ಪುಣ್ಯದ ಕಾರ್ಯವಿದು


Team Udayavani, Apr 16, 2020, 6:24 PM IST

ಪುಣ್ಯದ ಕಾರ್ಯವಿದು

ಲಾಕ್‌ಡೌನ್‌ ಘೋಷಣೆಯಾದ 4 ದಿನದ ಬಳಿಕ ಕಾರ್ಕಳದ ತಂಡವೊಂದು ವಿಶಿಷ್ಟ ರೀತಿಯಲ್ಲಿ ತನ್ನ ಸೇವಾ ಕೈಂಕರ್ಯದಲ್ಲಿ ತೊಡಗಿಸಿಕೊಂಡಿದ್ದು ಇದೀಗ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ. ಕಾರ್ಕಳ ನಗರದಲ್ಲಿ ಯಾರೊಬ್ಬರೂ ಹಸಿವಿನಿಂದ ಬಳಲುವಂತಾಗಬಾರದು. ತಿನ್ನುವ ಅನ್ನಕ್ಕಾಗಿ ಪರಿತಪಿಸುವಂತಾಗಬಾರದೆಂಬ ಕಾಳಜಿಯೊಂದಿಗೆ ಪ್ರತಿಫ‌ಲಾಪೇಕ್ಷೆ ಇಲ್ಲದೇ ಪಡುತಿರುಪತಿ ಕ್ರಿಕೆಟರ್ ತಂಡವು ನಿತ್ಯ ನೂರಾರು ಮಂದಿಗೆ ಊಟ-ಉಪಾಹಾರ ನೀಡುವ ಮೂಲಕ ಸಾರ್ಥಕ್ಯ ಕಾಣುತ್ತಿದೆ.

ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಪ್ರಾಣವನ್ನೇ ಪಣವಾಗಿಟ್ಟು ಅನನ್ಯ ಸೇವೆಗೈಯುತ್ತಿರುವ ಪೊಲೀಸರು, ಗೃಹ ರಕ್ಷಕ ದಳ, ಸರಕಾರಿ ಆಸ್ಪತ್ರೆ, ಕಂದಾಯ, ಆರೋಗ್ಯ ಇಲಾಖೆ, ಆಶಾ ಕಾರ್ಯಕರ್ತರು, ಪುರಸಭಾ ನೌಕರರು-ಪೌರಕಾರ್ಮಿಕರು, ತಾಲೂಕು ಕಚೇರಿ ಸಿಬ್ಬಂದಿ, ಕ್ವಾರಂಟೈನ್‌ ಕೇಂದ್ರ ಮಾತ್ರವಲ್ಲದೇ ಆಹಾರದ ಅಗತ್ಯವುಳ್ಳ ನೂರಾರು ಮಂದಿಗೆ ಅವರ ಬಳಿ ತೆರಳಿ ಊಟ ಪೂರೈಸುವ ಮೂಲಕ ಪಡುತಿರುಪತಿ ಕ್ರಿಕೆಟರ್ñ ತಂಡ ಶ್ರೇಷ್ಠ ಕಾರ್ಯ ಮಾಡುತ್ತಿದ್ದು, ಈ ತಂಡದೊಂದಿಗೆ ಜೈ ಹಿಂದ್‌ ಕ್ಲಬ್‌ ಕೂಡ ಜೊತೆಗೂಡಿದೆ.

400 ಊಟ
ಹೊಟೇಲ್‌ ಇಲ್ಲದೇ ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ತೊಂದರೆಯಾಗುತ್ತಿರುವುದನ್ನು ಮನಗಂಡ ಪಡುತಿರುಪತಿ ತಂಡದ ಸದಸ್ಯರು ಆಹಾರ ಸಾಮಗ್ರಿ ತರಿಸಿ, ಪತ್ರಿಕೆ ವಿತರಕ ಗೋವಿಂದರಾಯ ಪೈ ಅವರ ಮನೆಯಲ್ಲಿ ಅಡುಗೆ ತಯಾರಿಸಿ ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಊಟ ಪೂರೈಸಿದರು. ಕೆಲದಿನಗಳಲ್ಲೇ ಆಹಾರ ಬೇಡಿಕೆ ಜಾಸ್ತಿಯಾಯಿತು. ಇದರೊಂದಿಗೆ ದಾನಿಗಳು ಸ್ವಇಚ್ಛೆಯೊಂದಿಗೆ ಸಹಕಾರ ನೀಡಲು ಮುಂದಾದರು. ಮಹಾವೀರ ಜಯಂತಿಯಂಗವಾಗಿ ಕಾರ್ಕಳ ಜೈನ್‌ ಮಿಲನ್‌ ವತಿಯಿಂದ ಒಂದು ದಿನದ ಖರ್ಚು ಭರಿಸಿದ್ದರು. ಪ್ರಸ್ತುತ ಪ್ರತಿದಿನ 400ಕ್ಕೂ ಅಧಿಕ ಮಂದಿಗೆ ಜಿಎಸ್‌ಬಿ ಶೈಲಿಯ ಸಸ್ಯಾಹಾರಿ ಊಟ ತಯಾರಿಸಲಾಗುತ್ತಿದೆ. ಇಷ್ಟೊಂದು ಮಂದಿಗೆ ಊಟ ತಯಾರಿಸುವುದು ಸುಲಭದ ಮಾತಲ್ಲ. ಮಾತ್ರವಲ್ಲದೇ ಆಯಾಯ ಕಚೇರಿ, ಮನೆಗಳಿಗೆ, ತಾಲೂಕಿನ ವಿವಿಧ ಚೆಕ್‌ಪೋಸ್ಟ್‌ಗೆ ಸುಡುಬಿಸಿಲು ಎನ್ನದೇ ಬೈಕ್‌ನಲ್ಲಿ ತೆರಳಿ ಊಟ ಪೂರೈಸುತ್ತಿರುವುದು ನಿಜಕ್ಕೂ ಮಹತ್ಕಾರ್ಯವೇ ಸರಿ.

ಮಧಾ°ಹ್ನ ಅನ್ನ, ಸಾಂಬಾರು, ಪಲ್ಯ, ಉಪ್ಪಿನಕಾಯಿ, ಮಜ್ಜಿಗೆಯಿದ್ದರೆ, ಉಪಾಹಾರಕ್ಕೆ ಇಡ್ಲಿ-ಚಟ್ನಿ, ಪುಳಿಯೊಗರೆ, ಬನ್ಸ್‌, ಸಜ್ಜಿಗೆ-ಅವಲಕ್ಕಿ ನೀಡಲಾಗುತ್ತಿದೆ. ಸರಕಾರಿ ಆಸ್ಪತ್ರೆ ರೋಗಿಗಳಿಗೆ ಅನ್ನದೊಂದಿಗೆ ಹಣ್ಣು ನೀಡಲಾಗುತ್ತಿದ್ದು, ವಿಶೇಷ ಸಂದರ್ಭ ಪಾಯಸವನ್ನೂ ಮಾಡಲಾಗುತ್ತಿದೆ.

ಅಚ್ಚುಕಟ್ಟುತನ
ಪಡುತಿರುಪತಿ ಕ್ರಿಕೆಟರ್ ತಂಡದ ಸದಸ್ಯರು ಬಹಳ ವ್ಯವಸ್ಥಿತವಾಗಿ, ಶುಚಿ-ರುಚಿಯಾಗಿ ಅಡುಗೆ ತಯಾರಿಸಿ, ಪ್ಯಾಕಿಂಗ್‌ ಮಾಡಿ, ಆಯಾಯ ಸ್ಥಳಗಳಿಗೆಂದು ನಿಗದಿಗೊಳಿಸಲಾಗಿರುವ ರಟ್ಟಿನ ಬಾಕ್ಸ್‌ಗೆ ಅನ್ನದ ಪೊಟ್ಟಣ ತುಂಬಿಸಲಾಗುತ್ತಿದೆ. ಬಳಿಕ 3 ಕಾರು, 15 ದ್ವಿಚಕ್ರ ವಾಹನದಲ್ಲಿ ಆಹಾರವನ್ನು ಆಯಾಯ ಸ್ಥಳಗಳಿಗೆ ಹೋಗಿ ವಿತರಣೆ ಮಾಡಲಾಗುತ್ತಿದೆ. ಇದೆಲ್ಲ ಕಾರ್ಯವೂ ಅತ್ಯಂತ ಅಚ್ಚುಕಟ್ಟುತನದಿಂದ ನಡೆಯುತ್ತಿದೆ.

ಮಾದರಿ
ದಾನಿಗಳ ಸಹಕಾರದೊಂದಿಗೆ ದಿನಂಪತ್ರಿ 400 ಕ್ಕೂ ಅಧಿಕ ಮಂದಿಗೆ ಊಟ ನೀಡಲು ಸಾಧ್ಯವಾಗುತ್ತಿದೆ. ಒಂದು ವೇಳೆ ಸರಕಾರದಿಂದ ಲಕ್ಷ-ಲಕ್ಷ ರೂ. ಅನುದಾನ ದೊರೆಯುತ್ತಿದ್ದರೂ ಇಷ್ಟೊಂದು ಸಮರ್ಪಕವಾಗಿ ಅಗತ್ಯವುಳ್ಳವರಿಗೆ ಆಹಾರ ವಿತರಣೆ ಖಂಡಿತ ಸಾಧ್ಯವಾಗುತ್ತಿರಲಿಲ್ಲ. ಜಾತಿ, ಧರ್ಮ ಅಂತ ಯಾವೊಂದು ತಾರತಮ್ಯವಿಲ್ಲದೇ ಸೇವಾ ಮನೋಭಾವದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಇಂತಹ ಮಾದರಿ ತಂಡ ಪ್ರತಿ ತಾಲೂಕಿನಲ್ಲೂ ಕಾರ್ಯನಿರ್ವಹಿಸುತ್ತಿದ್ದಲ್ಲಿ ತಾಲೂಕು ಆಡಳಿತಕ್ಕೆ ಬಹಳ ಅನುಕೂಲವಾಗಿರುತ್ತಿತ್ತು.

ಅಧಿಕಾರಿಗಳ ಭೇಟಿ
ಶಾಸಕ ವಿ. ಸುನಿಲ್‌ ಕುಮಾರ್‌, ತಹಶೀಲ್ದಾರ್‌ ಪುರಂದರ ಹೆಗ್ಡೆ, ತಾಲೂಕು ಆರೋಗ್ಯಾಧಿಕಾರಿ ಡಾ. ಕೃಷ್ಣಾನಂದ ಶೆಟ್ಟಿ, ಡಿವೈಎಸ್‌ಪಿ ಭರತ್‌ ರೆಡ್ಡಿ, ಪುರಸಭಾ ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ, ನಗರ ಠಾಣಾ ಎಸ್‌ಐ ಮಧು ಬಿ.ಇ., ಗ್ರಾಮಾಂತರ ಠಾಣಾ ಎಸ್‌ಐ ನಾಸಿರ್‌ ಹುಸೇನ್‌ ಭೇಟಿ ನೀಡಿ ತಂಡದ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದರು.

ಪ್ರಚಾರವಿಲ್ಲ
ಸಂಘ-ಸಂಸ್ಥೆಗಳು, ದಾನಿಗಳು ಅಗತ್ಯವುಳ್ಳವರಿಗೆ ಅಕ್ಕಿ, ಆಹಾರ ಸಾಮಗ್ರಿ ವಿತರಣೆ ಮಾಡಿ ಫೇಸ್‌ಬುಕ್‌, ವ್ಯಾಟ್ಸ್‌ಪ್‌ನಲ್ಲಿ ಹರಿಯಬಿಡುವುದನ್ನು ನಾವು ಕಾಣುತ್ತೇವೆ. ಆದರೆ, ಪಡುತಿರುಪತಿ ತಂಡದ ಯಾವೊಬ್ಬ ಸದಸ್ಯನೂ ತಮ್ಮ ಕಾರ್ಯದ ಕುರಿತು ಫೋಟೋ ತೆಗೆದು, ನಾಲ್ಕು ಪದ ಬರೆದಿರುವುದು ಕಂಡು ಬಂದಿಲ್ಲ. ಏನೇ ಇರಲಿ ಹಸಿದ ಹೊಟ್ಟೆಗೆ ಅನ್ನವಿಕ್ಕುವ ಮೂಲಕ ಪುಣ್ಯದ ಕಾರ್ಯದಲ್ಲಿ ತೊಡಗಿಸಿಕೊಂಡ ಸರ್ವರಿಗೂ ನಮ್ಮದೊಂದು ಸಲಾಂ..

– ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Ajekar: ಟೆರೇಸಿನಿಂದ ಬಿದ್ದ ಮುಖ್ಯ ಶಿಕ್ಷಕ ಸಾವು

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Road mishap: ಮಿನಿ ಟೆಂಪೋ ಚಾಲಕನಿಗೆ ಅಪರಿಚಿತ ವಾಹನ ಢಿಕ್ಕಿ; ತೀವ್ರ ಗಾಯ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

ಪೆನ್‌ಡ್ರೈವ್‌ ಪ್ರಕರಣ: ಕುತೂಹಲ ಕೆರಳಿಸಿದ ಪ್ರೀತಮ್‌ ಗೌಡ ಮೌನ

21

H.D. Revanna: ಇಂದು ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.