ಮದರಸಾ ಮುಂಭಾಗ ಕರ್ತವ್ಯ ನಿರ್ವಹಿಸಿದ್ದ ಗುಪ್ತವಾರ್ತೆ ಪೊಲೀಸ್ ಪೇದೆಗೆ ಸೋಂಕು
Team Udayavani, Apr 15, 2020, 2:48 PM IST
ಬಾಗಲಕೋಟೆ : ಜಿಲ್ಲೆಯ ಮುಧೋಳ ಸಿಪಿಐ ಕಚೇರಿಯಲ್ಲಿ ಗುಪ್ತ ವಾರ್ತೆ ಸಿಬ್ಬಂಧಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಗೂ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಇದರಿಂದ ಲಾಕ್ ಡೌನ್ ಕಡ್ಡಾಯ ಅನುಷ್ಠಾನಕ್ಕಾಗಿ ಕೋವಿಡ್-19 ವಿರುದ್ಧ ಹೋರಾಡುತ್ತಿದ್ದ ಪೊಲೀಸರಲ್ಲೂ ಭೀತಿ ಹೆಚ್ಚಿದೆ.
ರಾಜ್ಯ ಸರ್ಕಾರ ಬುಧವಾರ ಮಧ್ಯಾಹ್ನ ಕೋವಿಡ್-19 ಸೋಂಕಿತರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರೋಗಿ
ಸಂಖ್ಯೆ ಪಿ-262ನೇ ವ್ಯಕ್ತಿ, ಮುಧೋಳದಲ್ಲಿ ಸೋಂಕು ತಗುಲಿದ ಇಬ್ಬರು ವ್ಯಕ್ತಿಗಳಿದ್ದ ಮದರಸಾ ಸುತ್ತ ಕರ್ತವ್ಯ ನಿರ್ವಹಿಸುತ್ತಿದ್ದ 39 ವರ್ಷದ ಪೊಲೀಸ್ ಪೇದೆಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಪೇದೆ ಮೂಲತಃಜಮಖಂಡಿಯವರಾಗಿದ್ದು, ಮುಧೋಳದ ಸಿಪಿಐ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾ.27ರಂದು ಮದರಸಾದಲ್ಲಿ ಲಾಕ್ ಡೌನ್ ಉಲ್ಲಂಘಿಸಿ, ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಮೊದಲಿಗೆ ಅಲ್ಲಿಗೆ ಭೇಟಿ ನೀಡಿ, ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಇದೇ ಪೇದೆ. ಅಲ್ಲದೇ ಜಮಖಂಡಿಂದ ನಿತ್ಯ ಮುಧೋಳಕ್ಕೆ ಬಂದು ಹೋಗುತ್ತಿದ್ದ ಅವರು, ಜಮಖಂಡಿಯಲ್ಲಿ ಮನೆ ಹೊಂದಿದ್ದಾರೆ. ಈಗ ಪೇದೆಗೆ ಸೋಂಕು ಖಚಿತವಾದ ಹಿನ್ನೆಲೆಯಲ್ಲಿ ಅವರ ಮನೆಯವರು, ಇಲಾಖೆಯಲ್ಲಿ ಕೆಲಸ ಮಾಡುವಾಗ ಅವರೊಂದಿಗೆ ನೇರ, ಪ್ರಾಥಮಿಕ ಹಾಗೂ ದ್ವಿತೀಯ ಹಂತದಲ್ಲಿ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರನ್ನೂ ತಪಾಸಣೆಗೆ ಒಳಪಡಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು, ಈಗಾಗಲೇ ಪ್ರಥಮ ಹಂತದಲ್ಲಿ ಸಂಪರ್ಕದಲ್ಲಿದ್ದ ವ್ಯಕ್ತಿಗಳ ಗಂಟಲು ಮಾದರಿ ಪಡೆದು, ಪರೀಕ್ಷೆಗೆ ರವಾನಿಸಲಾಗುತ್ತಿದೆ.
ಕಳೆದ ಎರಡು ದಿನಗಳಿಂದ ತೀವ್ರ ಜ್ವರ ಹಾಗೂ ನಿರಂತರ ಸೀನುವ ಸಮಸ್ಯೆಗೆ ಒಳಗಾಗಿದ್ದ ಪೊಲೀಸ್ ಪೇದೆಗೆ ಜಮಖಂಡಿಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕೋವಿಡ್-19 ಶಂಕೆ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಪರೀಕ್ಷೆಗೆ ಒಳಪಡಿಸಿದ್ದು, ಕೋವಿಡ್-19 ಖಚಿತಪಟ್ಟಿದೆ. ಸಧ್ಯ ಅವರನ್ನು ಜಿಲ್ಲಾ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟ್ಯೂಶನ್ ಹೇಳುವ ಶಿಕ್ಷಕಿ ಪತಿಗೆ ಸೋಂಕು :
ಬಾಗಲಕೋಟೆ ಹಳೆಯ ನಗರದಲ್ಲಿ ಈಗಾಗಲೇ 10 ಸೋಂಕು ಪ್ರಕರಣ ಪತ್ತೆಯಾದ ಪ್ರದೇಶದಲ್ಲೇ ಬುಧವಾರ ಮತ್ತೊಂದು ಪ್ರಕರಣ ಪತ್ತೆಯಾಗಿದೆ. ಕಳೆದ ಏ.9ರಂದು ಕೋವಿಡ್-19 ಖಚಿತಪಟ್ಟ ರೋಗಿ ಸಂಖ್ಯೆ ಪಿ 186 ನ ನಾಲ್ಕು ವರ್ಷದ ಮಗುವಿನೊಂದಿಗೆ ಸಂಪರ್ಕವಿದ್ದ 52 ವರ್ಷದ ಪುರುಷ (ಪಿ262)ನಿಗೂ ಸೋಂಕು ಖಚಿತಪಟ್ಟಿದೆ. ಈ ಪುರುಷನ ಪತ್ನಿ ಮನೆಯಲ್ಲಿ ಮಕ್ಕಳಿಗೆ ಟ್ಯೂಶನ್ ಹೇಳುತ್ತಿದ್ದರು. ಈ ಪುರುಷನ ಪತ್ನಿಗೂ ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಒಟ್ಟಾರೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಈ ವರೆಗೆ ಒಟ್ಟು 14 ಜನರಿಗೆ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಒಬ್ಬ ವೃದ್ಧ ಮೃತಪಟ್ಟಿದ್ದಾನೆ. ಇದೀಗ ಟ್ಯೂಶನ್ ಹೇಳುವ ಮಹಿಳೆಯ ಪತಿ ಹಾಗೂ ಮುಧೋಳದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಪೇದೆಗೆ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಜನರನ್ನು ತಪಾಸಣೆಗೆ ಒಳಪಡಿಸಬೇಕಾದ ತುರ್ತು ಅನಿವಾರ್ಯತೆ ಜಿಲ್ಲಾಡಳಿತಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು
Pen Drive Case ಪ್ರಜ್ವಲ್ಗೆ ಕೇಂದ್ರದಿಂದ ರಕ್ಷಣೆ: ಸಿದ್ದರಾಮಯ್ಯ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ
ಬಿಜೆಪಿ ಶಾಸಕ ಯತ್ನಾಳ ಶುಗರ್ ಫ್ಯಾಕ್ಟ್ರಿ ಹೆಂಗ್ ಕಟ್ಟಿದ್ರು: ಶಿವಾನಂದ ಪಾಟೀಲ
MUST WATCH
ಹೊಸ ಸೇರ್ಪಡೆ
Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ
Gayatri Siddeshwar: “ರಾಹುಲ್ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’
B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್
BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ
Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು