ಕೋವಿಡ್ ಹೊಡೆತಕ್ಕೆ ಮಳೆ-ಗಾಳಿ ಬರೆ
ಬಿರುಗಾಳಿಗೆ ಹಾಳಾದ ಪಪ್ಪಾಯಿ-ದ್ರಾಕ್ಷಿ| ಬೆಳೆ ಹಾನಿಗೆ ಸ್ಪಂದಿಸಲು ಸರ್ಕಾರಕ್ಕೆ ಒತ್ತಾಯ
Team Udayavani, Apr 20, 2020, 10:37 AM IST
ಅಫಜಲಪುರ: ಪಟ್ಟಣದ ಹೊರವಲಯದಲ್ಲಿ ಇರುವ ಶರಣು ತಾವರಖೇಡ ಅವರ ಹೊಲದಲ್ಲಿ ಬಿರುಗಾಳಿಗೆ ಪಪ್ಪಾಯಿ ಗಿಡಗಳು ನೆಲ ಕಚ್ಚಿವೆ.
ಅಫಜಲಪುರ: ಕೋವಿಡ್ ಕಾರಣದಿಂದ ಎಲ್ಲೆಡೆ ಲಾಕ್ಡೌನ್ ಘೋಷಣೆಯಾಗಿದ್ದು ಒಂದೆಡೆಯಾದರೆ ಬಿರುಗಾಳಿ ಸಹಿತ ಮಳೆ ಬಂದು ಪಪ್ಪಾಯಿ ಹಾಗೂ ದ್ರಾಕ್ಷಿ ಬೆಳೆ ಹಾಳಾಗಿದ್ದು ರೈತರಿಗೆ ಉಂಟಾದ ಗಾಯದ ಮೇಲೆ ಬರೆ ಎಳೆದಂತಾಗಿದೆ.
ಪಟ್ಟಣದ ಹೊರವಲಯದಲ್ಲಿರುವ ರೈತ ಶರಣು ತಾವರಖೇಡ ಅವರಿಗೆ ಸೇರಿದ ಐದು ಎಕರೆ ಪಪ್ಪಾಯಿ ಬಿರುಗಾಳಿಗೆ ಮುರಿದು ಹಣ್ಣುಗಳೆಲ್ಲ ನೆಲದ ಪಾಲಾಗಿವೆ. ಇನ್ನೊಂದೆಡೆ ಪೀರಪ್ಪ ಮ್ಯಾಕೇರಿ ಅವರಿಗೆ ಸೇರಿದ ಎರಡು ಎಕರೆ ಜಮೀನಲ್ಲಿ ಬೆಳೆದ ದ್ರಾಕ್ಷಿ ಮಣ್ಣುಪಾಲಾಗಿದೆ. ಸಾಲ ಮಾಡಿ ಗೊಬ್ಬರ ಹಾಕಿ ಬೆಳೆಸಿದ್ದ ಪಪ್ಪಾಯಿ, ದ್ರಾಕ್ಷಿ ಕಟಾವಿಗೆ ಬಂದ ಸಮಯದಲ್ಲಿ ಬಿರುಗಾಳಿ ಹೊಡೆತಕ್ಕೆ ಸಿಲುಕಿನ ನೆಲಪಾಲಾಗಿದ್ದನ್ನು ಕಂಡು ರೈತರು ಕಣ್ಣೀರಿಟ್ಟಿದ್ದಾರೆ.
ಎಂದಿನಂತೆ ಮಾರುಕಟ್ಟೆ ವ್ಯವಸ್ಥೆ ಇದ್ದರೆ ಹಣ್ಣು ಮಾರಾಟ ಮಾಡಿ ಲಕ್ಷಾಂತರ ಲಾಭ ಪಡೆಯುವ ಆಸೆಯಲ್ಲಿದ್ದವರಿಗೆ ಈಗ ಮಾಡಿಕೊಂಡ ಸಾಲವನ್ನು ತೀರಿಸಲು ಸಾಧ್ಯವಾಗುತ್ತಿಲ್ಲ. ಒಟ್ಟಿನಲ್ಲಿ ರೈತರ ಜೀವನ ಮೂರಾಬಟ್ಟೆ ಆಗಿದ್ದು, ಸಂಬಂಧಪಟ್ಟವರು ರೈತರ ಕಷ್ಟಕ್ಕೆ ಸ್ಪಂದಿಸಿ, ಸಹಕಾರ ನೀಡಬೇಕೆಂದು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ