ಆಂಶಿಕ ಸಡಿಲಿಕೆಯಿಂದ ಹೆಚ್ಚದಿರಲಿ ಸೋಂಕು

ಎ.20ರಿಂದ ಲಾಕ್‌ಡೌನ್‌ ಸಡಿಲಿಕೆಯ ಗೊಂದಲ ; ವಿರೋಧದ ಬಳಿಕ ಕೆಲವು ಅಂಶ ವಾಪಸ್‌

Team Udayavani, Apr 19, 2020, 6:00 AM IST

ಆಂಶಿಕ ಸಡಿಲಿಕೆಯಿಂದ ಹೆಚ್ಚದಿರಲಿ ಸೋಂಕು

ಬೆಂಗಳೂರು/ಹೊಸದಿಲ್ಲಿ: ಕೋವಿಡ್‌-19 ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ನಡುವೆಯೇ ಎಪ್ರಿಲ್‌ 20ರಿಂದ ಲಾಕ್‌ಡೌನ್‌ ಭಾಗಶಃ ಸಡಿಲವಾಗಲಿದೆ. ಆದರೆ ರಾಜ್ಯದಲ್ಲಿ ಸರಕಾರವು ಕೆಲವು ಸಡಿಲಿಕೆ ಆದೇಶಗಳನ್ನು ಜಾರಿಗೊಳಿಸಲು ಮೊದಲಿಗೆ ನಿರ್ಧರಿಸಿತ್ತಾದರೂ ಬಳಿಕ ವಾಪಸ್‌ ಪಡೆದ ಪರಿಣಾಮ ಗೊಂದಲ ಮುಂದುವರಿದಿದೆ.

ಕೇಂದ್ರ ಸರಕಾರ ಕೆಲವು ವಲಯಗಳಿಗೆ ವಿನಾಯಿತಿ ನೀಡಿರುವಂತೆ ರಾಜ್ಯ ಸರಕಾರವೂ ಐಟಿ-ಬಿಟಿ ಸೇರಿ ಕೆಲವು ವಲಯಕ್ಕೆ ಅವಕಾಶ ನೀಡಿದೆ. ಸಾರ್ವಜನಿಕ ವಲಯ, ಗೃಹ ಇಲಾಖೆ ಮತ್ತು ಕೆಲವು ಸಚಿವರು ಲಾಕ್‌ಡೌನ್‌ ಸಡಿಲಿಕೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ದ್ವಿಚಕ್ರ ವಾಹನ ಸಂಚಾರಕ್ಕೆ ಅವಕಾಶ ಕೊಡುವ ಆದೇಶವನ್ನು ಹಿಂಪಡೆಯಲಾಯಿತು. ಇಷ್ಟೇ ಅಲ್ಲದೆ ಕಟ್ಟಡ ಮತ್ತು ರಸ್ತೆ ಕಾಮಗಾರಿ, ಬೆಂಗಳೂರು, ರಾಮನಗರ, ಬೆಂ.ಗ್ರಾಮಾಂತರ ಜಿಲ್ಲೆಗಳ ನಡುವಿನ ಸಂಚಾರಕ್ಕೆ ವಿರೋಧ ವ್ಯಕ್ತವಾದ ಕಾರಣ ಆ ಆದೇಶವನ್ನೂ ಪುನರ್‌ ಪರಿಶೀಲಿಸಲು ತೀರ್ಮಾನಿಸಲಾಯಿತು. ಈ ಬಗ್ಗೆ ಕೇಂದ್ರದ ಸಲಹೆ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ.

ಶನಿವಾರ ಹಿರಿಯ ಸಚಿವರು ಮತ್ತು ಅಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದ ಸಿಎಂ, ಮೇ 3ರ ವರೆಗೂ ನಿಷೇಧಾಜ್ಞೆ ಮುಂದುವರಿಯಲಿದೆ. ಕಂಟೋನ್‌ಮೆಂಟ್‌ ಝೋನ್‌ಗಳಲ್ಲಿ ಯಾವುದೇ ಚಟುವಟಿಕೆಗೆ ಅವಕಾಶ ನೀಡಲಾಗುವುದಿಲ್ಲ ಎಂದರು.

ಸಿಎಂ ಹೇಳಿದ್ದೇನು?
1.ಕಂಟೈನ್‌ ಮೆಂಟ್‌ ವಲಯದಲ್ಲಿ ಲಾಕ್‌ಡೌನ್‌ ಇನ್ನಷ್ಟು ಕಟ್ಟುನಿಟ್ಟು ಜಾರಿ. ಯಾರೂ ಮನೆಯಿಂದ ಹೊರಬರುವಂತಿಲ್ಲ. ಅಗತ್ಯ ವಸ್ತುಗಳು ಮನೆ ಬಾಗಿಲಿಗೆ ರವಾನೆ.
2.ಐಟಿ-ಬಿಟಿ ವಲಯಗಳಲ್ಲಿ ಶೇ. 33ರಷ್ಟು ಮಂದಿ ಕಚೇರಿಗಳಿಗೆ ಹಾಜರಾಗಲು ಅನುಮತಿ.
3.ನಗರ ಪ್ರದೇಶದಲ್ಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಉಳಿದುಕೊಳ್ಳುವ ವ್ಯವಸ್ಥೆ ಇರುವಲ್ಲಿ ನಿರ್ಮಾಣ ಚಟುವಟಿಕೆಗಳ ಪ್ರಾರಂಭಕ್ಕೆ ಅನುಮತಿ.
4.ಗ್ರಾಮೀಣ ಪ್ರದೇಶದಲ್ಲಿ ಉತ್ಪಾದನ ವಲಯದ ಕೈಗಾರಿಕೆಗಳು ಮತ್ತು ನಗರ ಪ್ರದೇಶದಲ್ಲಿ ಎಸ್‌ಇಝಡ್‌ಗಳು, ಕೈಗಾರಿಕಾ ವಸಾಹತುಗಳು, ಕೈಗಾರಿಕಾ ಟೌನ್‌ಶಿಪ್‌ಗ್ಳಲ್ಲಿ ಕೈಗಾರಿಕೆಗಳು ಕಾರ್ಯ ನಿರ್ವಹಣೆಗೆ ಅವಕಾಶ.
5.ಅಂತರ್‌ಜಿಲ್ಲೆ ಪ್ರಯಾಣಕ್ಕೆ ಅವಕಾಶವಿಲ್ಲ. ಕೈಗಾರಿಕಾ ಉದ್ಯೋಗಿಗಳ ಓಡಾಟದ ದೃಷ್ಟಿಯಿಂದ ಬೆಂಗಳೂರು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಂದು ಜಿಲ್ಲೆಯಾಗಿ ಪರಿಗಣನೆ.
6.ಹಿರಿಯ ನಾಗರಿಕರು ಮನೆಯಿಂದ ಹೊರಬರಲು ಅವಕಾಶವಿಲ್ಲ. ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಕಡ್ಡಾಯ. ಎಲ್ಲೆಂದರಲ್ಲಿ ಉಗುಳುವುದಕ್ಕೆ ನಿಷೇಧ.

ನಿರ್ಮಾಣ ವಲಯಕ್ಕೆ ಅನುಮತಿ
ನಗರ ಪ್ರದೇಶಗಳಲ್ಲಿ ಕಾರ್ಮಿಕರಿಗೆ ಸ್ಥಳೀಯವಾಗಿ ಉಳಿದುಕೊಳ್ಳುವ ವ್ಯವಸ್ಥೆ ಇರುವ ಕಡೆ ನಿರ್ಮಾಣ ಚಟುವಟಿಕೆ ಪ್ರಾರಂಭಿಸಲು ಸರಕಾರ ಅನುಮತಿ ನೀಡಿದೆ. ನಿರ್ಮಾಣಕ್ಕೆ ಬೇಕಾದ ಸರಕು ಸಾಗಣೆಗೂ ಅವಕಾಶ ಕಲ್ಪಿಸಿದೆ. ಇದರಿಂದ ಪ್ಲಂಬರ್‌, ಪೈಂಟರ್‌, ಎಲೆಕ್ರೀಶಿಯನ್‌ ಮತ್ತು ಇತರ ಕಾರ್ಮಿಕರಿಗೂ ಸಂಚಾರ ಮತ್ತು ಕಾರ್ಯನಿರ್ವಹಣೆಗೆ ಅವಕಾಶ ಕೊಡ ಬೇಕಾಗುತ್ತದೆ. ಆಗ ದೊಡ್ಡ ಪ್ರಮಾಣದಲ್ಲಿ ಕಾರ್ಮಿಕರ ಅಗತ್ಯ ಉಂಟಾಗಿ ಸಂಚಾರ ಹೆಚ್ಚಿದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಜತೆಗೆ ನಿರ್ಮಾಣ ಕಾಮಗಾರಿ ಪ್ರಾರಂಭವಾದಾಗ ಪ್ರಸ್ತುತ ಕಾರ್ಮಿಕ ಇಲಾಖೆಯಡಿ ಆಶ್ರಯ ಪಡೆದಿರುವ ಕಾರ್ಮಿಕರು ಕೆಲಸಕ್ಕೆ ಹೋಗಲು ಅವಕಾಶ ಕೊಡಿ ಎಂದು ಪಟ್ಟು ಹಿಡಿದರೆ, ಗುತ್ತಿಗೆದಾರರು ಕಾರ್ಮಿಕರನ್ನು ಹೆಚ್ಚು ಹೆಚ್ಚು ಕೆಲಸಕ್ಕೆ ಕರೆದುಕೊಂಡರೆ ಪರಿಸ್ಥಿತಿ ಬಿಗಡಾಯಿಸಬಹುದು ಎಂಬ ಆತಂಕವೂ ಇದೆ.

ಟಾಪ್ ನ್ಯೂಸ್

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

bjpMLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್‌ಡಿಕೆ ಎಚ್ಚರಿಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

GalaxyCI

GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.