ಏನೇ ವ್ಯವಸ್ಥೆ ಮಾಡಿದರೂ ಅಸಮಾಧಾನ


Team Udayavani, Apr 18, 2020, 1:24 PM IST

ಏನೇ ವ್ಯವಸ್ಥೆ ಮಾಡಿದರೂ ಅಸಮಾಧಾನ

ಸಾಂದರ್ಭಿಕ ಚಿತ್ರ

ಬಾಗಲಕೋಟೆ: ಕೋವಿಡ್ 19 ನಿಯಂತ್ರಣಕ್ಕಾಗಿ ಎಲ್ಲೆಡೆ ಲಾಕ್‌ಡೌನ್‌ ಮುಂದುವರೆದಿದ್ದು, ನಗರದಲ್ಲಿ ಇಂದಿಗೂ ಅಶ್ವಗಳನ್ನೇ ನಂಬಿ ಜೀವನ ನಡೆಸುವ ಬಡ ಕುಟುಂಬಗಳ ಗೋಳು ಹೇಳತೀರದಾಗಿದೆ.

ನಗರದ ವಾರ್ಡ್‌ ನಂ.2ರಲ್ಲಿ ಪೆಂಡಾರ ಗಲ್ಲಿ ಸಹಿತ ಹಲವು ಏರಿಯಾಗಳಲ್ಲಿ ಸಾವಿರಾರು ಜನರು ಟಂಟಂ, ಬೀದಿ ಬದಿ ವ್ಯಾಪಾರ, ಕುದುರೆ ಟಾಂಗಾ, ಮದುವೆ-ಮುಂಜವಿಯಲ್ಲಿ ಕುದುರೆ ಸಾರೋಟ ಹೀಗೆ ವಿವಿಧ ಕೆಲಸಗಳನ್ನೇ ನಂಬಿ ಜೀವನ ನಡೆಸುತ್ತಿದ್ದವರು, ಈಗ ಕೋವಿಡ್ 19 ಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ರಾಜ್ಯ ಸರ್ಕಾರದ ಪಡಿತರ ಆಹಾರಧಾನ್ಯ ಬಿಟ್ಟರೆ ನಮಗೆ ಯಾವ ಸೌಲಭ್ಯವೂ ದೊರೆಯುತ್ತಿಲ್ಲ ಎಂದು ಅಲ್ಲಿನ ಜನರ ವಿಡಿಯೋ ಮಾಡಿ, ಜಿಲ್ಲಾಡಳಿತಕ್ಕೆ ರವಾನಿಸಿದ್ದಾರೆ.

ವ್ಯವಸ್ಥೆಯ ದುರ್ಲಾಭ!: ಲಾಕ್‌ಡೌನದಿಂದ ತೀವ್ರ ಸಮಸ್ಯೆ ಎದುರಿಸುತ್ತಿರುವ ಜನರಿಗೆ ರಿಯಾಯಿತಿ ದರದಲ್ಲಿ ದಿನಸಿ, ತರಕಾರಿಗಳನ್ನು ಮನೆ ಮನೆಗೆ ಕಲ್ಪಿಸುವ ವ್ಯವಸ್ಥೆಯನ್ನು ಕೆಲವರು ಉದಾರ ಮನಸ್ಸಿನಿಂದ ಮಾಡುತ್ತಿದ್ದಾರೆ. ಆದರೆ, ಇನ್ನೂ ಕೆಲವರು ಇದನ್ನೇ ದುರುಪಯೋಗ ಪಡಿಸಿಕೊಂಡು, ಮನಸ್ಸಿಗೆ ಬಂದ ದರಕ್ಕೆ ಮಾರಾಟ ಮಾಡುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬರುತ್ತಿದೆ. ದಿನಸಿ, ಔಷಧ ಸಹಿತ ಯಾವುದೇ ವಸ್ತುಗಳನ್ನು ಎಂಆರ್‌ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಜಿಲ್ಲಾಡಳಿತ, ತಾಲೂಕು ಆಡಳಿತ ನೀಡಿವೆ. ಆದರೆ, ಈ ಎಚ್ಚರಿಕೆಗೆ ಯಾರೂ ಕ್ಯಾರೆ ಅಂತಿಲ್ಲ. ಮನೆಗೆ ತಂದು ಕೊಡುವ ಸರ್ವಿಸ್‌ ಚಾರ್ಚ್‌ ಬೇರೆ ಎಂಬ ಸಬೂಬು ಹೇಳಿ, 50ರಿಂದ 100 ರೂ. ಹೆಚ್ಚಿಗೆ ಪಡೆಯುತ್ತಿದ್ದಾರೆ ಎಂದು ವಾರ್ಡ್‌ 2ರ ನಿವಾಸಿ ದೀಪಕ ಹಂಚಾಟೆ “ಉದಯವಾಣಿ’ಗೆ ತಿಳಿಸಿದರು.

ಅರ್ಧ ತಿಂಗಳಾದರೂ ನಿಖರವಿಲ್ಲ: ಎ.2ರಂದು ನಗರದಲ್ಲಿ ಮೊಟ್ಟ ಮೊದಲ ಬಾರಿಗೆ ಕೋವಿಡ್ 19 ಸೋಂಕು ಪತ್ತೆಯಾಗಿದ್ದು, ಅಲ್ಲಿಂದ ಇಲ್ಲಿಯ ವರೆಗೆ ಒಟ್ಟು 14 ಜನರಿಗೆ ಸೋಂಕು ತಗುಲಿದೆ. ಮೊದಲ ಬಾರಿಗೆ ಸೋಂಕು ಪತ್ತೆಯಾದ ವೃದ್ಧ ಅಸುನೀಗಿದ್ದಾರೆ. ಅವರ ಮನೆಯಲ್ಲಿ ಪತ್ನಿ, ಸಹೋದರನಿಗೂ ಸೋಂಕು ತಗುಲಿದೆ. ಜತೆಗೆ ಅವರ ಮನೆಯ ಅಕ್ಕ-ಪಕ್ಕದ ಒಟ್ಟು 11 ಜನರಿಗೆ ಈ ಸೋಂಕು ತಗುಲಿದೆ. ಇದರ ಹೊರತು, ಮುಧೋಳಕ್ಕೆ ಬಂದಿದ್ದ ಗುಜರಾತನ ಧರ್ಮ ಗುರು, ಆತನೊಂದಿಗೆ ಸಂಪರ್ಕವಿದ್ದು, ಮುಧೋಳ ತಾಲೂಕಿನ ಮುಗಳಖೋಡದ ಓರ್ವ ಯುವಕ ಹಾಗೂ ಮದರಸಾ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸಿದ  ಪೊಲೀಸ್‌ ಪೇದೆಗೆ ಸೇರಿ ಮುಧೋಳದಲ್ಲಿ ಮೂವರಿಗೆ ಸೋಂಕು ದೃಢಪಟ್ಟಿದೆ. ಮೊದಲ ಪ್ರಕರಣ ಪತ್ತೆಯಾಗಿ ಈಗ ಬರೋಬ್ಬರಿ ಅರ್ಧ ತಿಂಗಳು ಕಳೆಯಿತು.

ಆದರೂ, ನಗರಕ್ಕೆ ಈ ಸೋಂಕು ಬಂದಿದ್ದು ಹೇಗೆ ಎಂಬುದು ಇಂದಿಗೂ ನಿಖರವಾಗಿ ಪತ್ತೆಯಾಗಿಲ್ಲ. ಈ ಕುರಿತು ಆರೋಗ್ಯ ಇಲಾಖೆ, ಜಿಲ್ಲಾಡಳಿತ ಎಷ್ಟೇ ತಲೆಕೆಡಿಸಿಕೊಂಡು ತನಿಖೆ ನಡೆಸಿದರೂ, ಸೋಂಕಿತರು ಆರಂಭದಲ್ಲಿ ತಮ್ಮ ಪ್ರಯಾಣದ ಬಗ್ಗೆ ನಿಖರವಾಗಿ ವಿವರ ಹೇಳಿ, ಸಹಕಾರ ನೀಡಿರಲಿಲ್ಲ ಎಂದು ಸ್ವತಃ ಎಸ್ಪಿಯವರೇ ಹೇಳಿದ್ದರು. ಸತ್ಯ ಹೇಳಿ, ಕೊರೊನಾ ವಿರುದ್ಧ ಹೋರಾಡಬೇಕಾದ ಅನಿವಾರ್ಯತೆಯನ್ನು ಪ್ರತಿಯೊಬ್ಬರೂ ಅರ್ಥ ಮಾಡಿಕೊಳ್ಳಬೇಕಿದೆ.

ಮೊದಲ ಪ್ರಕರಣ ಹೇಗಾಯ್ತು ? :ನಗರದಲ್ಲಿ ಸೋಂಕಿನಿಂದ ಮೃತಪಟ್ಟ ವೃದ್ಧನ ಸಹೋದರನಿಂದಲೇ ಕೋವಿಡ್ 19  ಇಲ್ಲಿಗೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಅದೂ ನಿಖರವಾಗಿಲ್ಲ. ಏ.2ರಂದು 76 ವರ್ಷದ ವೃದ್ಧನಿಗೆ ಸೋಂಕು ದೃಢಪಟ್ಟಿತ್ತು. ಏ.3ರಂದು ರಾತ್ರಿ ಆತ ಮೃತಪಟ್ಟಿದ್ದ. ವೃದ್ಧನಿಗೆ ಸೊಂಕು ದೃಢಪಟ್ಟ ಬಳಿಕ ಆತನ ಪುತ್ರ, ಪುತ್ರಿ ಬೆಂಗಳೂರಿನಿಂದ ಬಂದಿದ್ದು, ಅವರ ತಪಾಸಣೆ ಮೊದಲು ಮಾಡಲಾಯಿತು. ಅವರಿಗೆ ನೆಗೆಟಿವ್‌ ಬಂತು. ವೃದ್ಧನ ಪತ್ನಿ ಹಾಗೂ ಸಹೋದರನಿಗೆ ಪಾಜಿಟಿವ್‌ ಬಂದಿದ್ದೇ ತಡ, ಜಿಲ್ಲಾಡಳಿತ ಮತ್ತಷ್ಟು ಸೀರಿಯಸ್‌ ಆಯಿತು. ವೃದ್ಧನಿಗೆ ಯಾವುದೇ ಟ್ರಾವೆಲ್‌ ಹಿಸ್ಟರಿ ಇರಲಿಲ್ಲ. ಪತ್ನಿಯೂ ಮನೆಬಿಟ್ಟು ಹೋರ ಹೋಗಿರಲಿಲ್ಲ. ಆದರೆ, ವೃದ್ಧನ ಸಹೋದರ ಮಾ.15ರಂದು ಬಾಗಲಕೋಟೆಯಿಂದ ರೈಲು ಮೂಲಕ ಕಲಬುರಗಿಗೆ ಹೋಗಿ, ಮಾ.16ರಂದು ಬಸ್‌ ಮೂಲಕ ವಿಜಯಪುರಕ್ಕೆ ಬಂದು ಅಲ್ಲಿಂದ ಬಾಗಲಕೋಟೆಗೆ ಬಂದಿದ್ದ. ಮಾ.22ರ ವರೆಗೂ ಅವರ ಇಡೀ ಮನೆಯಲ್ಲಿ ಯಾವ ಸಮಸ್ಯೆಯೂ ಇರಲಿಲ್ಲ. ಮಾ.23ರಂದು ವೃದ್ಧನಿಗೆ ಕ್ರಮೇಣ ಜ್ವರ ಕಾಣಿಸಿಕೊಂಡಿತ್ತು. ಆಗ ಮೊದಲು ಆಯುರ್ವೇದ್‌ ಔಷಧ, ಬಳಿಕ ಖಾಸಗಿ ವೈದ್ಯರಿಗೆ ತೋರಿಸಿದ್ದರು. ಮಾ.31ರಂದು ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಏ.2ರಂದು ಕೊರೊನಾ ದೃಢಪಟ್ಟು, ಮಾ.3ರಂದು ರಾತ್ರಿ ಅವರ ಸಾವು, ಕೋವಿಡ್ 19 ಕ್ಕೆ ಜಿಲ್ಲೆಯಲ್ಲಿ ಮೊದಲ ಬಲಿ ಆಯಿತು. ಆದರೆ, ಈ ವೃದ್ಧನಿಗೆ ಅವರ ಸಹೋದರನಿಂದಲೇ ಈ ಸೋಂಕು ಬಂತಾ ಎಂಬುದು ಇನ್ನೂ ಖಚಿತವಾಗದೇ ಇರುವುದು ಮತ್ತಷ್ಟು ಭೀತಿ ಹೆಚ್ಚಿಸಿದೆ. ಇನ್ನು ಮುಧೋಳದಲ್ಲಿ ಧರ್ಮ ಗುರುಗೆ (ಅವರು ಡಿಸೆಂಬರ್‌ 23ರಂದೇ ಜಿಲ್ಲೆಗೆ ಬಂದಿದ್ದರು) ಹೇಗೆ ಸೋಂಕು ಬಂತು ಎಂಬುದೂ ಅಧಿಕೃತಗೊಂಡಿಲ್ಲ. ಹೀಗಾಗಿ ಕೋವಿಡ್ 19, ಜಿಲ್ಲೆಯ ಜನರಿಗೆ ಭೀತಿ ಹುಟ್ಟಿಸಿದೆ ಎನ್ನಲಾಗಿದೆ.

ನಗರದಲ್ಲಿ ಕೋವಿಡ್ 19  ಸೋಂಕು ಪತ್ತೆಯಾಗಿದ್ದರಿಂದ ಜನರ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ವಾರ್ಡ್‌ ನಂ.2 ಕೂಡ ನಿಷೇಧಿತ ಪ್ರದೇಶವಾಗಿದೆ. ಅಲ್ಲಿನ ಜನರಿಗೆ ದಿನಸಿ, ತರಕಾರಿ, ಔಷಧ ಮನೆ ಮನೆಗೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಅವರು ನಾವು ನೀಡಿದ ಮೊಬೈಲ್‌ಗ‌ಳಿಗೆ ಕರೆ ಮಾಡಿ, ಹಣ ಪಾವತಿಸಿ, ತಮಗೆ ಬೇಕಾದ ವಸ್ತು ಪಡೆಯಬೇಕು.  ಜಿ.ಎಸ್‌. ಹಿರೇಮಠ, ತಹಶೀಲ್ದಾರ್‌, ಬಾಗಲಕೋಟೆ

 

-ಶ್ರೀಶೈಲ ಕೆ. ಬಿರಾದಾರ

 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.