“ಬೈಕಂಪಾಡಿಯಲ್ಲಿ ರಿಟೇಲ್ ವ್ಯಾಪಾರ ನಡೆಸಿದರೆ ಲೈಸನ್ಸ್ ರದ್ದು’
Team Udayavani, Apr 17, 2020, 4:59 AM IST
ಮಂಗಳೂರು: ಸೆಂಟ್ರಲ್ ಮಾರ್ಕೆಟ್ನ ತರಕಾರಿ ಮತ್ತು ಹಣ್ಣು ಹಂಪಲುಗಳ ಸಗಟು ವ್ಯಾಪಾರವನ್ನು ಬೈಕಂಪಾಡಿ ಎಪಿಎಂಸಿ ಯಾರ್ಡ್ಗೆ ಸ್ಥಳಾಂತರಿಸಲಾಗಿದ್ದು, ಅಲ್ಲಿ ರಿಟೇಲ್ ಮಾರಾಟಕ್ಕೆ ಅವಕಾಶವಿಲ್ಲ. ಅಲ್ಲಿ ಚಿಲ್ಲರೆ ವ್ಯಾಪಾರ ನಡೆಸಿದರೆ ಅಂಥವರ ಲೈಸನ್ಸ್ ರದ್ದುಪಡಿಸಲಾಗುವುದು ಎಂದು ಶಾಸಕ ಡಾ| ವೈ. ಭರತ್ ಶೆಟ್ಟಿ ತಿಳಿಸಿದ್ದಾರೆ.
ಬೈಕಂಪಾಡಿ ಎಪಿಎಂಸಿ ಯಾರ್ಡ್ ನಲ್ಲಿ ವ್ಯಾಪಾರಿಗಳು ಚಿಲ್ಲರೆ ವ್ಯವಹಾರ ನಡೆಸುತ್ತಿದ್ದಾರೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಗುರುವಾರ ಶಾಸಕ ಡಾ| ಭರತ್ ಶೆಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮೇಯರ್ ದಿವಾಕರ್ ಮತ್ತು ಎಪಿಎಂಸಿ ಕಾರ್ಯದರ್ಶಿ ರವಿಚಂದ್ರ ಅವರು ಬೈಕಂಪಾಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಿಟೇಲ್ ವ್ಯವಹಾರ ನಡೆಸಿದರೆ ಲೈಸನ್ಸ್ ರದ್ದು ಪಡಿಸುವುದಲ್ಲದೆ ಅವರಿಗೆ ಈ ಹಿಂದೆ ಎಪಿಎಂಸಿ ಒಳಗೆ ಬರಲು ನೀಡಲಾಗಿದ್ದ ಅನುಮತಿಯನ್ನು ಕೂಡ ರದ್ದುಪಡಿಸಲಾಗುವುದು ಎಂದರು.
ಬೈಕಂಪಾಡಿಯಲ್ಲಿ ವ್ಯವಹಾರ ನಡೆಸಲು ಸೆಂಟ್ರಲ್ ಮಾರ್ಕೆಟ್ಗಿಂತ ಉತ್ತಮ ವ್ಯವಸ್ಥೆಗಳಿವೆ. 10 ದಿನಗಳ ಬಳಿಕ ಸಭೆ ಕರೆದು ಇಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ ಸಮಸ್ಯೆಗಳಿದ್ದರೆ ಪರಿಹಾರ ಸೂಚಿಸಲಾಗುವುದು ಎಂದರು.
ಸಗಟು ವ್ಯಾಪಾರಿಗಳಿಂದ 3 ತಿಂಗಳ ಕಾಲ ಯಾವುದೇ ಬಾಡಿಗೆ ಅಥವಾ ತೆರಿಗೆಯನ್ನು ವಸೂಲು ಮಾಡುವುದಿಲ್ಲ. ಆದರೆ ಇಲ್ಲಿ ವಹಿವಾಟು ನಡೆಸಲು ಆಸಕ್ತಿ ಇರುವ ಎಲ್ಲರೂ ಲೈಸನ್ಸ್ ಪಡೆಯುವ ಬಗ್ಗೆ ಈಗಿಂದೀಗಲೇ ಅರ್ಜಿ ಸಲ್ಲಿಕೆ ಮತ್ತಿತರ ಪ್ರಕ್ರಿಯೆಗಳನ್ನು ಆರಂಭಿಸಬೇಕು. 3 ತಿಂಗಳ ಬಳಿಕ ಅಧಿಕೃತವಾಗಿ ಲೈಸನ್ಸ್ ಪಡೆದು ವ್ಯವಹಾರ ನಡೆಸಬಹುದು ಎಂದು ಶಾಸಕರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ