ನವಜಾತ ಶಿಶುಗಳಿಗೆ ಸರಕಾರಿ ಆಸ್ಪತ್ರೆಯಲ್ಲೇ ಚುಚ್ಚುಮದ್ದು


Team Udayavani, Apr 16, 2020, 5:40 PM IST

ನವಜಾತ ಶಿಶುಗಳಿಗೆ ಸರಕಾರಿ ಆಸ್ಪತ್ರೆಯಲ್ಲೇ ಚುಚ್ಚುಮದ್ದು

ಬೆಳ್ತಂಗಡಿ: ಕೋವಿಡ್ ವೈರಸ್‌ನಿಂದಾಗಿ ಸರಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮಕ್ಕಳಿಗೆ ವಿವಿಧ ಹಂತಗಳಲ್ಲಿ ಚುಚ್ಚುಮದ್ದು ನೀಡುವ ವ್ಯವಸ್ಥೆಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿತ್ತು. ಜಿಲ್ಲೆಯಾದ್ಯಂತ ಹೆತ್ತವರು ದುಬಾರಿ ದರ ತೆತ್ತು ಖಾಸಗಿ ಆಸ್ಪತ್ರೆಗಳನ್ನು ಅವಲಂಬಿಸುವ ಅನಿವಾರ್ಯತೆ ಎದುರಾಗಿದ್ದರಿಂದ ನವಜಾತ ಶಿಶುಗಳಿಗೆ ಸರಕಾರಿ ಆಸ್ಪತ್ರೆಗಳಲ್ಲೇ ಚುಚ್ಚುಮದ್ದು ನೀಡಲಾಗುತ್ತಿದೆ.

ಚುಚ್ಚುಮದ್ದು ಒಂದು ತಿಂಗಳ ಅಂತರದಲ್ಲಿ ನೀಡಬಹುದಾಗಿದ್ದರೂ ಗ್ರಾಮೀಣ ಭಾಗದ ಜನರು ಮಾಹಿತಿ ಕೊರತೆಯಿಂದ ಖಾಸಗಿ ವೈದ್ಯರ ಬಳಿ ತೆರಳುತ್ತಿದ್ದಾರೆ. ಪರಿಸ್ಥಿತಿ ಲಾಭ ಪಡೆದು ದುಬಾರಿ ಮೊತ್ತಕ್ಕೆ ಚುಚ್ಚುಮದ್ದು ನೀಡುತ್ತಿರುವ ಆರೋಪ ವ್ಯಕ್ತವಾಗಿದೆ.

ಮಗು ಹುಟ್ಟಿದ 24 ಗಂಟೆಯೊಳಗೆ ಬಿಸಿಜಿ (0.05 ಎಂಎಲ್‌), ಹೆಪಟೈಟಿಸ್‌ ಬಿ (0.5 ಎಂಎಲ್‌) ಆಸ್ಪತ್ರೆಯಲ್ಲೇ ನೀಡಲಾಗುತ್ತಿದೆ. ಬಳಿಕ ವಿವಿಧ ಹಂತಗಳಲ್ಲಿ ಆ್ಯಂಟಿಮೈಕ್ರೋ ಬ್ಯಾಕ್ಟೀರಿಯಾ, ಪೆಪ್ಟೀರಿಯಾ ಹಾಗೂ ಇತರೆ ಲಸಿಕೆ ನೀಡಬೇಕು. ಸರಕಾರಿ ಆಸ್ಪತ್ರೆಯಲ್ಲಿ ಇವುಗಳು ಉಚಿತವಾಗಿವೆ. 15 ದಿನಗಳ ಹಸುಗೂಸಿಗೆ ಒಪಿವಿ ಸಿಂಗಲ್‌ ಡ್ರಾಪ್‌, 6ರಿಂದ 14 ವಾರಗಳ ಮಗುವಿಗೆ ಪೆಂಟಾವಾಲೆಂಟ್‌ 1.2.3 (0.5ಎಂಲ್‌) ಚುಚ್ಚುಮದ್ದು, 9 ತಿಂಗಳ ಮಗುವಿಗೆ ಮೀಸೆಲ್ಸ್‌ (0.5 ಎಂಎಲ್‌), 14 ತಿಂಗಳ ಮಗುವಿಗೆ ಒಪಿವಿ ಡಬಲ್‌ ಡ್ರಾಪ್‌ ಮತ್ತು ಮೊದಲ ಹಂತದ ಡಿಪಿಟಿ ಚುಚ್ಚುಮದ್ದು, 5 ವರ್ಷದ ಮಗುವಿಗೆ 2ನೇ ಹಂತದ ಡಿಪಿಟಿ ಚುಚ್ಚುಮದ್ದು ನೀಡಬೇಕು. ಇವು ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಭ್ಯ. ಆದರೆ, ಸದ್ಯ ಸರಕಾರಿ ಆಸ್ಪತ್ರೆಗಳಲ್ಲಿ ಚುಚ್ಚುಮದ್ದು ಹಾಗೂ ಲಸಿಕೆ ನೀಡುವುದನ್ನು ನಿಲ್ಲಿಸಿದ್ದರಿಂದ ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳು 2ರಿಂದ 4 ಸಾವಿರ ರೂ. ಪಡೆದು ಚುಚ್ಚುಮದ್ದು ನೀಡುತ್ತಿದ್ದಾರೆ ಎನ್ನುವ ಆರೋಪ ಹೆತ್ತವರಿಂದ ಕೇಳಿಬಂದಿದೆ.

ಸದ್ಯ ಪರಿಸ್ಥಿತಿ ಮನಗಂಡು ಗರ್ಭಿಣಿಯರಿಗೆ ನೀಡುವ (ಖಛ), ನವಜಾತ ಶಿಶುಗಳಿಗೆ (ಹೆರಿಗೆ ಬಳಿಕ) ಬಿಸಿಜಿ, ಓರಲ್‌ ಪೋಲಿಯೋ ಹನಿ, ಹೆಪಟೈಟಿಸ್‌ ಬಿ.  ಇವುಗಳನ್ನು ಸರಕಾರಿ ಆಸ್ಪತ್ರೆಯಲ್ಲೇ ನೀಡಲು ಸೂಚಿಸಲಾಗಿದೆ. ಪ್ರತಿ ಗುರುವಾರ ಸರಕಾರಿ ಆಸ್ಪತ್ರೆಗಳಲ್ಲಿ ಹಾಗೂ ಅಂಗನವಾಡಿಗಳಲ್ಲಿ ನಡೆಸುತ್ತಿದ್ದ ಲಸಿಕಾ ಶಿಬಿರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ತಿಂಗಳಿಗೆ ಸರಾಸರಿ 2,500 ಶಿಶು ಜನನ
ಜಿಲ್ಲೆಯಲ್ಲಿ ಒಟ್ಟು 66 ಪ್ರಾಥಮಿಕ ಆರೋಗ್ಯ ಕೇಂದ್ರ, 12 ನಗರ ಪ್ರಾಥಮಿಕ ಆರೋಗ್ಯ, 6 ಸಮುದಾಯ ಆರೋಗ್ಯ ಕೇಂದ್ರ, 4 ತಾಲೂಕು ಆಸ್ಪತ್ರೆ, 2 ಜಿಲ್ಲಾ ಆಸ್ಪತ್ರೆಗಳಿವೆ. ಜಿಲ್ಲೆಯಲ್ಲಿ ಪ್ರತಿ ತಿಂಗಳು ಸರಾಸರಿ 2,500 ಶಿಶುಗಳು ಜನಿಸುತ್ತವೆ. ವರ್ಷದಲ್ಲಿ ಸುಮಾರು 30,000 ಶಿಶು ಜನನವಾಗುತ್ತಿದೆ.

ಆತಂಕ ಬೇಡ
ಸರಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶುಗಳಿಗೆ ಹಾಗೂ ಗರ್ಭಿಣಿಯರಿಗೆ ಅಗತ್ಯವಾಗಿ ಚುಚ್ಚುಮದ್ದು ನೀಡಲಾಗಿದೆ. 16ರಿಂದ 24 ತಿಂಗಳ ಮಧ್ಯೆ ಹಾಗೂ 5 ವರ್ಷಗಳ ಒಳಗಾಗಿ ನೀಡುವ ಡೋಸೇಜನ್ನು ಕೊರೊನಾ ಹಿನ್ನೆಲೆ ಸದ್ಯ ಮುಂದೂಡಲಾಗಿದೆ. ಹೆತ್ತವರು ಆತಂತಕ್ಕೆ ಒಳಗಾಗಬೇಕಿಲ್ಲ. ಔಷಧ ನೀಡಲು ಒಂದು ತಿಂಗಳ ಹೆಚ್ಚುವರಿ ಕಾಲಾವಕಾಶವಿದೆ. ಲಾಕ್‌ಡೌನ್‌ ಮುಗಿದ ಬಳಿಕ ಸರಕಾರಿ ಆಸ್ಪತ್ರೆಗಳಲ್ಲಿ ಚುಚ್ಚುಮದ್ದು ಪಡೆಯಬಹದು.
– ಡಾ| ರಾಮಚಂದ್ರ ಬಾಯರಿ, ಆರೋಗ್ಯಾಧಿಕಾರಿ, ದ.ಕ. ಜಿಲ್ಲೆ

ಟಾಪ್ ನ್ಯೂಸ್

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

18

Benjana Padavu: ನೇಣು ಬಿಗಿದು ಆತ್ಮಹತ್ಯೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.