ಲಾಕ್‌ಡೌನ್‌ ಸಂಕಟ; ಪಡಿತರಕ್ಕೆ ಪರದಾಟ

ಅಕ್ರಮ ಎಸಗಿದ ಮೂರು ರೇಷನ್‌ ಅಂಗಡಿ ಪರವಾನಗಿ ರದ್ದು ಆರೋಗ್ಯ ಸಿಬ್ಬಂದಿಗೆ ಸಿಗದ ಸುರಕ್ಷತಾ ಸಾಮಗ್ರಿ

Team Udayavani, Apr 17, 2020, 11:44 AM IST

17-April-06

ರಾಯಚೂರು: ಎನ್‌.ಹೊಸೂರು ನ್ಯಾಯಬೆಲೆ ಅಂಗಡಿಯಲ್ಲಿ ಬಕೆಟ್‌ ನಲ್ಲಿಯೇ ಅಕ್ಕಿ ವಿತರಿಸುತ್ತಿರುವುದು.

ರಾಯಚೂರು: ಲಾಕ್‌ಡೌನ್‌ ಘೋಷಣೆಯಾಗುತ್ತಿದ್ದಂತೆ ಗುಳೆ ಹೋಗಿದ್ದ 50 ಸಾವಿರಕ್ಕೂ ಅಧಿಕ ಜನ ಮರಳಿ ಬಂದಿದ್ದು, ಎರಡು ತಿಂಗಳ ಪಡಿತರ ನೀಡಬೇಕಾದ ನ್ಯಾಯಬೆಲೆ ಅಂಗಡಿಗಳು ಗ್ರಾಹಕರಿಗೆ ವಂಚಿಸುತ್ತಿರುವ ದೂರುಗಳು ಕೇಳಿ ಬರುತ್ತಿವೆ.

ಈಗಾಗಲೇ ಜಿಲ್ಲೆಯ ಮೂರು ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಗೊಳಿಸಲಾಗಿದೆಯಾದರೂ ಅಕ್ರಮಗಳು ತೆರೆಮರೆಯಲ್ಲಿ ನಡೆಯುತ್ತಿವೆ. ಜಿಲ್ಲೆಯಲ್ಲಿ 19.20 ಲಕ್ಷ ಜನಸಂಖ್ಯೆಯಿದ್ದು, 715 ನ್ಯಾಯಬೆಲೆ ಅಂಗಡಿಗಳಿವೆ. 24 ಅಂಗಡಿ ಸ್ಥಗಿತಗೊಂಡಿದ್ದರೆ, ಮತ್ತೆ ಮೂರು ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. 53,035 ಅಂತ್ಯೋದಯ, 4,57 ಲಕ್ಷ ಬಿಪಿಎಲ್‌ , 6,719 ಎಪಿಎಲ್‌ ಕಾರ್ಡ್ದಾರರಿದ್ದಾರೆ. ಜಿಲ್ಲೆಗೆ ಈವರೆಗೂ 1.67 ಲಕ್ಷ ಕ್ವಿಂಟಲ್‌ ಅಕ್ಕಿ ಬಂದಿದೆ. ಐದು ದಿನದೊಳಗೆ 2 ತಿಂಗಳ ರೇಶನ್‌ ನೀಡಬೇಕೆಂದು ತಿಳಿಸಿದ್ದರೂ ಇನ್ನೂ ಮುಗಿದಿಲ್ಲ.

ಬಿಪಿಎಲ್‌ ಕಾರ್ಡ್‌ದಾರರಿಗೆ ಪ್ರತಿಯೊಬ್ಬರಿಗೆ 5 ಕೆ.ಜಿ ಅಕ್ಕಿ, ಎರಡು ಕೆ.ಜಿ ಗೋದಿ ನೀಡಿದರೆ, ಅಂತ್ಯೋದಯ ಕಾರ್ಡ್‌ದಾರರಿಗೆ ತಿಂಗಳಿಗೆ 35 ಕೆ.ಜಿ ಅಕ್ಕಿ ನೀಡಬೇಕು. ಎರಡು ತಿಂಗಳ ಪಡಿತರ ಏಕಕಾಲಕ್ಕೆ ನೀಡಲಾಗುತ್ತಿದೆ. ಆದರೆ, ಸಾಕಷ್ಟು ಕಡೆ ಅಂತ್ಯೋದಯ ಕಾರ್ಡ್‌ದಾರರಿಗೆ ಕಡಿಮೆ ಧಾನ್ಯ ನೀಡಲಾಗುತ್ತಿದೆ. ಇನ್ನೂ ತೂಕದಲ್ಲೂ ಸಾಕಷ್ಟು ವ್ಯತ್ಯಾಸ ಮಾಡಲಾಗುತ್ತಿದೆ. ಕೆ.ಜಿ ಲೆಕ್ಕದಲ್ಲಿ ಹಾಕದೇ ಬಕೆಟ್‌, ಪ್ಲಾಸ್ಟಿಕ್‌ ಡಬ್ಬಿಗಳಲ್ಲೇ ಹಾಕಲಾಗುತ್ತಿದೆ. ಲಾಕ್‌ಡೌನ್‌ ಅವಕಾಶ ಬಳಸಿಕೊಂಡಿರುವ ರೇಶನ್‌ ಅಂಗಡಿ ಮಾಲೀಕರು ಗ್ರಾಹಕರಿಂದ 10-30 ರೂ.ವರೆಗೂ ಹಣ ಪಡೆಯುತ್ತಿದ್ದಾರೆ.

ದೇವದುರ್ಗ ತಾಲೂಕಿನ ಹಂಚಿನಾಳ ಗ್ರಾಮದಲ್ಲಿ 100 ರೂ. ಪಡೆದಿರುವ ಕುರಿತು ವರದಿಯಾಗಿದೆ. ನ್ಯಾಯಬೆಲೆ ಅಂಗಡಿಗಳ ಮುಂದೆ ಜನ ಗುಂಪು ನಿಂತರೂ ತಿಳಿ ಹೇಳುವವರಿಲ್ಲ. ತಮಗೆ ತಿಳಿದಾಗ ಬಂದು ರೇಶನ್‌ ಹಾಕುತ್ತಿದ್ದಾರೆ.ಹೀಗಾಗಿ ಜನ ಬೆಳಗ್ಗೆಯಿಂದ ಸಂಜೆವರೆಗೂ ಕಾಯುವ ಸ್ಥಿತಿ ಇದೆ.

ಈಗಾಗಲೇ ಎರಡು ತಿಂಗಳ ರೇಶನ್‌ ನೀಡಲಾಗುತ್ತಿದೆ. ಗುಳೆ ಹೋಗಿ ಬಂದವರಲ್ಲಿ ಬಹುತೇಕರಿಗೆ ಬಿಎಪಿಎಲ್‌ ಕಾರ್ಡ್‌ಗಳಿವೆ. ಕಾರ್ಡ್‌ ಇಲ್ಲದವರಿಗೆ ಎಸ್‌ ಡಿಆರ್‌ಎಫ್‌ನಡಿ ಪಡಿತರ ನೀಡುತ್ತಿದ್ದೇವೆ. ಅಕ್ರಮ ನಡೆದಿರುವ ಬಗ್ಗೆ ಖಚಿತ ಮಾಹಿತಿ ನೀಡಿದರೆ ಅಂಥ ನ್ಯಾಯಬೆಲೆ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.  ಈಗಾಗಲೇ ಜಿಲ್ಲೆಯ 3 ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ. ಈವರೆಗೂ ಶೇ.80ಕ್ಕೂ ಅಧಿಕ ಪಡಿತರ ವಿತರಿಸಲಾಗಿದೆ.
ಅರುಣಕುಮಾರ್‌ ಸಂಗಾವಿ,
ಉಪ ನಿರ್ದೇಶಕ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ರಾಯಚೂರು

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.