ಅಂಚೆ ಇಲಾಖೆ ಈಗ ಔಷಧ ರವಾನೆಗೂ ಸೈ

ಮೊಬೈಲ್‌ ರೀಚಾರ್ಜ್‌ ಸೇರಿದಂತೆ ವಿಶಿಷ್ಟ ಸೇವೆ

Team Udayavani, Apr 16, 2020, 5:57 AM IST

ಅಂಚೆ ಇಲಾಖೆ ಈಗ ಔಷಧ ರವಾನೆಗೂ ಸೈ

ಮಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಅಂಚೆ ಇಲಾಖೆಯು ಅಗತ್ಯ ಸೇವೆಗಳನ್ನು ನೀಡುತ್ತಿದ್ದು, ಮಂಗಳೂರು ವಿಭಾಗದಲ್ಲಿ ಎಲ್ಲ ಇಲಾಖಾ ಮತ್ತು ಶಾಖಾ ಅಂಚೆ ಕಚೇರಿಗಳು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿವೆ.

ಔಷಧ ಇತ್ಯಾದಿ ತುರ್ತು ಅಗತ್ಯದ ಸೇವೆಗಳು
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಯಾವುದೇ ಊರಿಗೆ ಅಂಚೆ ಮೂಲಕ ಔಷಧ ಮತ್ತು ತುರ್ತು ಅಗತ್ಯದ ವಸ್ತುಗಳನ್ನು ರವಾನಿಸಬಹುದಾಗಿದೆ. ಸಮೀಪದ ಜಿಲ್ಲೆಗಳಾದ ಶಿವಮೊಗ್ಗ, ಮೈಸೂರು, ಕೊಡಗು ಹಾಗೂ ಚಿಕ್ಕ ಮಗಳೂರು ಇತ್ಯಾದಿ ಊರುಗಳಿಗೂ ಔಷಧ ಮತ್ತು ಅಗತ್ಯ ವಸ್ತುಗಳನ್ನು ಕ್ಷಿಪ್ರವಾಗಿ ತಲುಪಿಸಲು ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಆದರೆ ನೆರೆಯ ಹಾಗೂ ಇತರ ರಾಜ್ಯಗಳಿಗೆ ಮಂಗಳೂರಿನಿಂದ ನೇರ ಸಾಗಾಣಿಕೆ ಇಲ್ಲದಿರುವುದರಿಂದ ಮಂಗಳೂರಿನಿಂದ ಬೆಂಗಳೂರಿನ ಮೂಲಕ ಕಳುಹಿಸಲಾಗುತ್ತಿದೆ. ಇದರಿಂದ ವಿಳಂಬವಾಗುವ ಸಾಧ್ಯತೆ ಇದೆ. ಇವುಗಳನ್ನು ರವಾನಿಸುವಾಗ ಅಂಚೆ ಕಚೇರಿಗೆ ತುರ್ತು ಅಗತ್ಯದ ಬಗ್ಗೆ ತಿಳಿಸಿದರೆ, ಶೀಘ್ರ ರವಾನೆ ಹಾಗೂ ಬಟವಾಡೆಯ ವ್ಯವಸ್ಥೆಗಳನ್ನು ಮಾಡಲು ಸಹಾಯಕವಾಗುತ್ತದೆ.

ಇ ಮನಿಯಾರ್ಡರ್‌ ಸೇವೆ
ಲಾಕ್‌ಡೌನ್‌ ಸಂದರ್ಭ ಕುಟುಂಬಿಕರಿಗೆ ಹಣ ಕಳಿಸುವ ಅಗತ್ಯ ಎಲ್ಲರಿಗೂ ಬರಬಹುದು. ಇದಕ್ಕಾಗಿ ಅಂಚೆ ಕಚೇರಿ ಯಲ್ಲಿ ವಿಶೇಷವಾದ ಇ ಮನಿಯಾರ್ಡರ್‌ ಸೇವೆ ಲಭ್ಯವಿದೆ. ಸಾರಿಗೆ ಸಂಪರ್ಕ ವ್ಯವಸ್ಥೆ ಇಲ್ಲದಿರುವುದು ಈ ಸೇವೆಯ ಮೇಲೆ ಪರಿಣಾಮ ಬೀರುವುದಿಲ್ಲ. ಎಲೆಕ್ಟ್ರಾನಿಕ್‌ ತಂತ್ರಜ್ಞಾನದ ಮೂಲಕ ಪಿನ್‌ ಕೋಡ್‌ ಆಧಾರಿತವಾಗಿ ಕಳುಹಿಸುವ ವ್ಯವಸ್ಥೆ ಇರುವುದರಿಂದ ದೇಶದ ಯಾವುದೇ ಭಾಗಕ್ಕೂ ಇ ಮನಿಯಾರ್ಡರ್‌ ಮಾಡ ಬಹುದು. ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳಲ್ಲಿ ಇ ಮನಿಯಾರ್ಡರ್‌ ಹಾಗೂ ಅಂಚೆ ಉಳಿತಾಯ ಖಾತೆ ಮೂಲಕ ಸಂಬಂಧಿಸಿದ ಫಲಾನುಭವಿ ಗಳಿಗೆ ಹಣವು ಅಂಚೆ ಕಚೇರಿಗಳಲ್ಲಿ ಪಾವತಿ ಯಾಗುತ್ತಿದ್ದು, ಕಳೆದ ಒಂದು ವಾರದಲ್ಲಿ ಸುಮಾರು 5,500 ಫಲಾನುಭವಿಗಳಿಗೆ ಇ ಮನಿಯಾರ್ಡರ್‌ಗಳನ್ನು ಮಂಗಳೂರು ವಿಭಾಗದಲ್ಲಿ ವಿತರಿಸಲಾಗಿದೆ. ಇನ್ನೂ ಸುಮಾರು 24,000 ಫಲಾನುಭವಿಗಳಿಗೆ ಈ ವಾರ ಇ ಮನಿಯಾರ್ಡರ್‌ಗಳನ್ನು ತಲುಪಿಸಲಾಗುವುದು.

ಸಾರ್ವಜನಿಕರಿಗೆ ಮತ್ತು ವಿವಿಧ ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ಇಲಾಖೆ ಕಾಳಜಿ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಇಲಾಖೆಗೆ ಸಹಕಾರ ನೀಡಬೇಕು. ಹೆಚ್ಚಿನ ಮಾಹಿತಿಗೆ ಬಲ್ಮಠ ವಿಭಾಗೀಯ ಕಚೇರಿಯ
ವಾಟ್ಸ್‌ಪ್‌ ಸಂಖ್ಯೆ 9448291072ಗೆ ಸಂದೇಶ ಕಳುಹಿಸಬಹುದು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರ ಪ್ರಕಟನೆ ತಿಳಿಸಿದೆ.

ಮೊಬೈಲ್‌, ಡಿ.ಟಿ.ಎಚ್‌. ರೀಚಾರ್ಜ್‌
ಲಾಕ್‌ಡೌನ್‌ ಅವಧಿಯಲ್ಲಿ ಹೆಚ್ಚಿನ ಅಂಗಡಿಗಳು ಮುಚ್ಚಿರು ವುದರಿಂದ ಮೊಬೈಲ್‌/ಡಿ.ಟಿ.ಎಚ್‌. ರೀಚಾರ್ಜ್‌ ಸೌಲಭ್ಯ ಗಳು ಕೂಡ ಅಂಚೆ ಕಚೇರಿಯಲ್ಲಿ ಲಭ್ಯವಿವೆ. ಇಂಡಿಯಾ ಪೋಸ್ಟ್‌ ಪೇಮೆಂಟ್ಸ್‌ ಬ್ಯಾಂಕ್‌ ಖಾತೆಯ ಮೂಲಕ ಗ್ರಾಹಕರು ತಮ್ಮ ಸಮೀಪದ ಅಂಚೆ ಕಚೇರಿಯಲ್ಲಿ ರೀಚಾರ್ಜ್‌ ಮಾಡಬಹುದು. ಮೊಬೈಲ್‌ ಬ್ಯಾಂಕಿಂಗ್‌ ಮೂಲಕ ಮನೆ ಯಲ್ಲೇ ಈ ಸೌಲಭ್ಯ ಪಡೆಯಬಹುದು ಎಂದು ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ವಿದ್ಯುತ್‌ ಬಿಲ್‌ ಪಾವತಿ
ಮಂಗಳೂರು ಅಂಚೆ ವಿಭಾಗದ ಎಲ್ಲ ಇಲಾಖಾ ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ವಿದ್ಯುತ್‌ ಬಿಲ್‌ ಪಾವತಿ ಸೇವೆ ಲಭ್ಯವಿದೆ. ಲಾಕ್‌ಡೌನ್‌ ಅವಧಿಯಲ್ಲಿ ಮೆಸ್ಕಾಂ ಬಿಲ್‌ ಬಾರದಿದ್ದರೂ ಗ್ರಾಹಕರು ತಮ್ಮ ಆರ್‌.ಆರ್‌. ನಂಬರ್‌ ಹಾಗೂ ಮೆಸ್ಕಾಂ ಸಬ್‌ ಡಿವಿಷನ್‌ ಮಾಹಿತಿಯನ್ನು ಅಂಚೆ ಕಚೇರಿಯಲ್ಲಿ ನೀಡಿ ಬಿಲ್‌ ಪಾವತಿಯನ್ನು ಮಾಡಬಹುದು.

ಬೆಳಗ್ಗೆ 10ರಿಂದ ಅಪರಾಹ್ನ 2ರ ವರೆಗೆ ಅಗತ್ಯ ಸೇವೆ
ವ್ಯವಹಾರದ ಸಂದರ್ಭ ಸಾರ್ವ ಜನಿಕರು ಅಂಚೆ ಕಚೇರಿಯಲ್ಲಿ ನೂಕು ನುಗ್ಗಲು ಉಂಟಾಗದಂತೆ ಹಾಗೂ ಕೊರೊನಾ ಮುನ್ನೆಚ್ಚರಿಕೆ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಎಲ್ಲ ಅಂಚೆ ಕಚೇರಿಗಳಲ್ಲಿ ಸದ್ಯಕ್ಕೆ ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಮಾತ್ರ ಅಗತ್ಯ ಅಂಚೆ ಸೇವೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.