ತೊಗರಿ ಹಣಕ್ಕೆ ಕಾದು ಕುಳಿತ ರೈತರು!

|ಜಿಲ್ಲೆಯಲ್ಲಿ 17 ಕೋಟಿ ರೂ.ಬಾಕಿ | ರೈತರಿಗೆ ಮತ್ತಷ್ಟು ಆರ್ಥಿಕ ಬರೆ

Team Udayavani, Apr 16, 2020, 11:56 AM IST

16-April-04

ಬೀದರ: ಜಿಲ್ಲೆಯ ಪಿಕೆಪಿಎಸ್‌ನಲ್ಲಿ ಬೆಂಬಲ ಬೆಲೆಯಲ್ಲಿ ರೈತರಿಂದ ತೊಗರಿ ಖರೀದಿಸಲಾಯಿತು

ಬೀದರ: ಕೋವಿಡ್ ಲಾಕ್‌ಡೌನ್‌ನಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳಿಗೆ ಮಾರುಕಟ್ಟೆ ಸೌಲಭ್ಯ ಇಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಈಗ ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಿದ ತೊಗರಿ ಹಣ ಸರ್ಕಾರದಿಂದ ಕೈ ಸೇರದಿರುವುದು ಅನ್ನದಾತರನ್ನು ಅಕ್ಷರಶಃ ಸಂತ್ರಸ್ತರನ್ನಾಗಿಸಿದೆ.

ಜಿಲ್ಲೆಯ ರೈತರ ಸುಮಾರು 17 ಕೋಟಿ ರೂ. ಬಾಕಿ ಉಳಿಸಿಕೊಂಡಿದೆ.ಕೋವಿಡ್ ವೈರಸ್‌ನಿಂದ ಜೀವನದ ಮೇಲಷ್ಟೇ ಅಲ್ಲ ರೈತರ ಕೈಗೆ ಬಂದ ಫಸಲಿಗೂ ಕೆಟ್ಟ ಪರಿಣಾಮ ಬೀರಿದೆ. ಒಂದೆಡೆ ಮಾರುಕಟ್ಟೆ ಬಂದ್‌ ಮತ್ತೂಂದೆಡೆ ಸಾಗಣೆ ಸೌಲಭ್ಯ ಇಲ್ಲದಿರುವುದರಿಂದ ಬೆಳೆ ಉಳಿಸಿಕೊಳ್ಳಲಾಗದೇ ತೀವ್ರ ನಷ್ಟಕ್ಕೆ ಒಳಗಾಗಿದ್ದಾರೆ. ಈ ನಡುವೆ ರೈತರಿಂದ ಖರೀದಿಸಿರುವ ತೊಗರಿ ಹಣ ಸಕಾಲಕ್ಕೆ ಬಿಡುಗಡೆ ಮಾಡದಿರುವುದು ಅವರ ಮೇಲೆ ಮತ್ತಷ್ಟು ಆರ್ಥಿಕ ಬರೆ ಎಳೆದಂತಾಗಿದೆ.

ತೊಗರಿ ಕಣಜ ಎನಿಸಿಕೊಂಡಿರುವ ಬೀದರ ಜಿಲ್ಲೆಯಲ್ಲಿ ಈ ವರ್ಷ ಉತ್ತಮ ಮಳೆ, ಕೀಟ ಬಾಧೆ ಇಲ್ಲವಾದ್ದರಿಂದ ರೈತರು ಬಂಪರ್‌ ಇಳುವರಿ ಪಡೆದಿದ್ದಾರೆ. ಆದರೆ, ಸಿಎಂ ಬಿಎಸ್‌ವೈ ಘೋಷಿಸಿದಂತೆ ಬೇಳೆ ಖರೀದಿ ಮಿತಿ 10ರಿಂದ 20 ಸಾವಿರಕ್ಕೆ ಹೆಚ್ಚಳವೂ ಆಗಲಿಲ್ಲ, ಸಂದಿಗ್ಧ ಸ್ಥಿತಿಯಲ್ಲಿ ತೊಗರಿ ಬಾಕಿ ಹಣ ಸಹ ಜಮೆ ಮಾಡದಿರುವುದು ರೈತರು ಹಿಡಿ ಶಾಪ ಹಾಕುವಂತಾಗಿದೆ. ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗಾಗಿ ಗಡಿ ಜಿಲ್ಲೆ ಬೀದರನಲ್ಲಿ 50,177 ರೈತರು ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 43,023 ರೈತರಿಂದ 3,01,417 ಕ್ವಿಂಟಲ್‌ ತೊಗರಿ ಖರೀದಿಸಲಾಗಿದೆ. ಈ ಪೈಕಿ ಈವರೆಗೆ ಪ್ರತಿ ಕ್ವಿಂಟಲ್‌ಗೆ 6100 ರೂ. ಗಳಂತೆ 2,73,410 ಕ್ವಿಂಟಲ್‌ ತೊಗರಿಯ ಒಟ್ಟು 166 ಕೋಟಿ ರೂ. ರೈತರಿಗೆ ಪಾವತಿಸಲಾಗಿದೆ. ಆದರೆ, ಇನ್ನೂ 28 ಸಾವಿರ ಕ್ವಿಂಟಲ್‌ ತೊಗರಿಯ 17 ಕೋಟಿ ರೂ. ಬಾಕಿ ಉಳಿದಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತೊಗರಿ ಖರೀದಿ ಪ್ರಕ್ರಿಯೆ ಸರ್ಕಾರ ನಿಲ್ಲಿಸಿತ್ತು. ಈಗ ಮತ್ತೆ ಈ ಹಿಂದೆ ನೋಂದಣಿ ಮಾಡಿಸಿಕೊಂಡು ಬಾಕಿ ಉಳಿದಿದ್ದ ರೈತರಿಂದ ಖರೀದಿಗಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ 1 ಲಕ್ಷ ಮೆ. ಟನ್‌ ಖರೀದಿಗೆ ಅನುಮತಿ ನೀಡಿದ್ದು, ಅದರಂತೆ ಜಿಲ್ಲೆಯಲ್ಲಿ ಸುಮಾರು 7154 ಬಾಕಿ ಉಳಿದ ರೈತರಿಂದ ತೊಗರಿ ಖರೀದಿ ಆಗಬೇಕಿದೆ. ಇನ್ನೂ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 115 ಸೊಸೈಟಿಗಳ ಮೂಲಕ 5 ಸಾವಿರ ಕ್ವಿಂಟಲ್‌ ಕಡಲೆ ಖರೀದಿಸಲಾಗಿದ್ದು, ಪ್ರತಿ ಕ್ವಿಂಟಲ್‌ಗೆ 4875 ದರದಂತೆ 24.37 ಲಕ್ಷ ರೂ. ಪಾವತಿ ಮಾಡಬೇಕಿದೆ.

ಬೀದರ ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಿರುವ ರೈತರಿಗೆ ಈವರೆಗೆ ಎರಡು ಹಂತದಲ್ಲಿ ಒಟ್ಟು 166 ಕೋಟಿ ರೂ. ಪಾವತಿಸಲಾಗಿದೆ. ಇನ್ನೂ 28 ಸಾವಿರ ರೂ. ಕ್ವಿಂಟಲ್‌ ತೊಗರಿಯ 17 ಕೋಟಿ ರೂ. ಬಾಕಿ ಇದ್ದು, ನಾಲ್ಕೈದು ದಿನದಲ್ಲಿ ಪಾವತಿಯಾಗಲಿದೆ. ಬಾಕಿ ನೋಂದಾಯಿತ 7 ಸಾವಿರ ರೈತರಿಂದ ತೊಗರಿ ಖರೀದಿ ಪ್ರಕ್ರಿಯೆ ಆರಂಭವಾಗಿದೆ.
ಪ್ರಭಾಕರ, ಶಾಖಾ ವ್ಯವಸ್ಥಾಪಕ,
ಸಹಕಾರ ಮಾರಾಟ ಮಹಾಮಂಡಳ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.