ನಿಷೇಧವಿದ್ದರೂ ಜಿಲ್ಲೆಗೆ ನುಸುಳಿದ ಜನ

ಬಂದವರನ್ನೆಲ್ಲ ಕ್ವಾರಂಟೈನ್‌ಗೆ ಕಳುಹಿಸಿದ ಜಿಲ್ಲಾಡಳಿತ ನಕಲಿ ಪಾಸ್‌ ತಪಾಸಣೆ ಮಾಡಿದ ಹೆಚ್ಚುವರಿ ಎಸ್‌ಪಿ

Team Udayavani, Apr 16, 2020, 12:21 PM IST

16-April-06

ರಾಯಚೂರು: ಆಂಧ್ರದಿಂದ ಲಾರಿಯಲ್ಲಿ ಬಂದ 14 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದರು.

ರಾಯಚೂರು: ಕೊರೊನಾ ಪಾಸಿಟಿವ್‌ ಪ್ರಕರಣಗಳಿಂದ ತತ್ತರಿಸಿದ ಆಂಧ್ರ, ತೆಲಂಗಾಣದ ಗಡಿಭಾಗದ ಜಿಲ್ಲೆಗಳಿಂದ ಜಿಲ್ಲೆಗೆ ಬರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಮಂಗಳವಾರ ರಾತ್ರಿ ಕೂಡ 14 ಜನ ಗುಳೆ ಹೋದವರು ಮರಳಿ ಬಂದಿದ್ದು, ಅವರನ್ನು ಸರ್ಕಾರಿ ಕ್ವಾರಂಟೈನ್‌ನಲ್ಲಿ ಉಳಿಸಲಾಗಿದೆ. ಆಂಧ್ರ, ತೆಲಂಗಾಣದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದೆ. ಅದರಲ್ಲೂ ಗಡಿಭಾಗದ ಜಿಲ್ಲೆಗಳಲ್ಲೂ ಪಾಸಿಟಿವ್‌ ಪ್ರಕರಣಗಳಿವೆ.

ಈಚೆಗೆ ಸಭೆ ನಡೆಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ, ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ತಿಳಿಸಿದ್ದರು. ಆದರೂ ಸಾಕಷ್ಟು ಜನ ನುಸುಳುತ್ತಿದ್ದಾರೆ. ಆಂಧ್ರದಿಂದ 14 ಜನ ಕಾರ್ಮಿಕರು ಲಾರಿಯಲ್ಲಿ ಬಂದಿದ್ದು, ನಗರದ ಪೊಲೀಸರು ತಪಾಸಣೆ ನಡೆಸಿದಾಗ ಘಟನೆ ಬಯಲಾಗಿದೆ. ಇನ್ನೂ ನಗರದ ವಿವಿಧ ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಕೂಡ ನೆರೆ ರಾಜ್ಯದ ಗಡಿಭಾಗದ ಗ್ರಾಮಗಳಿಂದ ನಿತ್ಯ ಓಡಾಡುತ್ತಿದ್ದಾರೆ. ಪಾಸ್‌ ತೋರಿಸುತ್ತಿದ್ದು, ಬುಧವಾರ ವಿಚಾರಣೆ ನಡೆಸಿದಾಗ ಸತ್ಯ ಗೊತ್ತಾಗಿದೆ. ಇನ್ನೂ ನಗರದಲ್ಲಿ ಲಾಕ್‌ಡೌನ್‌ ಮುಂದುವರಿದರೂ ಜನಸಂಚಾರ ಹೆಚ್ಚಾಗಿತ್ತು. ಪಾಸ್‌ಗಳಿಲ್ಲದೇ ಬಂದ ಜನ ಚೆಕ್‌ ಪೋಸ್ಟ್‌ಗಳಲ್ಲಿ, ನಾಕಾಬಂದಿಗಳಲ್ಲಿ ಪೊಲೀಸರೊಂದಿಗೆ ವಾಗ್ವಾದ ಮಾಡುತ್ತಿದ್ದ ದೃಶ್ಯ ಅಲ್ಲಲ್ಲಿ ಕಂಡು ಬಂತು.

ನಕಲಿ ಪಾಸ್‌ಗಳ ಹಾವಳಿ: ನಗರದಲ್ಲಿ ಜಿಲ್ಲಾಡಳಿತ ನೀಡಿದ್ದ ಪಾಸ್‌ಗಳನ್ನೇ ಕಲರ್‌ ಝರಾಕ್ಸ್‌ ಮಾಡಿಸಿಕೊಂಡು ದುರ್ಬಳಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ತುರ್ತು ಸೇವೆ, ಅಗತ್ಯ ಕೆಲಸಗಳಿಗಾಗಿ ಆದ್ಯತೆ ಮೇರೆಗೆ ಜಿಲ್ಲಾಡಳಿತ ಸಾಕಷ್ಟು ಪಾಸ್‌ ನೀಡಿದೆ. ಆದರೆ, ಅವು ದುರ್ಬಳಕೆಯಾಗಿರುವ ಅನುಮಾನದ ಮೇರೆಗೆ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ವಿಚಾರ ಗಮನಕ್ಕೆ ಬರುತ್ತಿದ್ದಂತೆ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಹರಿಬಾಬು ನೇತೃತ್ವದ ತಂಡ ತನಿಖೆ ನಡೆಸಿದ್ದು, 19 ಪಾಸ್‌ ಗುರುತಿಸಲಾಗಿದೆ. ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ಗಂಜ್‌ ವೃತ್ತ ಸೇರಿದಂತೆ ವಿವಿಧೆಡೆ ಬೆಳಗ್ಗೆಯಿಂದಲೇ ತಪಾಸಣೆ ನಡೆಸಲಾಯಿತು.

ನಗರದಲ್ಲಿ ನಕಲಿ ಪಾಸ್‌ ತೋರಿಸಿ ಅನಗತ್ಯವಾಗಿ ಓಡಾಡುವವರ ಸಂಖ್ಯೆ ಹೆಚ್ಚಾಗಿರುವ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿದ್ದು, ಶಂಕಾಸ್ಪದ 19 ಪಾಸ್‌ ವಶಕ್ಕೆ ಪಡೆದು ಸಂಬಂಧಿ ಸಿದ ಇಲಾಖೆಗಳಿಗೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದು ನಕಲಿ ಎಂದು ಗೊತ್ತಾದಲ್ಲಿ ಅಂಥವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು.
ಹರಿಬಾಬು,
ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ

ಆಂಧ್ರ, ತೆಲಂಗಾಣಕ್ಕೆ ಗುಳೆ ಹೋಗಿರುವ ಜನ ಒಂದಲ್ಲ ಒಂದು ಮಾರ್ಗದಿಂದ ಮರಳಿ ಊರಿಗೆ ಬರುತ್ತಿದ್ದಾರೆ. ಅಂಥವರನ್ನು ಈಗಾಗಲೇ ಕ್ವಾರಂಟೈನ್‌ಗಳಲ್ಲಿ ಉಳಿಸಲಾಗಿದೆ. ಯಾರೇ ಹೊರಗಿನವರು ಬಂದಲ್ಲಿ ಗ್ರಾಮಸ್ಥರು ಮಾಹಿತಿ ನೀಡಬೇಕು. ಹೊರರಾಜ್ಯದಿಂದ ಬರುತ್ತಿದ್ದ ಬ್ಯಾಂಕ್‌ ಸಿಬ್ಬಂದಿಗೂ ಇಲ್ಲೇ ಉಳಿಯಿರಿ, ಇಲ್ಲ ಕೆಲಸಕ್ಕೆ ಗೈರಾಗುವಂತೆ ನಿರ್ದೇಶನ ನೀಡಲಾಗಿದೆ.
ಸಂತೋಷ ಕಾಮಗೌಡ,
ಸಹಾಯಕ ಆಯುಕ್ತ

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಶ್ರೀ ಬಸವೇಶ್ವರ ಜಯಂತಿ ಆಚರಣೆ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.