ಪೊಲೀಸರಿಂದ ಕಟ್ಟುನಿಟ್ಟಿನ ಕ್ರಮ
ಮೇ 3ರ ವರೆಗೆ ಲಾಕ್ಡೌನ್ ವಿಸ್ತರಣೆ ಹಿನ್ನೆಲೆ1,500 ಬೈಕ್-130 ಕಾರು ವಶ
Team Udayavani, Apr 17, 2020, 12:47 PM IST
ಚಿಕ್ಕಮಗಳೂರು: ಜನಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ಐಜಿ ರಸ್ತೆ.
ಚಿಕ್ಕಮಗಳೂರು: ಮೇ 3ರ ವರೆಗೆ ಎರಡನೇ ಹಂತದ ಲಾಕ್ಡೌನ್ ವಿಸ್ತರಣೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಜಿಲ್ಲಾ ಪೊಲೀಸ್ ಇಲಾಖೆ ಜನಸಂಚಾರ ನಿಯಂತ್ರಿಸಲು ಮತ್ತಷ್ಟು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಜಿಲ್ಲಾದ್ಯಂತ ಚೆಕ್ಪೋಸ್ಟ್ಗಳಲ್ಲಿ ಹೆಚ್ಚಿನ ಸಿಬ್ಬಂದಿ ನೇಮಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಅಗತ್ಯ ವಸ್ತು ಸೇವೆ, ಸರಕು ಸಾಗಣೆ, ತುರ್ತು ವೈದ್ಯಕೀಯ ಸೇವೆಯನ್ನು ಹೊರತುಪಡಿಸಿ ಉಳಿದಂತೆ ಜನಸಂಚಾರಕ್ಕೆ ಕಡಿವಾಣ ಹಾಕಲಾಗಿದೆ. ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳಿಂದ ನಗರ ಸೇರಿದಂತೆ ಜಿಲ್ಲಾದ್ಯಂತ ಜನಸಂಚಾರ ಕಡಿಮೆಯಾಗಿದೆ. ವಿನಾಕಾರಣ ಸಂಚರಿಸುವರ ವಾಹನಗಳನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸುತ್ತಿರುವ ಹಿನ್ನೆಲೆಯಲ್ಲಿ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ.
ಲಾಕ್ಡೌನ್ ಉಲ್ಲಂಘಿಸಿ ಸಂಚರಿಸುತ್ತಿದ್ದ 1,500ಕ್ಕೂ ಹೆಚ್ಚು ದ್ವಿಚಕ್ರ ವಾಹನ ಹಾಗೂ 130ಕ್ಕೂ ಹೆಚ್ಚು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ನೆರೆಯ ಜಿಲ್ಲೆಯ ಜನರು ಜಿಲ್ಲೆಗೆ ಪ್ರವೇಶಿಸು ವುದನ್ನು ನಿರ್ಬಂಧಿ ಸಲಾಗಿದ್ದು, ಜಿಲ್ಲೆಯ ಗಡಿ ಪ್ರದೇಶದ ಚೆಕ್ಪೋಸ್ಟ್ಗಳನ್ನು ಇನಷ್ಟು ಬಿಗಿಗೊಳಿಸಲಾಗಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ ಬೇರಾವುದೇ ವಾಹನಗಳ ಪ್ರವೇಶಕ್ಕೆ ಸಂಪೂರ್ಣ ನಿರ್ಬಂಧ ಹಾಕಲಾಗಿದೆ. ಪೊಲೀಸ್ ಇಲಾಖೆ ಅನುಮತಿ ಪಡೆದು ಜಿಲ್ಲೆಯಿಂದ ಹೊರಹೋಗುವ ವ್ಯಕ್ತಿಗಳಿಗೆ ಮತ್ತೆ ಜಿಲ್ಲೆಯ ಪ್ರವೇಶಕ್ಕೆ ಕಟ್ಟುನಿಟ್ಟಾಗಿ ತಡೆಯೊಡ್ಡಲಾಗುತ್ತಿದೆ. ಒಂದು ವೇಳೆ ಇಲಾಖೆಯ ಅನುಮತಿಯೊಂದಿಗೆ ಜಿಲ್ಲೆಗೆ ಪ್ರವೇಶ ಪಡೆದರೂ 14 ದಿನ ಹೋಂ ಕ್ವಾರಂಟೈನ್ಗೆ ಒಳಪಡಿಸಲಾಗುತ್ತಿದೆ.
ಕೆಲವು ಸರ್ಕಾರಿ ಕಚೇರಿಗಳನ್ನು ತೆರೆಯಲಾಗಿದ್ದು, ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ತುರ್ತು ಸರ್ಕಾರಿ ಕೆಲಸ-ಕಾರ್ಯಗಳು ಹೊರತುಪಡಿಸಿ ಸಾರ್ವಜನಿಕರ ಸಂಖ್ಯೆ ವಿರಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ