಗೂ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಿದೆ.

ಕೋವಿಡ್ 19 ವೈರಸ್ ನಿಂದಾದ ಲಾಕ್‌ಡೌನ್‌, ಜಾಹೀರಾತು ಆದಾಯದಲ್ಲಿನ ಇಳಿಕೆ ಹಾಗೂ ನ್ಯೂಸ್‌ಪ್ರಿಂಟ್‌ ಮೇಲಿನ ಆಮದು ಸುಂಕಗಳ ಹೊರೆಯಿಂದಾಗಿ ಪತ್ರಿಕೋದ್ಯಮ ತೀವ್ರ ಸಂಕಷ್ಟದ ಸಮಯ ಎದುರಿಸುತ್ತಿದೆ. ಇದೇ ವೇಳೆ, ನಿರ್ವಹಣಾ ಖರ್ಚು-ವೆಚ್ಚದ ಪ್ರಮಾಣ ಹೆಚ್ಚಾಗಿದ್ದು, ದೇಶೀಯ ಪತ್ರಿಕೋದ್ಯಮ ಅಲ್ಪಕಾಲದಲ್ಲಿಯೇ ಅವನತಿ ಕಾಣುವ ಪರಿಸ್ಥಿತಿ ಎದುರಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಪತ್ರಿಕೆಗಳು ಪುಟಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿವೆ. ವಾರಾಂತ್ಯದ ಪುರವಣಿಗಳನ್ನು ಮುಖ್ಯ ಆವೃತ್ತಿಯ ಜೊತೆ ಸೇರಿಸಿ ಪ್ರಕಟಿಸುತ್ತಿವೆ. ಈ ಎಲ್ಲಾ ಕ್ರಮಗಳ ಹೊರತಾಗಿಯೂ ಪತ್ರಿಕೆಗಳು ಪ್ರತಿದಿನ ಆರ್ಥಿಕ ನಷ್ಟ ಅನುಭವಿಸುತ್ತಿವೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಆಹಾರ ಪದಾರ್ಥಗಳು, ಹಾಲು, ದಿನಸಿ ಪದಾರ್ಥಗಳನ್ನು ಗ್ರಾಹಕರು ಅವುಗಳ ಮೇಲಿನ ಸಂಪೂರ್ಣ ಬೆಲೆ ನೀಡಿ ಖರೀದಿಸುತ್ತಾರೆ. ಆದರೆ, ಪತ್ರಿಕೆಗಳು ತಮ್ಮ ವೆಚ್ಚದ ಒಂದು ಭಾಗವನ್ನು ಮಾತ್ರ ಚಂದಾದಾರರಿಂದ ವಸೂಲು ಮಾಡುತ್ತವೆ. ಉಳಿದ ವೆಚ್ಚವನ್ನು ಜಾಹೀರಾತಿನ ಆದಾಯದ ಮೂಲಕವೇ ಸರಿದೂಗಿಸಿಕೊಳ್ಳಬೇಕು. ಆದರೆ, ಈಗ ಜಾಹೀರಾತಿನಿಂದ ಬರುತ್ತಿದ್ದ ಆದಾಯ ಗಣನೀಯ ಪ್ರಮಾಣದಲ್ಲಿ ಕುಸಿದಿದೆ.

ಈಗಾಗಲೇ ಹಲವು ಸಣ್ಣ ಮತ್ತು ಮಧ್ಯಮ ಗಾತ್ರದ ಪತ್ರಿಕೆಗಳು ಪ್ರಕಟಣೆಯನ್ನು ಸ್ಥಗಿತಗೊಳಿಸಿವೆ. ಉಳಿದವು ತೀವ್ರ ಸಂಕಷ್ಟದ ಸ್ಥಿತಿ ಎದುರಿಸುತ್ತಿವೆ. ಇವು ಪ್ರಕಟಣೆಯನ್ನು ನಿಲ್ಲಿಸಿದರೆ ಅದನ್ನು ನಂಬಿಕೊಂಡು ಜೀವನ ಸಾಗಿಸುತ್ತಿರುವ ನೌಕರರು, ಅವರ ಕುಟುಂಬದವರು ಕೆಲಸ ಕಳೆದುಕೊಳ್ಳಲಿದ್ದಾರೆ. ಮುದ್ರಣಾಲಯಗಳು, ಸಂಬಂಧಿತ ಉದ್ದಿಮೆಗಳು, ಪತ್ರಿಕಾ ಮಾರಾಟಗಾರರು, ವಿತರಣಾ ಹುಡುಗರು ಸೇರಿದಂತೆ ಹಲವು ಮಂದಿ ಸಂಕಷ್ಟಕ್ಕೆ ಈಡಾಗುತ್ತಾರೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು

Allu Arjun: ಯೂಟ್ಯೂಬ್‌ನಲ್ಲಿ ಧೂಳೆಬ್ಬಿಸಿ ದಾಖಲೆ ಬರೆದ ʼಪುಷ್ಪ ಪುಷ್ಪʼ ಹಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

Hamida Banu: ಭಾರತದ ಮೊದಲ ಮಹಿಳಾ ಕುಸ್ತಿಪಟು ಹಮೀದಾ ಬಾನುಗೆ ಗೂಗಲ್‌ ಡೂಡಲ್‌ ಗೌರವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.