ಮತ್ತೆ ಮೂರು ಕೋವಿಡ್ ಸೋಂಕು

ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆ ಹೋಂ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಗೂ ಹೆಮ್ಮಾರಿ ದೃಢ

Team Udayavani, Apr 17, 2020, 10:37 AM IST

17-April-01

ಕಲಬುರಗಿ: ನಗರದ ಎಲ್ಲೆಡೆ ಪೊಲೀಸರು ಲಾಠಿ ಹಿಡಿದು ಸಂಚರಿಸಿದರು.

ಕಲಬುರಗಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಗುರುವಾರ ಐದು ವರ್ಷದ ಮಗು ಸೇರಿದಂತೆ ಮತ್ತೆ ಮೂವರಲ್ಲಿ ಮಹಾಮಾರಿ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಕಲಬುರಗಿ ತಾಲೂಕು, ಅಫಜಲಪುರ ಮತ ಕ್ಷೇತ್ರದ ಕವಲಗಾ (ಬಿ) ಗ್ರಾಮದ ಒಂದು ವರ್ಷದ ಗಂಡು ಮಗುವಿನ ನೇರ ಸಂಪರ್ಕಕ್ಕೆ ಬಂದಿದ್ದ 23 ವರ್ಷದ ಯುವತಿಗೆ ಗುರುವಾರ ಕೊರೊನಾ ಸೋಂಕು ಇರುವುದಾಗಿ ಪ್ರಯೋಗಾಲಯದ ವರದಿ ಬಂದಿದೆ ಎಂದು ಜಿಲ್ಲಾಧಿಕಾರಿ ಶರತ್‌ ಬಿ. ತಿಳಿಸಿದ್ದಾರೆ.

ಈ ಮಗುವಿಗೆ ಸೋಂಕು ತಗುಲಿರುವ ಹಿನ್ನೆಲೆ ಹಾಗೂ ಪ್ರವಾಸ ಪರಿಶೀಲಿಸಿದಾಗ ಇತ್ತೀಚೆಗೆ ಮಗುವಿನೊಂದಿಗೆ ತಂದೆಯೂ ಬೆಂಗಳೂರಿನಿಂದ ಬಂದಿರುವ ಮಾಹಿತಿ ಇದೆ. ತಂದೆಗೆ ಸೋಂಕು ಇಲ್ಲ. ಆದರೆ, ಮಗನಿಗೆ ಸೋಂಕು ಬಂದಿದೆ. ಈ ಕುರಿತು ಇನ್ನುಷ್ಟು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ ಎಂದು ಸಿಇಒ ಡಾ| ರಾಜಾ ಪಿ. ಮಾಹಿತಿ ನೀಡಿದ್ದಾರೆ.

ಮತ್ತೊಂದು ಮಗುವಿಗೆ ಹೆಮ್ಮಾರಿ: ಕವಲಗಾ (ಬಿ)ದ ಒಂದು ವರ್ಷದ ಗಂಡು ಮಗು ಹಾಗೂ ವಾಡಿ ಪಟ್ಟಣದ ಎರಡು ವರ್ಷದ ಗಂಡು ಮಗುವಿಗೆ ಹೆಮ್ಮಾರಿ ಸೋಂಕು ದೃಢಪಟ್ಟಿದ್ದು, ಗುರುವಾರ ಕಲಬುರಗಿ ನಗರದ ಐದು ವರ್ಷದ ಗಂಡು ಮಗುವಿನಲ್ಲೂ ಕಾಣಿಸಿಕೊಂಡಿದೆ. ಮಂಗಳವಾರ 10 ವರ್ಷದ ಬಾಲಕಿಗೂ ಕೊರೊನಾ ಪತ್ತೆಯಾಗಿತ್ತು. ದೆಹಲಿಯ ನಿಜಾಮುದ್ದೀನ್‌ ಮಸೀದಿಯಲ್ಲಿ ನಡೆದ ತಬ್ಲೀಘಿ-ಎ-ಜಮಾತ್‌ ಸಭೆಯಲ್ಲಿ ಪಾಲ್ಗೊಂಡು ಮರಳಿ ಬಂದವರೊಂದಿಗೆ ಸಂಪರ್ಕ ಹೊಂದಿ, ಏ.13ರಂದು ಮೃತಪಟ್ಟ ಬಟ್ಟೆ ವ್ಯಾಪಾರಿಯ ಸಂಪರ್ಕಕ್ಕೆ ಈ ಐದು ವರ್ಷದ ಮಗು ಸಂಪರ್ಕಕ್ಕೆ ಬಂದಿತ್ತು. ಈ ಹಿಂದೆ ಬಟ್ಟೆ ವ್ಯಾಪಾರಿಯ 51 ವರ್ಷದ ಸಹೋದರ ಹಾಗೂ ಸಹೋದರನ ಪುತ್ರಿಯಾದ 10 ವರ್ಷದ ಬಾಲಕಿಗೆ ಸೋಂಕು ಖಚಿತವಾಗಿತ್ತು.

ಬೆಂಗಳೂರಿಂದ ಮರಳಿದ ವ್ಯಕ್ತಿಗೂ ಸೋಂಕು: ಬೆಂಗಳೂರಿನಿಂದ ಮರಳಿದ್ದ 32 ವರ್ಷದ ವ್ಯಕ್ತಿಗೂ ಗುರುವಾರ ಸೋಂಕು ದೃಢಪಟ್ಟಿದೆ. ಮಾ.24ರಂದೇ ನಗರಕ್ಕೆ ಮರಳಿದ್ದ ಈತನನ್ನು ಈ ಹಿಂದೆಯೇ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆಗ ಈತನಿಗೆ ಕೋವಿಡ್  ನೆಗೆಟಿವ್‌ ಎಂದು ಪ್ರಯೋಗಾಲಯದ ವರದಿ ಬಂದಿತ್ತು. ಮಾ.30ರಿಂದ ಈ ವ್ಯಕ್ತಿಯನ್ನು ಹೋಮ್‌ ಕ್ವಾರಂಟೈನ್‌ ನಲ್ಲಿ ಇರಿಸಲಾಗಿತ್ತು. ಏ.14ರಂದು ಜ್ವರ ಮತ್ತೆ ಕಾಣಿಸಿಕೊಂಡ ಪರಿಣಾಮ ಮತ್ತೂಮ್ಮೆ ಗಂಟಲು ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಿತ್ತು. ಇದೀಗ ಆತನಿಗೆ ಕೊರೊನಾ ಪಾಸಿವಿಟ್‌ ಇರುವುದು ಖಚಿತವಾಗಿದೆ. ಈತ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.