ನಿರಾಶ್ರಿತರ ಆರೋಗ್ಯ ತಪಾಸಣೆ
Team Udayavani, Apr 19, 2020, 1:28 PM IST
ಚಳ್ಳಕೆರೆ: ನಗರದ ಕಿತ್ತೂರು ರಾಣಿ ಚನ್ನಮ್ಮ ಮತ್ತು ಮೊರಾರ್ಜಿ ವಸತಿ ಶಾಲೆಯಲ್ಲಿರುವ ನಿರಾಶ್ರಿತರ ಆರೋಗ್ಯ ತಪಾಸಣೆ ನಡೆಸಲಾಯಿತು.
ಚಳ್ಳಕೆರೆ: ಕಳೆದ ಮೂರು ದಿನಗಳಿಂದ ನಗರದ ಕಿತ್ತೂರು ರಾಣಿ ಚನ್ನಮ್ಮ ಮತ್ತು ಮೊರಾರ್ಜಿ ವಸತಿ ಶಾಲೆಯಲ್ಲಿ ತಾತ್ಕಾಲಿಕವಾಗಿ ವಾಸವಾಗಿರುವ ನಿರಾಶ್ರಿತರ ಆರೋಗ್ಯ ತಪಾಸಣೆಯನ್ನು ಶನಿವಾರ ನಡೆಸಲಾಯಿತು.
ತಾಲೂಕು ಆರೋಗ್ಯಾಧಿಕಾರಿ ಡಾ| ಎನ್. ಪ್ರೇಮಸುಧಾ, ಮೊಳಕಾಲ್ಮೂರು ಸಮಾಜ ಕಲ್ಯಾಣಾಧಿಕಾರಿ ಗುರುಮೂರ್ತಿ, ಚಳ್ಳಕೆರೆ ತಾಲೂಕು ಪರಿಶಿಷ್ಟ ವರ್ಗದ ಕಲ್ಯಾಣಾಧಿಕಾರಿ ಮಾಲತಿ, ಸರ್ಕಾರಿ ಆಸ್ಪತ್ರೆ ಆಡಳಿತಾಧಿಕಾರಿ ಡಾ| ಬಸವರಾಜು, ಡಾ| ವೆಂಕಟೇಶ್, ಡಾ| ಶಮಾ ಪರ್ವಿನ್, ಆರೋಗ್ಯ ಇಲಾಖೆಯ ಎನ್. ಪ್ರೇಮಕುಮಾರ್, ತಿಪ್ಪೇಸ್ವಾಮಿ ಹಾಗೂ ಸಿಬ್ಬಂದಿ ಇದ್ದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ನೀಡಿದ ಕೊಬ್ಬರಿ ಎಣ್ಣೆ, ಸೋಪು ಹಾಗೂ ಸ್ಯಾನಿಟೈಸರ್ಗಳನ್ನು ವಿತರಿಸಲಾಯಿತು.
ಡಾ| ಎನ್. ಪ್ರೇಮಸುಧಾ ಮಾತನಾಡಿ, ಒಟ್ಟು 7 ಜನ ಗರ್ಭಿಣಿಯರಿದ್ದು, ಎಲ್ಲರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಯಾವುದೇ ಸಮಸ್ಯೆ ಉಂಟಾದಲ್ಲಿ ಕೂಡಲೇ ಸಂಪರ್ಕಿಸುವಂತೆ ಮನವಿ ಮಾಡಿದರು. ಎರಡು ಬಾರಿ ಎಲ್ಲರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಕೆಲವರಿಗೆ ಮಾತ್ರ ತಲೆನೋವು, ಇನ್ನಿತರೆ ಸಣ್ಣಪುಟ್ಟ ಸಮಸ್ಯೆಗಳಿವೆ. ಅವರಿಗೆ ಮಾತ್ರೆಗಳನ್ನು ವಿತರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ
Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ