ಕೋವಿಡ್ ಲಾಕ್ ಡೌನ್: ಲೂಡೋ ಆಡುವಾಗ ಕೆಮ್ಮಿದ್ದಕ್ಕೆ ಪಿಸ್ತೂಲ್ ನಿಂದ ಗುಂಡು ಹಾರಿಸಿದ!
ಉದ್ದೇಶಪೂರ್ವಕವಾಗಿಯೇ ತನಗೆ ಕೋವಿಡ್ ಸೋಂಕು ತಗುಲಿಸಬೇಕೆಂದು ಕೆಮ್ಮಿರುವುದಾಗಿ ಜಗಳ ತೆಗೆದಿದ್ದ.
Team Udayavani, Apr 15, 2020, 10:55 PM IST
ನೋಯ್ಡಾ:ಲೂಡೋ ಗೇಮ್ ಆಡುವ ಸಂದರ್ಭದಲ್ಲಿ 25 ವರ್ಷದ ಯುವಕ ಕೆಮ್ಮಿದ್ದಕ್ಕೆ ಕೋವಿಡ್ ಸೋಂಕು ಇದೆ ಎಂದು ಆರೋಪಿಸಿ ಗುಂಡು ಹೊಡೆದಿರುವ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ ದಯಾನಗರ್ ಗ್ರಾಮದ ಜಾರ್ಚಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಲ್ವರು ಒಟ್ಟಾಗಿ ಲೂಡೋ ಗೇಮ್ ಆಡುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿ ವಿವರಿಸಿದೆ.
ಪ್ರಶಾಂತ್ ಹಾಗೂ ಇತರ ಮೂವರು ಲೂಡೋ ಆಡುತ್ತಿದ್ದಾಗ ಗುಲ್ಲು ಎಂಬಾತ ಆಗಮಿಸಿದ್ದ. ಈ ವೇಳೆ ಪ್ರಶಾಂತ್ ಕೆಮ್ಮಿದ್ದ. ಇದರಿಂದ ಆಕ್ರೋಶಗೊಂಡ ಗುಲ್ಲು ಉದ್ದೇಶಪೂರ್ವಕವಾಗಿಯೇ ತನಗೆ ಕೋವಿಡ್ ಸೋಂಕು ತಗುಲಿಸಬೇಕೆಂದು ಕೆಮ್ಮಿರುವುದಾಗಿ ಜಗಳ ತೆಗೆದಿದ್ದ. ವಾಗ್ವಾದ ವಿಪರೀತಕ್ಕೆ ಹೋದಾಗ ಗುಲ್ಲು ಪಿಸ್ತೂಲ್ ನಿಂದ ಪ್ರಶಾಂತ್ ಗೆ ಶೂಟ್ ಮಾಡಿಬಿಟ್ಟಿರುವುದಾಗಿ ವರದಿ ತಿಳಿಸಿದೆ.
ಪ್ರಶಾಂತ್ ನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಗಳ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದ್ದು, ಅವರನ್ನು ಹಿಡಿಯಲು ತಂಡ ರಚಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!
Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ