ಫೀಲ್ಡ್‌ ನರ್ಸ್‌ಗಳಿಂದ ನಿತ್ಯ ಹತ್ತಾರು ಕಿ.ಮೀ. ಕಾಲ್ನಡಿಗೆ

ಕೋವಿಡ್-19 ಹೋರಾಟದಲ್ಲಿ ಸಕ್ರಿಯರಾಗಿದ್ದರೂ ವಾಹನ ವ್ಯವಸ್ಥೆ ಇಲ್ಲದೆ ಪರದಾಟ

Team Udayavani, Apr 15, 2020, 9:20 AM IST

ಫೀಲ್ಡ್‌ ನರ್ಸ್‌ಗಳಿಂದ ನಿತ್ಯ ಹತ್ತಾರು ಕಿ.ಮೀ. ಕಾಲ್ನಡಿಗೆ

ಸಿದ್ದಾಪುರ: ಆಶಾ ಕಾರ್ಯಕರ್ತೆಯರು ಮನೆಗಳಿಗೆ ತೆರಳಿ ಕೋವಿಡ್-19 ಜಾಗೃತಿ ಮೂಡಿಸಿದರು.

ಮಂಗಳೂರು: ಕೋವಿಡ್-19 ವಿರುದ್ಧ ಹೋರಾಟ ನಡೆಸುತ್ತಿರುವ ತಂಡದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಮಹಿಳಾ ಆರೋಗ್ಯ ಸಹಾಯಕಿಯರು ದಿನನಿತ್ಯ ಕಾಲ್ನಡಿಗೆಯಲ್ಲೇ ಹತ್ತಾರು ಕಿ.ಮೀ. ಸುತ್ತುತ್ತಿದ್ದಾರೆ. ವಾಹನದ ವ್ಯವಸ್ಥೆ ಇಲ್ಲದೆ ಪರದಾಡುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮಹಿಳಾ ಆರೋಗ್ಯ ಸಹಾಯಕಿಯರು ತಮ್ಮ ಕೇಂದ್ರದ ವ್ಯಾಪ್ತಿಯ ಗ್ರಾಮಗಳಿಗೆ ತೆರಳಿ ಜನರ ಆರೋಗ್ಯದ ಮೇಲೆ ನಿರಂತರ ನಿಗಾ ಇರಿಸುತ್ತಿದ್ದಾರೆ. ಇವರನ್ನು “ಫೀಲ್ಡ್‌ ನರ್ಸ್‌’ ಎನ್ನುತ್ತಾರೆ. ಪ್ರತಿಯೊಬ್ಬರಿಗೂ ಒಂದೆರಡು ಗ್ರಾಮಗಳ ಜವಾಬ್ದಾರಿ ಇರುತ್ತದೆ. ಸಿಬಂದಿ ಕೊರತೆ ಇದ್ದರೆ ಗ್ರಾಮಗಳ ಸಂಖ್ಯೆಯೂ ಹೆಚ್ಚುತ್ತದೆ. ಇದೀಗ ಫೀಲ್ಡ್‌ ನರ್ಸ್‌ಗಳು ಒಂದು ತಿಂಗಳಿನಿಂದ ಒಂದು ದಿನವೂ ಬಿಡುವಿಲ್ಲದೆ, ರಜೆ ಇಲ್ಲದೆ ಕೋವಿಡ್-19  ನಿಯಂತ್ರಣ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ. ಆದರೆ ಹಲವೆಡೆ ವಾಹನವಿಲ್ಲದೆ ನಡೆದೆ ಹೋಗಬೇಕು. ಬಿಸಿಲಿನ ಬೇಗೆಯಿಂದ ಬಳಲಿದ್ದು, ವಾಹನಗಳಿಗಾಗಿ ಮನವಿ ಮಾಡಿದ್ದಾರೆ.

ಗ್ರಾಮಾಂತರದಲ್ಲಿ ಭಾರೀ ಸವಾಲು
ಕಾಡು, ಗುಡ್ಡ, ತೋಡು, ನಿರ್ಜನ ರಸ್ತೆಗಳು, ಏರುತಗ್ಗುಗಳನ್ನು ದಾಟಿ ಮನೆ ಮನೆಗಳನ್ನು ತಲುಪುವ ದೊಡ್ಡ ಸವಾಲು ಇವರ ಮುಂದಿದೆ. ಇಲಾಖೆಯಿಂದ ವಾಹನದ ವ್ಯವಸ್ಥೆ ಇಲ್ಲ. ಸಾಮಾನ್ಯ ದಿನಗಳಲ್ಲಿ ನಿಗದಿತವಾಗಿ ಮನೆಗಳಿಗೆ ಭೇಟಿ ನೀಡುತ್ತಾರೆ. ಅನಾರೋಗ್ಯಕ್ಕೆ ಒಳಗಾದವರು ಇದ್ದಲ್ಲಿ ಮನೆ ಭೇಟಿ ಜಾಸ್ತಿ. ಪ್ರಸ್ತುತ ಕೊರೊನಾ ನಿರ್ವಹಣೆಯ ಜವಾಬ್ದಾರಿಯೂ ಹೆಗಲೇರಿದೆ. ವಿದೇಶದಿಂದ, ನಗರ ಪ್ರದೇಶಗಳಿಂದ ಬಂದವರ ಕ್ವಾರಂಟೈನ್‌ ಗಮನಿಸಬೇಕು. ಜ್ವರ ಇರುವವರನ್ನು ಗುರುತಿಸುವುದಕ್ಕಾಗಿ “ಫಿವರ್‌ ಸರ್ವೆ’ ಆರಂಭವಾಗಿದೆ. ಕೆಲವೆಡೆ ಒಬ್ಬರು ಫೀಲ್ಡ್‌ ನರ್ಸ್‌ಗೆ ದಿನಕ್ಕೆ ಕನಿಷ್ಠ 50 ಮನೆಗಳ ಸರ್ವೆ ಗುರಿ ನಿಗದಿಪಡಿಸಲಾಗಿದೆ. ಇವರೊಂದಿಗೆ ಆಶಾ ಕಾರ್ಯಕರ್ತೆಯರೂ ಇರುತ್ತಾರೆ.

ನಿವೃತ್ತಿಯ ಅಂಚಿನಲ್ಲೂ ಕ್ಷೇತ್ರ ಕಾರ್ಯ
ಫೀಲ್ಡ್‌ ನರ್ಸ್‌ಗಳ ಪೈಕಿ ಮಧ್ಯ ವಯಸ್ಸಿನವರು ಹಲವರಿದ್ದಾರೆ. ಕೆಲವರು ನಿವೃತ್ತಿ ಅಂಚಿನಲ್ಲಿದ್ದಾರೆ. ಇನ್ನು ಕೆಲವರು ಸ್ವತಃ ಬಿಪಿ, ಮಧುಮೇಹದಂತಹ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಕೆಲವು ಮನೆಗಳು ಆರೋಗ್ಯ ಕೇಂದ್ರದಿಂದ ತುಂಬ ದೂರದಲ್ಲಿರುತ್ತವೆ. ಕೊರೊನಾ ಸೋಂಕಿನ ಲಕ್ಷಣಗಳಿದ್ದಾಗ ಮಾಹಿತಿ ನೀಡಿದರೆ ಆರೋಗ್ಯ ಇಲಾಖೆ ವಾಹನ ಕಳುಹಿಸಿ, ಅಂಥವರನ್ನು ಆಸ್ಪತ್ರೆಗೆ ಕರೆದೊಯ್ಯುತ್ತದೆ. ಈಗ ಲಾಕ್‌ಡೌನ್‌ ಇರುವುದರಿಂದ ಆಟೋ ರಿಕ್ಷಾಗಳೂ ಸಿಗುತ್ತಿಲ್ಲ. ನಮಗಾಗಿ ವಾಹನಗಳಿಲ್ಲ ಎನ್ನುತ್ತಾರೆ, ಫೀಲ್ಡ್ ನರ್ಸ್‌ಗಳು.

ಸಂಘ ಸಂಸ್ಥೆಗಳು ನೆರವಾಗಬಹುದು ಕೆಲವು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಾಹನಗಳ ವ್ಯವಸ್ಥೆ ಇಲ್ಲ. ಫೀಲ್ಡ್‌ ನರ್ಸ್‌ಗಳು ಮನೆ ಮನೆಗಳಿಗೆ ತೆರಳಲು ಸೇವಾ ಸಂಸ್ಥೆಗಳು ವಾಹನ ವ್ಯವಸ್ಥೆ ಮಾಡಿ ಸಹಕರಿಸಬಹುದು. ಇಲಾಖೆಯ ಎಲ್ಲ ಅಧಿಕಾರಿ, ಸಿಬಂದಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಸಾರ್ವಜನಿಕರೂ ಹಲವು ರೀತಿಯಲ್ಲಿ ಸಹಕರಿಸುತ್ತಿದ್ದಾರೆ. ಸಿಬಂದಿಗೆ ಸಾಧ್ಯವಿರುವಲ್ಲಿ ವಾಹನ ವ್ಯವಸ್ಥೆಯನ್ನು ವೈದ್ಯಾಧಿಕಾರಿಗಳು ಮಾಡಿಕೊಡುತ್ತಿದ್ದಾರೆ.
– ಡಾ| ಸುಧೀರ್‌ಚಂದ್ರ ಸೂಡ, ಡಿಎಚ್‌ಒ, ಉಡುಪಿ

ವೈದ್ಯಾಧಿಕಾರಿಗಳ ಜವಾಬ್ದಾರಿ
ಫೀಲ್ಡ್‌ ನರ್ಸ್‌ ಗಳಿಗೆ ಪ್ರತ್ಯೇಕ ವಾಹನ ವ್ಯವಸ್ಥೆ ಇರುವುದಿಲ್ಲ. ಅವರ ಬಳಿ ಸ್ಕೂಟಿಯಂತಹ ದ್ವಿಚಕ್ರ ವಾಹನವಿದ್ದರೆ ಬಳಸುತ್ತಾರೆ. ಅಂಥವರಿಗೆ ಪೊಲೀಸರು ಪಾಸ್‌ ನೀಡುವಂತೆ ಸೂಚಿಸಲಾಗಿದೆ. ವಾಹನ ವ್ಯವಸ್ಥೆ ಮಾಡುವ ಜವಾಬ್ದಾರಿ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳದ್ದು. ರೂಟ್‌ ಮ್ಯಾಪ್‌ ಮಾಡಿ ವಾಹನ ವ್ಯವಸ್ಥೆ ಮಾಡಿಸಬಹುದು. ಬಿಟ್ಟು ಸಂಜೆ ವಾಪಸ್‌ ಕರೆತರುವ ವ್ಯವಸ್ಥೆ ಮಾಡಬೇಕು. ಸಂಘ ಸಂಸ್ಥೆಗಳು ಸಹಕಾರ ನೀಡಿದರೆ ಸಂತೋಷ.
– ಡಾ | ರಾಮಚಂದ್ರ ಬಾಯರಿ, ಡಿಎಚ್‌ಒ, ದ.ಕ.

ಟಾಪ್ ನ್ಯೂಸ್

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.