Covid19 ಹೋರಾಟ-ಬಲಿಷ್ಠ ರಾಷ್ಟ್ರಗಳಿಗೆ ಭಾರತ ಸಡ್ಡು,4 ದಿನಗಳಲ್ಲಿ ಚೇತರಿಕೆ ಸಂಖ್ಯೆ ದ್ವಿಗುಣ

ಅಮೆರಿಕ, ಬ್ರಿಟನ್ ಗಿಂತಲೂ ಮಿಗಿಲಾಗಿ ಭಾರತ ಹೆಚ್ಚಿನ ಸಂಖ್ಯೆಯ ಜನರನ್ನು ಪರೀಕ್ಷೆಗೆ ಒಳಪಡಿಸಿದೆ.

Team Udayavani, Apr 17, 2020, 12:35 PM IST

Covid19 ಹೋರಾಟ-ಬಲಿಷ್ಠ ರಾಷ್ಟ್ರಗಳಿಗೆ ಭಾರತ ಸಡ್ಡು,4 ದಿನಗಳಲ್ಲಿ ಚೇತರಿಕೆ ಸಂಖ್ಯೆ ದ್ವಿಗುಣ

Representative Image

ನವದೆಹಲಿ: ಭಾರತದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 13,387ಕ್ಕೆ ತಲುಪಿದೆ. ಕಳೆದ 24ಗಂಟೆಯಲ್ಲಿ ಒಂದು ಸಾವಿರ ಪಾಸಿಟಿವ್ ಪ್ರಕರಣಗಳ ವರದಿಯಾಗಿದೆ. ಈವರೆಗೆ ಒಟ್ಟು 437 ಮಂದಿ ಕೋವಿಡ್ 19 ವೈರಸ್ ಗೆ ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ ಕೋವಿಡ್ ಸೋಂಕಿತರು ಹೆಚ್ಚಿನ ಪ್ರಮಾಣದಲ್ಲಿ ಚೇತರಿಸಿಕೊಳ್ಳುತ್ತಿರುವುದು ಯಶಸ್ಸಿನತ್ತ ಹೆಜ್ಜೆ ಹಾಕಿದಂತಾಗಿದೆ ಎಂದು ವರದಿ ತಿಳಿಸಿದೆ.

ಅಲ್ಲದೇ ಜಾಗತಿಕವಾಗಿ ಸೋಂಕಿತರು ಹಾಗೂ ಸಾವಿನ ಪ್ರಮಾಣ ಪರಿಗಣಿಸಿದರು ಕೂಡಾ ಭಾರತ ಗಮನಾರ್ಹ ಬೆಳವಣಿಗೆ ಸಾಧಿಸಿದೆ. ದೇಶದಲ್ಲಿ 6ಸಾವಿರದಿಂದ 13ಸಾವಿರದವರೆಗಿನ ಪ್ರಕರಣ ಹೆಚ್ಚಳವಾಗುವವರೆಗೆ ತೆಗೆದುಕೊಂಡ ದಿನ ನಿಧಾನವಾಗಿದೆ ಎಂದು ವರದಿ ಹೇಳಿದೆ.

ಅಮೆರಿಕ, ಬ್ರಿಟನ್ ಗಿಂತಲೂ ಮಿಗಿಲಾಗಿ ಭಾರತ ಹೆಚ್ಚಿನ ಸಂಖ್ಯೆಯ ಜನರನ್ನು ಪರೀಕ್ಷೆಗೆ ಒಳಪಡಿಸಿದೆ. ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ ದ್ವಿಗುಣಗೊಳ್ಳಲು ನಾಲ್ಕು ದಿನಗಳನ್ನು ತೆಗೆದುಕೊಂಡಿದ್ದರೆ, ನಂತರದಲ್ಲಿ ಅದು ಆರು ದಿನಗಳನ್ನು ತೆಗೆದುಕೊಂಡಿರುವುದಾಗಿ ವರದಿ ವಿವರಿಸಿದೆ.

ಏತನ್ಮಧ್ಯೆ ಅಮೆರಿಕದಲ್ಲಿ 24 ಗಂಟೆಯಿಂದ ಎರಡು ದಿನಗಳಲ್ಲಿಯೇ ಕ್ಷಿಪ್ರವಾಗಿ ಕೋವಿಡ್ ಸೋಂಕಿತರ ಪ್ರಕರಣ ಏಕಾಏಕಿ ಹೆಚ್ಚಳವಾಗಿದ್ದವು. ಇವೆಲ್ಲಕ್ಕಿಂತ ಹೆಚ್ಚಾಗಿ ಮುಖ್ಯವಾದ ಅಂಶವೆಂದರೆ ಭಾರತದಲ್ಲಿ ಸೋಂಕಿನ ಪ್ರಮಾಣ ಪ್ರತಿ ಹತ್ತು ಲಕ್ಷ ಜನಸಂಖ್ಯೆಗೆ ಒಂಬತ್ತು ಮಂದಿಯಂತಿದ್ದು, ಇದು ಜಾಗತಿಕವಾಗಿ 267 ಆಗಿದೆ ಎಂದು ತಿಳಿಸಿದೆ.

ಶೇಖಡವಾರು ಲೆಕ್ಕಾಚಾರದಲ್ಲಿಯೂ ಕೋವಿಡ್ ಸೋಂಕಿತರ ಚೇತರಿಕೆ ಸಂಖ್ಯೆ ಆಶಾದಾಯಕವಾಗಿದೆ. ಶುಕ್ರವಾರದಂದು ಕೋವಿಡ್ ಸೋಂಕಿತರಲ್ಲಿ ಚೇತರಿಸಿಕೊಂಡವರ ಸಂಖ್ಯೆ ಶೇ.13.06ರಷ್ಟಿದ್ದು, ಗುರುವಾರ ಶೇ.12.02ರಷ್ಟು, ಬುಧವಾರ ಶೇ.11.41ರಷ್ಟು, ಮಂಗಳವಾರ 9.99ರಷ್ಟಿದ್ದು, ಕಳೆದ 24ಗಂಟೆಯಲ್ಲಿ 260 ಕೋವಿಡ್ ರೋಗಿಗಳು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿರುವುದಾಗಿ ವರದಿ ಹೇಳಿದೆ.

ಗುರುವಾರದಂದು 183 ಮಂದಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆಂದು ವರದಿ ತಿಳಿಸಿದೆ. ಏಪ್ರಿಲ್ 20ರವರೆಗೆ ಲಾಕ್ ಡೌನ್ ಕಠಿಣವಾಗಿ ಮುಂದುವರಿಯಲಿದ್ದು, ಜಿಲ್ಲೆಗಳಲ್ಲಿ ವೈರಸ್ ಹಾಟ್ ಸ್ಪಾಟ್ ಎಂದು ಗುರುತಿಸಲ್ಪಟ್ಟ ಪ್ರದೇಶಗಳಲ್ಲಿ ಕೈಗಾರಿಕೆ, ಕಟ್ಟಡ ನಿರ್ಮಾಣ ಮತ್ತು ಉತ್ಪಾದನಾ ಚಟುವಟಿಕೆಗೆ ನಿರ್ಬಂಧ ವಿಧಿಸಲಾಗುವುದು ಎಂದು ತಿಳಿಸಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.