ಲಾಕ್‌ಡೌನ್‌ ನೆಪ: ಹಣ್ಣು, ತರಕಾರಿಗೆ ತರಹೇವಾರಿ ದರ


Team Udayavani, Apr 18, 2020, 6:29 AM IST

ಲಾಕ್‌ಡೌನ್‌ ನೆಪ: ಹಣ್ಣು, ತರಕಾರಿಗೆ ತರಹೇವಾರಿ ದರ

ಮಂಗಳೂರು: ಲಾಕ್‌ಡೌನ್‌ ಹಾಗೂ ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ವ್ಯವಹಾರ ಸ್ಥಗಿತವಾಗಿರುವ ಸಂದರ್ಭ ಹಣ್ಣು-ತರಕಾರಿಗಳಿಗೆ ನಗರದ ಒಂದೊಂದು ಮಾರುಕಟ್ಟೆಯಲ್ಲಿ ಒಂದೊಂದು ದರ ವಸೂಲು ಮಾಡಲಾಗುತ್ತಿದೆ. ಕೆಲವು ಕಡೆ ಮನಬಂದಂತೆ ಹಣ ವಸೂಲಿ ಮೂಲಕ ವ್ಯಾಪಾರಿಗಳು ಹಗಲು ದರೋಡೆ ನಡೆಸುತ್ತಿರುವ ಆರೋಪಗಳೂ ಕೇಳಿ ಬರುತ್ತಿವೆ.

ಆವಶ್ಯಕ ವಸ್ತುಗಳ ಮಾರಾಟಕ್ಕೆ ಬೆಳಗ್ಗೆ 7ರಿಂದ 12 ಗಂಟೆ ತನಕ ಮಾತ್ರ ಅವಕಾಶ ಇದ್ದು, ಈ ಸೀಮಿತ ಅವಧಿಯಲ್ಲಿ ವ್ಯಾಪಾರಿಗಳು ಹೇಳಿದಷ್ಟು ಹಣ ತೆತ್ತು ಸಿಕ್ಕಿದ್ದನ್ನು ಕೊಂಡೊಯ್ಯುವ ಅನಿವಾರ್ಯ ಗ್ರಾಹಕರದು. ಕೆಲವು ವ್ಯಾಪಾರಿಗಳು ಇದನ್ನೇ ಸುಸಂದರ್ಭ ಎಂದುಕೊಂಡು ಬೇಕಾಬಿಟ್ಟಿ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ಪತ್ರಿಕಾ ಕಚೇರಿಗೆ ದೂರುಗಳು ಬರುತ್ತಿವೆ.

ಕೇಂದ್ರ ಮಾರುಕಟ್ಟೆಯ ತರಕಾರಿ ಮತ್ತು ಹಣ್ಣು-ಹಂಪಲು ಸಗಟು ವ್ಯವಹಾರವನ್ನು ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದ್ದು, ಮಾರ್ಕೆಟ್‌ನಲ್ಲಿ ಹೊಸ ಕಟ್ಟಡ ನಿರ್ಮಿಸಲು ಉದ್ದೇಶಿಸಿರುವ ಕಾರಣ ಅಲ್ಲಿ ರಿಟೇಲ್‌ ವ್ಯಾಪಾರವನ್ನು ರದ್ದುಪಡಿಸಲಾಗಿದೆ. ಆದ್ದರಿಂದ ತರಕಾರಿ ಮಾರಾಟಕ್ಕೆ ನಿದಿಷ್ಟ ವ್ಯವಸ್ಥೆಯಿಲ್ಲ. ಬೈಕಂಪಾಡಿಯ ಸಗಟು ವ್ಯಾಪಾರಿಗಳಿಂದ ಖರೀದಿಸುವ ರಿಟೇಲ್‌ ವ್ಯಾಪಾರಿಗಳು ತಾವೇ ಒಂದು ದರ ನಿಗದಿಪಡಿಸಿ ಗ್ರಾಹಕರಿಗೆ ಮಾರುತ್ತಾರೆ.

ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ರಿಟೇಲ್‌ ವ್ಯಾಪಾರ ಇದ್ದಾಗ ಅಲ್ಲಿರುವ ದರಗಳನ್ನು ಪರಿಗಣಿಸಿ ಇತರ ಮಾರ್ಕೆಟ್‌ಗಳಲ್ಲಿ ತರಕಾರಿಗಳ ದರ ನಿಗದಿ ಮಾಡಲಾಗುತ್ತಿತ್ತು. ಆದರೆ ಈಗ ಒಂದೊಂದು ಕಡೆ ಒಂದೊಂದು ದರ ಇದೆ. ಮಹಾನಗರ ಪಾಲಿಕೆ ಮತ್ತು ಜಿಲ್ಲಾಡಳಿತವು ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಇರುವ ದರವನ್ನು ಮಾನದಂಡವಾಗಿ ಪರಿಗಣಿಸುತ್ತಿವೆ. ಆದರೆ ಈಗ ಎಲ್ಲ ವ್ಯಾಪಾರಿಗಳೂ ಅದೇ ಮಾನದಂಡ ಅನುಸರಿಸುತ್ತಿದ್ದಾರೆ ಎನ್ನುವುದಕ್ಕೆ ಯಾವ ಆಧಾರವೂ ಇಲ್ಲ. (ಈ ಹಿಂದೆ ಸೆಂಟ್ರಲ್‌ ಮಾರ್ಕೆಟ್‌ನಲ್ಲಿ ತರಕಾರಿ ದರಗಳು ಹಾಪ್‌ಕಾಮ್ಸ್‌ನ ದರಗಳಿಗಿಂತ ಕಡಿಮೆ ಇದ್ದವು ಎನ್ನುವುದು ಬೇರೆ ಪ್ರಶ್ನೆ).

ಬಿಲ್‌ ಸಹಿತ ದೂರು ನೀಡಿ
ಗ್ರಾಹಕರು ಖರೀದಿಸಿದ ಸಾಮಗ್ರಿಗೆ ಅಂಗಡಿಯವರಿಂದ ಬಿಲ್‌ ತೆಗೆದುಕೊಳ್ಳಬೇಕು. ಅಧಿಕ ಹಣ ವಸೂಲಿ ಮಾಡಿದ್ದಾರೆ ಎನಿಸಿದರೆ ಅಂತಹ ವ್ಯಾಪಾರಿಯ ವಿರುದ್ಧ ಬಿಲ್‌ನ ಪ್ರತಿಯ ಸಹಿತ ಪಾಲಿಕೆಗೆ ದೂರು ನೀಡಬಹುದು. ಹಾಗಾದರೆ ನಮಗೆ ವಿಚಾರಣೆ ನಡೆಸಿ ವ್ಯಾಪಾರಿಯ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತದೆ.
 - ಅಜಿತ್‌ ಕುಮಾರ್‌ ಹೆಗ್ಡೆ ಶಾನಾಡಿ, ಮನಪಾ ಆಯುಕ್ತರು

ಗ್ರಾಮಾಂತರದಲ್ಲಿ ಇದೆ ದರ ಪಟ್ಟಿ
ಗ್ರಾಮಾಂತರ ಪ್ರದೇಶಗಳಲ್ಲಿನ ಅಂಗಡಿಗಳಲ್ಲಿ ದರ ಪಟ್ಟಿ ನಮೂದಿಸುವಂತೆ ಸ್ಥಳೀಯಾಡಳಿತಗಳು ಸೂಚಿಸಿವೆ. ಆದರೆ ಮಂಗಳೂರಿನಲ್ಲಿ ಅಂತಹ ವ್ಯವಸ್ಥೆ ಇಲ್ಲ. ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಮಾತ್ರ ದರ ಪಟ್ಟಿ ಇದೆ.

ವ್ಯಾಪಾರಿಗಳು ಮನಬಂದಂತೆ ವಸೂಲಿ ಮಾಡುತ್ತಿರುವ ವಿಚಾರವನ್ನು ಉದಯವಾಣಿಯು ನಗರ ಪಾಲಿಕೆಯ ಆಯುಕ್ತರ ಗಮನಕ್ಕೆ ತಂದಾಗ, ತರಕಾರಿ, ಹಣ್ಣು ಹಂಪಲುಗಳ ದರವನ್ನು ಹಾಪ್‌ಕಾಮ್ಸ್‌ ನಿಗದಿಪಡಿಸುತ್ತದೆ. ಹಾಪ್‌ಕಾಮ್ಸ್‌ ಮಳಿಗೆಗಳಲ್ಲಿ ಮತ್ತು ಇತರ ಮಾರ್ಕೆಟ್‌ಗಳಲ್ಲಿ ದರ ಸುಮಾರಾಗಿ ಒಂದೇ ರೀತಿಯಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

IPL 2024: 8 ಅಂಕ ಹೊಂದಿರುವ ಆರ್ ಸಿಬಿಗೆ ಇನ್ನೂ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ಲೆಕ್ಕಾಚಾರ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Summer: ಆಸೆಯ ಭಾವ ಜ್ಯೂಸೇ ಜೀವ.! ಸುಡು ಬೇಸಿಗೆಯಲ್ಲೂ ತಣ್ಣಗಿರೋಣ ಬನ್ನಿ…

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ

ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು

Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

Gayatri Siddeshwar: “ರಾಹುಲ್‌ ಪ್ರಧಾನಿಯಾಗಿಸುವ ಪಾಕಿಸ್ತಾನ ಷಡ್ಯಂತ್ರ ಫಲ ನೀಡಲ್ಲ’

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

Chikkamagaluru; ಭದ್ರಾ ನದಿ ನೀರಿನಲ್ಲಿ ಮುಳುಗಿ ಹನ್ನೆರಡರ ಬಾಲಕಿ ಸಾವು

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.