ಕೋವಿಡ್ ಹೊಡೆತಕ್ಕೆ ಸಿಲುಕಿದ ಆಟ: ಭಾರತದಲ್ಲಿ ಟೆನ್ನಿಸ್ ಅಲ್ಲೋಲಕಲ್ಲೋಲ


Team Udayavani, Apr 16, 2020, 11:07 AM IST

ಕೋವಿಡ್ ಹೊಡೆತಕ್ಕೆ ಸಿಲುಕಿದ ಆಟ: ಭಾರತದಲ್ಲಿ ಟೆನ್ನಿಸ್ ಅಲ್ಲೋಲಕಲ್ಲೋಲ

‌ಮುಂಬೈ: ಕೋವಿಡ್-19 ವೈರಸ್‌ ಪರಿಣಾಮ ಯಾವ ರೀತಿಯಲ್ಲಿ ಆಗಿದೆ ಎಂದು ಎಲ್ಲರಿಗೂ ಗೊತ್ತು. ಬದುಕಿನ ಎಲ್ಲ ಹಾದಿಗಳು ಸದ್ಯ ಮುಚ್ಚಿ ಹೋಗಿವೆ. ಬಹುಶಃ ಮುಂದಿನ ದಿನಗಳಲ್ಲಿ ತಿನ್ನುವ ಅನ್ನವೂ ಇಲ್ಲವಾಗಬಹುದು. ಜಗತ್ತಿನ ಎಲ್ಲ ಕಡೆ ಹಾಹಾಕಾರ ಶುರುವಾಗಿ ಅಕ್ಷರಶಃ ಜನ ಅಂಧಕಾರದಲ್ಲಿ ಬದುಕಬೇಕಾಗಬಹುದು. ಆದರೆ ಕ್ರೀಡಾರಂಗದ ಕೆಲವು ಕಡೆ ಈಗಾಗಲೇ ಸಂಕಷ್ಟ ಶುರುವಾಗಿದೆ. ಹಾಗೆ ತಾಪತ್ರಯ ಪಡುತ್ತಿರುವ ಕ್ರೀಡೆಗಳಲ್ಲಿ ಟೆನಿಸ್‌ ಕೂಡ ಒಂದು. ದೇಶದಲ್ಲಿ ಟೆನಿಸ್‌ ಅಕಾಡೆಮಿ ನಡೆಸುತ್ತಿರುವವರು, ವೃತ್ತಿಪರ ಆಟಗಾರರು ಈಗ ಸಂಕಷ್ಟದಲ್ಲಿದ್ದಾರೆ. ಮುಂದೇನು ಎಂಬ ಚಿಂತೆ ಅವರನ್ನು ಕಾಡುತ್ತಿದೆ. ಕೋವಿಡ್-19 ಮುಗಿದ ಮೇಲಿನ ಸ್ಥಿತಿಗೆ ಅವರು ಈಗಲೇ ಅಂಜಿಕೊಳ್ಳುವಂತಹ ಸ್ಥಿತಿಯಿದೆ.

ಇತ್ತೀಚೆಗೆ ದೇಶದ ಮಣ್ಣಿನ ಕುಸ್ತಿಪಟುಗಳು ತೀರಾ ಸಂಕಷ್ಟಕ್ಕೊಳಗಾಗಿರುವುದು, ಗಾಲ್ಫ್ ಕ್ಲಬ್‌ಗಳ ಮಾಲೀಕರು, ಅಲ್ಲಿ ಕೆಲಸ ಮಾಡುವ ಕ್ಯಾಡಿಗಳು ಹಣಕ್ಕಾಗಿ ಪರಿತಪಿಸುವ ಸ್ಥಿತಿ ತಲುಪಿರುವುದು ವರದಿಯಾಗಿತ್ತು. ಈಗಿನ ಸ್ಥಿತಿ ಟೆನಿಸ್‌ನದ್ದು. ಸದ್ಯ ದೇಶ, ವಿದೇಶದಲ್ಲಿ ಟೆನಿಸ್‌ ನಡೆಯುತ್ತಿಲ್ಲ. ಹಾಗಂತ ಅಕಾಡೆಮಿಗಳ ಮಾಲೀಕರು ಸಂಬಳ ನೀಡದಿರಲು ಆಗುತ್ತಿಲ್ಲ!

ಆಟಗಾರರಿಗೆ ಭವಿಷ್ಯದ ಚಿಂತೆ
ಸದ್ಯ ಟೆನಿಸ್‌ನಲ್ಲಿ ಭಾರತದ ಭವಿಷ್ಯ ಎಂದು ಗುರ್ತಿಸಿಕೊಂಡಿರುವುದು ಪುರವ್‌ ರಾಜಾ, ದಿವಿಜ್‌ ಶರಣ್‌, ಪ್ರಜ್ಞೆಶ್‌ ಗುಣೇಶ್ವರನ್‌, ಜೀವನ್‌ ನೆಡುಂಚೆಜಿಯನ್‌, ಅಂಕಿತಾ ರೈನಾ ಇತ್ಯಾದಿ. ಇವರು ಯಾರೂ ಈಗ ಆಡುತ್ತಿಲ್ಲ. ಕೋವಿಡ್-19 ಮುಗಿದ ಮೇಲೆ ತಕ್ಷಣ ಕೂಟಗಳು ಶುರುವಾಗುತ್ತವೆ, ಇವರಿಗೆ ಆಡಲು ಸಾಧ್ಯವಾಗುತ್ತದೆ ಎಂಬ ಭರವಸೆಯೂ ಇಲ್ಲ. ಬರೀ ಪುರವ್‌ 38.27 ಲಕ್ಷ ರೂ. ಕಳೆದುಕೊಳ್ಳಲಿದ್ದಾರೆ.

ಇನ್ನುಳಿದ ಆಟಗಾರರ ಸ್ಥಿತಿಯೂ ಇದೇ ಆಗಿದೆ. ಇವರ ಆಟ ನಿಂತಿದೆ, ಗಳಿಕೆ ನಿಂತಿದೆ. ಆದರೆ ತರಬೇತಿಗಾಗಿ ಪಾವತಿ ಮಾಡಬೇಕಾದ ಹಣ, ಆಹಾರ, ಇನ್ನಿತರ ಸೌಲಭ್ಯಗಳಿಗಾಗಿ ಇವರ ಖರ್ಚು ನಿಲ್ಲುವುದೇ ಇಲ್ಲ. ಇದನ್ನು ತುಂಬಿಕೊಳ್ಳುವುದು ಹೇಗೆ ಎನ್ನುವುದೇ ಇಲ್ಲಿನ ಪ್ರಶ್ನೆ. ಇನ್ನೊಂದು ವಿಡಂಬನೆಯೆಂದರೆ ಮೇಲಿನ ಪಟ್ಟಿಯಲ್ಲಿರುವ ಯಾರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತರಲ್ಲ. ಪರಿಸ್ಥಿತಿ ಹೀಗಿರುವಾಗ ನಮ್ಮ ಮುಂದಿನ ದಾರಿಯೇನು ಎಂದು ಅವರು ಕೇಳುತ್ತಾರೆ. ಅದಕ್ಕಾಗಿ ಆಟಗಾರರ ಒಂದು ಸಂಘ ಕಟ್ಟುವುದು ಅವರ ಸಲಹೆ. ಹಾಗೆಯೇ ಭಾರತ ಟೆನಿಸ್‌ ಸಂಸ್ಥೆ (ಎಐಟಿಎ) ಆಟಗಾರರ ಹಿತಕ್ಕಾಗಿ ಕೂಡಲೇ ಏನಾದರೂ ಮಾಡಬೇಕು ಎಂದು ಅವರು ಕೇಳಿಕೊಂಡಿದ್ದಾರೆ.

ಅಕಾಡೆಮಿ ಮಾಲೀಕರ ದುಸ್ಥಿತಿ

ಭಾರತದಲ್ಲಿ 3827 ಪ್ರಮಾಣೀಕೃತ ತರಬೇತುದಾರರು ಇದ್ದಾರೆ. 10,000 ಸಹಾಯಕ ತರಬೇತುದಾರು ಇದ್ದಾರೆ. ದೇಶಾದ್ಯಂತ 2000 ಅಕಾಡೆಮಿಗಳು ಇವೆ. ಬೆಂಗಳೂರಿನಲ್ಲಿ ಡೇವಿಸ್‌ ಕಪ್‌ ತರಬೇತುದಾರ ಜೀಶನ್‌ ಅಲಿ ಅಕಾಡೆಮಿ ಹೊಂದಿದ್ದಾರೆ. ಅಲ್ಲಿ 12 ಸಿಬ್ಬಂದಿ ಇದ್ದಾರೆ. ಇನ್ನು ಭಾರತದ ಇನ್ನೊಬ್ಬ ತರಬೇತುದಾರ ಅಶುತೋಷ್‌ ಸಿಂಗ್‌ ದೆಹಲಿಯಲ್ಲಿ ಅಕಾಡೆಮಿ ಹೊಂದಿದ್ದಾರೆ. ಈ ಇಬ್ಬರೂ ಟೆನಿಸ್‌ ಚಟುವಟಿಕೆಯೇ ಇಲ್ಲದಿದ್ದರೂ ಸಂಬಳ ನೀಡುತ್ತಿದ್ದಾರೆ. ಭಾರತ ಫೆಡರೇಷನ್‌ ಕಪ್‌ ತಂಡದ ನಾಯಕ ವಿಶಾಲ್‌ ಉಪ್ಪಳ್‌ ತಮ್ಮ ಅಕಾಡೆಮಿಯಲ್ಲಿ, 14 ಮಂದಿ ಸಿಬ್ಬಂದಿ ಹೊಂದಿದ್ದಾರೆ. ಅವರಿಗೆ ತಿಂಗಳಿಗೆ 4.5 ಲಕ್ಷ ರೂ. ವೇತನ ನೀಡುತ್ತಾರೆ.

ಸಮಸ್ಯೆಯೇನು?

ಈಗೇನೋ ಕೊರೊನಾ ಇದೆ ಮಕ್ಕಳು ಬರುತ್ತಿಲ್ಲ. ಕೊರೊನಾ ಮುಗಿದ ಮೇಲೆ ಮಕ್ಕಳು ಬರುವುದರ ಬಗ್ಗೆ ಅಕಾಡೆಮಿಗಳಿಗೆ ಅನುಮಾನವಿದೆ. ಭಾರತದಲ್ಲಿ ಕ್ರೀಡೆಗೆ ವೃತ್ತಿ ಎನ್ನುವ ಸ್ಥಾನವಿಲ್ಲ. ಹೀಗಿರುವಾಗ ಆರ್ಥಿಕ ಕುಸಿತವಿರುವಾಗಲೂ ಮಕ್ಕಳು ಬರುತ್ತಾರೆ ಎಂದು ನಿರೀಕ್ಷಿಸುವುದು ಸಾಧ್ಯವೇ? ಅಕಾಡೆಮಿಗಳು ಏನು ಮಾಡಬೇಕು?

ಜಿಎಸ್‌ಟಿ ಮನ್ನಾ ಮಾಡಿ

ದೇಶದಲ್ಲಿರುವ ಕ್ರೀಡೆಗಳ ಪರಿಸ್ಥಿತಿ ಸುಧಾರಿಸಲು ಸರ್ಕಾರವೂ ಕೆಲವು ಕ್ರಮ ತೆಗೆದುಕೊಳ್ಳಬೇಕು ಎಂದು ವಿಶಾಲ್‌ ಉಪ್ಪಳ್‌ ಮನವಿ ಮಾಡಿದ್ದಾರೆ. ಸರ್ಕಾರ ಈಗ ಅಕಾಡೆಮಿಗಳ ಮೇಲೆ ಶೇ.18ರಷ್ಟು ಜಿಎಸ್‌ಟಿ ಹೇರಿದೆ. ಕ್ರೀಡೆಯನ್ನು ಶಿಕ್ಷಣ ಎಂದು ಪರಿಗಣಿಸಿ, ಜಿಎಸ್‌ಟಿ ರದ್ದು ಮಾಡಿ ಎಂದು ಅವರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.