ಭಾರತದಲ್ಲಿ 12 ಸಾವಿರ ಗಡಿ ದಾಟಿದ ಕೋವಿಡ್-19 ಪ್ರಕರಣಗಳು: 414 ಜನರು ಸಾವು
Team Udayavani, Apr 16, 2020, 9:29 AM IST
ನವದೆಹಲಿ: ಭಾರತದಲ್ಲಿ ಗುರುವಾರ ಬೆಳಗ್ಗೆಯ ವೇಳೆಗೆ ಕೋವಿಡ್ 19 ಪಾಸಿಟಿವ್ ಪ್ರಕರಣಗಳು 12,000 ಗಡಿ ದಾಟಿದೆ. ಮೃತರಾದವರ ಸಂಖ್ಯೆ ಕೂಡ 414 ತಲುಪಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಒಟ್ಟಾರೆ ಸೋಂಕಿತರ ಪ್ರಮಾಣ 12,380 ಜನರಿದ್ದು, ಇದರಲ್ಲಿ ಈಗಾಗಲೇ 1,488 ಜನರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 37 ಜನರು ಕೊನೆಯುಸಿರೆಳೆದಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ಜನರು ಈ ಮಾರಕ ವೈರಾಣುವಿಗೆ ತುತ್ತಾಗಿದ್ದು ಇಲ್ಲಿ 2,916 ಜನರು ಸೋಂಕಿತರಿದ್ದು 187 ಜನರು ಮೃತಪಟ್ಟಿದ್ದಾರೆ.
ದೆಹಲಿ ಎರಡನೇ ಅತೀ ಹೆಚ್ಚು ಸೋಂಕಿತರಿರುವ ಪ್ರದೇಶವಾಗಿದ್ದು 1,578 ಜನರು ಭಾಧಿತರಾಗಿದ್ದಾರೆ. ದುರಂತವೆಂದರೇ ಫಿಜ್ಜಾ ಡೆಲಿವರಿ ಬಾಯ್ ನಲ್ಲೂ ಸೋಂಕು ಕಂಡುಬಂದಿದ್ದು, ಈತನೊಂದಿಗೆ ಸಂಪರ್ಕಕ್ಕೆ ಬಂದಿದ್ದ 70 ಜನರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಮಾತ್ರವಲ್ಲದೆ ದೆಹಲಿಯ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಅವರಿಗೂ ಸೋಂಕು ತಗುಲಿರುವ ಪಾಸಿಟಿವ್ ವರದಿ ಬಂದಿದೆ.
ಕೇಂದ್ರ ಸರ್ಕಾರ ಮುಂಬೈ, ಕೊಲ್ಕತ್ತಾ, ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ 9 ಜಿಲ್ಲೆಗಳು, ಹೈದರಬಾದ್, ಚೆನ್ನೈ, ಜೈಪುರ, ಆಗ್ರಾ ಮುಂತಾದ ಪ್ರಮುಖ ಪ್ರದೇಶಗಳನ್ನು ಕೋವಿಡ್ 19 ಹಾಟ್ ಸ್ಪಾಟ್ ಗಳೆಂದು ಘೋಷಣೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ