ಸುರಪುರದಲ್ಲಿ ಕಂಟೇನ್ಮೆಂಟ್‌ ಝೋನ್‌ ರಚನೆ

ಜನರು ಯಾವುದೇ ಕಾರಣಕ್ಕೂ ಮನೆ ಬಿಟ್ಟು ಹೊರ ಬರಲು ಅವಕಾಶವಿಲ್ಲ: ಜೀವನಕುಮಾರ

Team Udayavani, Apr 20, 2020, 11:36 AM IST

20-April-05

ಸುರಪುರ: ರಾಜಾ ನಾಲ್ವಡಿ ವೆಂಕಟಪ್ಪನಾಯಕ ವೃತ್ತದಿಂದ ನಗರಸಭೆವರೆಗೆ ಒಂದು ಬದಿ ರಸ್ತೆಯನ್ನು ಬಂದ್‌ ಮಾಡಿರುವುದು.

ಸುರಪುರ: ಕಟ್ಟುನಿಟ್ಟಾಗಿ ಲಾಕ್‌ಡೌನ್‌ ಜಾರಿಗೆ ತರಲು ನಗರಸಭೆ 3 ವಾರ್ಡ್‌ಗೆ ಒಂದರಂತೆ ಕಂಟೇನ್ಮೆಂಟ್‌ ಝೋನ್‌ (ನಿಯಂತ್ರಣ ವಲಯ) ರಚಿಸಲು ನಿರ್ಧರಿಸಿದೆ. ಪ್ರಾಯೋಗಿಕವಾಗಿ 1, 2, 14 ಮತ್ತು 29, 30, 31 ವಾರ್ಡ್ಗಳನ್ನು ಕಂಟೇನ್ಮೆಂಟ್‌ ಝೋನ್‌ಗಳಾಗಿ
ಘೋಷಿಸಲಾಗಿದೆ. ಸೋಮವಾರ ನಗರಸಭೆ ವ್ಯಾಪ್ತಿಯ 6 ವಾರ್ಡ್‌ಗಳನ್ನು ಕಂಟೇನ್ಮೆಂಟ್‌ ಝೋನ್‌ ವ್ಯಾಪ್ತಿಗೆ ತರಲಾಗುತ್ತಿದೆ.

ಕಂಟೇನ್ಮೆಂಟ್‌ ಝೋನ್‌ನಲ್ಲಿ ಬರುವ ಮನೆಗಳಿಗೆ ತರಕಾರಿ, ದಿನಸಿ, ಔಷ ಧ ಇತರ ಅಗತ್ಯ ಸಾಮಗ್ರಿಗಳನ್ನು ನಗರಸಭೆ ಸಿಬ್ಬಂದಿ ಇಲ್ಲವೇ ನಗರಸಭೆಯಿಂದ ನಿಯೋಜಿತರಾದ ಸ್ವಯಂ ಸೇವಕರು ತಲುಪಿಸಲಿದ್ದಾರೆ. ಯಾವುದೇ ಕಾರಣಕ್ಕೂ ಜನರು ಮನೆ ಬಿಟ್ಟು ಹೊರಬರಲು ಅವಕಾಶವಿಲ್ಲ. ಹೊರಗೆ ಬಂದರೆ ಅಗತ್ಯ ಕಾರಣ ತಿಳಿಸಬೇಕು. ಇಲ್ಲದಿದ್ದರೆ ಅವರ ಮೇಲೆ ಕಾನೂನು ಕ್ರಮ ತೆಗೆದು ಕೊಳ್ಳಲಾಗುತ್ತಿದೆ.

ಈಗಾಗಲೇ ಕಂಟೇನ್ಮೆಂಟ್‌ ಝೋನ್‌ ವ್ಯಾಪ್ತಿಯ ಮನೆಗಳಿಗೆ ಸಾಮಗ್ರಿ ಪೂರೈಸುವವರ ಮೊಬೈಲ್‌ ಸಂಖ್ಯೆ ನೀಡಲಾಗಿದೆ. ಮನೆ ಮಾಲೀಕರು ಅವರಿಗೆ ಫೋನ್‌ ಮಾಡಿ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳಬಹುದು. ಸಾಮಗ್ರಿ ಮುಟ್ಟಿದ ತಕ್ಷಣ ಹಣ ಕೊಡಬೇಕು ಎಂದು ನಗರಸಭೆ ಪೌರಾಯುಕ್ತ ಜೀವನಕುಮಾರ ಕಟ್ಟಿಮನಿ ತಿಳಿಸಿದರು.

ಲಾಕ್‌ಡೌನ್‌ ಇದ್ದರೂ ಜನರು ಅನಗತ್ಯವಾಗಿ ಹೊರಗೆ ತಿರುಗಾಡುವುದು ನಡೆದೇ ಇದೆ. ದ್ವಿಚಕ್ರ ವಾಹನಗಳ ಸಂಚಾರವೂ ಇದೆ. ಈಗಾಗಲೇ ಸಾಕಷ್ಟು ವಾಹನಗಳನ್ನು ಸೀಜ್‌ ಮಾಡಿದ್ದರೂ ಜನ ಕೇಳುತ್ತಿಲ್ಲ. ಕಾರಣ ಲಾಕ್‌ಡೌನ್‌ ಇನ್ನಷ್ಟು ಕಠಿಣಗೊಳಿಸಲು ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಈ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ಹಂತ ಹಂತವಾಗಿ ಎಲ್ಲ ವಾರ್ಡ್‌ಗಳನ್ನು ಕಂಟೇನ್ಮೆಂಟ್‌ ಝೋನ್‌ ವ್ಯಾಪ್ತಿಗೆ ತರಲಾಗುತ್ತದೆ. 10 ಕಂಟೇನ್ಮೆಂಟ್‌ ಝೋನ್‌ ರಚಿಸಲಾಗುವುದು. ನಾಗರಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.

ವಾಹನ ದಟ್ಟಣೆ ತಗ್ಗಿಸಲು ಮತ್ತು ಪೊಲೀಸರಿಗೆ ಸಂಚಾರ ನಿಯಂತ್ರಣಕ್ಕೆ ಅನುಕೂಲವಾಗಲು ರಾಜಾ ನಾಲ್ವಡಿ ವೆಂಕಟಪ್ಪನಾಯಕ ವೃತ್ತದಿಂದ ನಗರಸಭೆಯ ವರೆಗೆ ಒಂದು ಬದಿ ರಸ್ತೆಯನ್ನು ಕಲ್ಲುಗಳನ್ನು ಅಡ್ಡ ಹಾಕಿ ಬಂದ್‌ ಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.