ಪಾದರಾಯನಪುರದಲ್ಲಿ ಕ್ವಾರೆಂಟೈನ್ ಮಾಡಲು ಹೋದವರ ಮೇಲೆ ಪುಂಡರ ಹಲ್ಲೆ
ಲಾಕ್ ಡೌನ್ ಚೆಕ್ ಪೋಸ್ಟ್ ಪುಡಿಗಟ್ಟಿ ಪೊಲೀಸರನ್ನೇ ಬೆದರಿಸಿದ ಕಿಡಿಗೇಡಿಗಳು
Team Udayavani, Apr 20, 2020, 12:16 AM IST
ಬೆಂಗಳೂರು: ನಗರದ ಪಾದರಾಯನಪುರದಲ್ಲಿ ಮತ್ತೆ ಕೋವಿಡ್ ಯೋಧರ ಮೇಲೆ ಸ್ಥಳೀಯರು ಹಲ್ಲೆ ನಡೆಸಿರುವ ಘಟನೆ ಇಂದು ರಾತ್ರಿ ನಡೆದಿದೆ.
ಇಲ್ಲಿನ 58 ಜನರನ್ನು ಕ್ವಾರೆಂಟೈನ್ ಮಾಡಲೆಂದು ತೆರಳಿದ್ದ ಆರೋಗ್ಯ ಯೋಧರ ಮೇಲೆ ಸ್ಥಳೀಯ ಕೆಲ ಪುಂಡರು ಹಲ್ಲೆಗೆ ಯತ್ನಿಸಿದ್ದಾರೆ ಮತ್ತು ಇದನ್ನು ತಡೆಯಲು ಬಂದ ಸೀಮಿತ ಪೊಲೀಸ್ ಪಡೆಗಳ ಮೇಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಪುಂಡರು ಹಲ್ಲೆ ನಡೆಸಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಇಂದು ರಾತ್ರಿಯಾಗುತ್ತಿದ್ದಂತೆ ಈ ಪ್ರದೇಶದ ಕೆಲ ಶಂಕಿತ ವ್ಯಕ್ತಿಗಳು ರೌಡಿಗಳ ರೀತಿಯಲ್ಲಿ ಅಟ್ಟಹಾಸ ಮೆರೆದಿದ್ದು ಲಾಕ್ ಡೌನ್ ಸಂಬಂಧ ಹಾಕಲಾಗಿದ್ದ ಚೆಕ್ ಪೋಸ್ಟನ್ನು ಪುಡಿಗೈದಿದ್ದಾರೆ. ಕಡಿಮೆ ಸಂಖ್ಯೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಅಸಮರ್ಥರಾದರು.
ವಾಹನಗಳ ಸಹಿತ ಏಕಾಏಕಿ ಗುಂಪುಕಟ್ಟಿಕೊಂಡು ಬಂದ ಈ ಕಿಡಿಗೇಡಿಗಳು ಪರಿಸ್ಥಿತಿಯ ಲಾಭವನ್ನು ಪಡೆದು ದಾಂಧಲೆ ಎಸಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಈಗಾಗಲೇ ವಶಕ್ಕೆ ಪಡೆದುಕೊಂಡಿದ್ದಾರೆ. ಸ್ಥಳಕ್ಕೆ ಹೆಚ್ಚಿನ ಪೊಲೀಸ್ ಪಡೆಯನ್ನು ಕಳುಹಿಸಲಾಗಿದೆ.
ಕೋವಿಡ್ ಸೋಂಕಿತರ ಎರಡನೇ ಸಂಪರ್ಕಿತರನ್ನು ಕ್ವಾರೆಂಟೈನ್ ಕೇಂದ್ರಗಳಿಗೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು
MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್ಡಿಕೆ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು