ಯಾರೋ ವ್ಯಕ್ತಿಗಳು ಮಾಡಿದ ಕೃತ್ಯಕ್ಕೆ ಸಮಾಜವನ್ನು ದೋಷಿಸುವುದು ಸರಿಯಲ್ಲ: ಡಿ ಕೆ ಶಿವಕುಮಾರ್
Team Udayavani, Apr 20, 2020, 1:13 PM IST
ಬೆಂಗಳೂರು: ಪಾದರಾಯನಪುರ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಆದರೆ ಯಾರೋ ವ್ಯಕ್ತಿಗಳು ಮಾಡಿದ ಕೃತ್ಯಕ್ಕೆ ಸಮಾಜವನ್ನು ದೋಷಿಸುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವ ನಗರದ ತನ್ನ ನಿವಾಸದಲ್ಲಿ ಬೆಂಗಳೂರಿನ ಮುಸ್ಲಿಂ ನಾಯಕರ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪಾದರಾಯನಪುರ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ಸರ್ಕಾರ ತೆಗೆದುಕೊಳ್ಳುವ ಎಲ್ಲಾ ಒಳ್ಳೆಯ ನಿರ್ಧಾರಗಳಲ್ಲಿ ನಾವು ಸಹಕಾರ ಕೊಡುತ್ತೇವೆ. ನಾವು ಇಷ್ಟೇಲ್ಲ ಸಹಕಾರ ನೀಡುತ್ತಿದ್ದರೂ, ತಮ್ಮ ಮಂತ್ರಿಗಳ, ಶಾಸಕರ ಹೇಳಿಕೆಗಳನ್ನೂ ಗಮನಿಸಿ. ಯಾವುದೇ ಪಕ್ಷದ ನಾಯಕರೂ ಪ್ರಚೋದನಕಾರಿ ಹೇಳಿಕೆ ನೀಡಿದರೆ, ಅವರ ಮೇಲೂ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೆ ಡಿಕೆ ಶಿವಕುಮಾರ್ ಮನವಿ ಮಾಡಿದರು.
ಪಾದರಾಯನಪುರ ಘಟನೆ ಖಂಡನೀಯ, ವ್ಯಕ್ತಿಗಳು ಮಾಡಿದ ಕೃತ್ಯಕ್ಕೆ ವ್ಯಕ್ತಿಗಳಿಗೆ ಶಿಕ್ಷೆಯಾಗಬೇಕು. ಪೊಲೀಸರನ್ನು ಕೆಲವು ಮಂತ್ರಿಗಳು ನಿಂದಿಸುತ್ತಿರುವುದು ಸರಿಯಲ್ಲ. ವಾರ್ನಿಂಗ್ ಕೊಡೋದು ಸರಿಯಲ್ಲ. ಆಶಾ ಕಾರ್ಯಕರ್ತೆಯರೂ ಉತ್ತಮ ಕೆಲಸ ಮಾಡ್ತಿದಾರೆ ಎಂದರು.
ಮುಂದಿನ ದಿನಗಳಲ್ಲಿ ನೀವು ಎಲ್ಲಿಗೆ ಕರೆದರೂ, ಬರಲು ಸಹಕಾರ ಕೊಡಲು ನಾವು ಸಿದ್ದರಿದ್ದೇವೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ