ಸಾಮಾಜಿಕ ಅಂತರ ಪಾಲನೆ
Team Udayavani, Apr 20, 2020, 1:18 PM IST
ಮುದ್ದೇಬಿಹಾಳ: ಕುಂಟೋಜಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ರೇಷನ್ ಪಡೆಯಲು ಸರದಿಯಲ್ಲಿ ನಿಂತಿರುವ ಫಲಾನುಭವಿಗಳು
ಮುದ್ದೇಬಿಹಾಳ: ಕುಂಟೋಜಿ ಗ್ರಾಪಂ ವ್ಯಾಪ್ತಿಯಲ್ಲಿ ಪಿಡಿಒ, ಪಂಚಾಯತ್ ಸಿಬ್ಬಂದಿ, ಅಲ್ಲಿನ ಜನಪ್ರತಿನಿಧಿಗಳು ಸ್ಥಳೀಯ ಯುವ ಸಂಘಟನೆಗಳೊಂದಿಗೆ ಸೇರಿಕೊಂಡು ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಆಗುವಂತೆ ನೋಡಿಕೊಳ್ಳಲಾಗಿದೆ.
ಸರ್ಕಾರದ ಸೂಚನೆಯಂತೆ ಕುಂಟೋಜಿಯಲ್ಲಿರುವ ಪ್ರಸಿದ್ಧ ಬಸವೇಶ್ವರ ದೇವಸ್ಥಾನವನ್ನು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಂದ್ ಮಾಡಲಾಗಿದೆ. ನಿತ್ಯ ಪೂಜೆ ಯಥಾವತ್ತಾಗಿ ನಡೆಯುವಂತೆ ನೋಡಿಕೊಳ್ಳಲು ದೇವಸ್ಥಾನ ಕಮಿಟಿಯವರು ಪಂಚಾಯತ್ ಆಡಳಿತಕ್ಕೆ ಸಹಕರಿಸಿದ್ದಾರೆ. ಪಿಡಿಒ ಪಿ.ಎಸ್. ನಾಯ್ಕೋಡಿ ನೇತೃತ್ವದ ಪಂಚಾಯತ್ ಸಿಬ್ಬಂದಿ ಗ್ರಾಮದಲ್ಲಿ ಜನರು ಸುಖಾಸುಮ್ಮನೆ ಹರಟೆ ಹೊಡೆಯುತ್ತಿದ್ದ ಕಟ್ಟೆಗಳ ಮೇಲೆ ಆಯಿಲ್ ಸುರಿದು, ಮುಳ್ಳುಕಂಟಿ ಹಚ್ಚಿ ಯಾರೂ ಗುಂಪುಗೂಡದಂತೆ, ರೇಷನ್, ಕಿರಾಣಿ ಮತ್ತಿತರ ಅಂಗಡಿಗಳಲ್ಲಿ ಸಾಮಗ್ರಿ ಪಡೆಯಲು ಜನ ಮುಗಿ ಬೀಳುವುದನ್ನು ತಪ್ಪಿಸಲು ಅವುಗಳ ಮುಂದೆ ಸುಣ್ಣದಲ್ಲಿ ಬಾಕ್ಸ್ ಗೆರೆ ಹಾಕಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲಾಗಿದೆ.
ಗ್ರಾಮದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡಲಾಗಿದ್ದು ಫಾಗಿಂಗ್, ಚರಂಡಿ ಸ್ವಚ್ಛತೆ, ಕೊಳಚೆಯನ್ನು ಬೇರೆಡೆ ಸಾಗಿಸುವುದು, ಪೌಡರ್ ಸಿಂಪಡಿಕೆ ಕೈಗೊಳ್ಳಲಾಗಿದೆ. ಆಟೋದಲ್ಲಿ ಮೈಕ್ ಹಚ್ಚಿ ಕೋವಿಡ್ ಮತ್ತು ಲಾಕ್ಡೌನ್ ಬಗ್ಗೆ ಎಲ್ಲೆಡೆ ವ್ಯಾಪಕ ಪ್ರಚಾರ ನಡೆಸಲಾಗಿದೆ. ಇವೆಲ್ಲವುಗಳ ಮಧ್ಯೆ ಕುಡಿವ ನೀರಿನ ಸಮಸ್ಯೆ ತಲೆದೋರದಂತೆ ನೋಡಿಕೊಳ್ಳಲು ಪಂಚಾಯತ್ ಆಡಳಿತ ಸಾಕಷ್ಟು ಶ್ರಮಿಸುತ್ತಿದೆ. ಕೊರೊನಾ ಮಹಾಮಾರಿಯಿಂದ ತಪ್ಪಿಸಿಕೊಳ್ಳಲು ಸರ್ಕಾರದ ನಿರ್ದೇಶನದಂತೆ ಹಲವಾಗು ಆರೋಗ್ಯ ಸಂಬಂಧಿ ಕ್ರಮ ಜಾರಿಗೊಳಿಸಲಾಗಿದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಬಂದು ಜಾಗೃತಿ ಮೂಡಿಸಿದ್ದಾರೆ. ಲಾಕ್ಡೌನ್ ಉಲ್ಲಂಘನೆ ಆಗದಂತೆ ಸ್ಥಳೀಯ ಸಂಘಟನೆಗಳ ಯುವಜನತೆ ಸಾಕಷ್ಟು ಸಹಕಾರ ನೀಡಿ ಜನಜಾಗೃತಿ ಮೂಡಿಸಲು ಶ್ರಮಿಸಿದ್ದಾರೆ. ಇದಕ್ಕೆ ಪಂಚಾಯತ್ ಸದಸ್ಯರು, ಗ್ರಾಮಸ್ಥರ ಬೆಂಬಲ ದೊರಕಿದೆ ಎಂದು ಪಿಡಿಒ ಪಿ.ಎಸ್. ನಾಯ್ಕೋಡಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.