ಕಮರಿಪೇಟೆ ಠಾಣೆ ತಾತ್ಕಾಲಿಕ ಸ್ಥಳಾಂತರ
Team Udayavani, Apr 20, 2020, 2:53 PM IST
ಹುಬ್ಬಳ್ಳಿ: ಇಲ್ಲಿನ ತೊರವಿ ಹಕ್ಕಲ ಬಳಿಯ ಕರಾದಿ ಓಣಿಯ ಸ್ಮಶಾನ ಕಾವಲುಗಾರನಿಗೆ ಕೋವಿಡ್ 19 ಸೋಂಕು ತಗುಲಿದ್ದರಿಂದ 100 ಮೀಟರ್ ವ್ಯಾಪ್ತಿ ಪ್ರದೇಶ ಸೀಲ್ಡೌನ್ ಆಗಿದ್ದರಿಂದ ಕಮರಿಪೇಟೆ ಪೊಲೀಸ್ ಠಾಣೆ ತಾತ್ಕಾಲಿಕವಾಗಿ ಸ್ಥಳಾಂತರವಾಗಿದೆ.
ಇಲ್ಲಿನ ಮುಲ್ಲಾ ಓಣಿಯಲ್ಲಿ ಒಂದೇ ಕುಟುಂಬದ ಐವರು ಕೋವಿಡ್-19 ಸೋಂಕು ಹೊಂದಿದ್ದು, ಇವರಲ್ಲಿನ ಓರ್ವರೊಂದಿಗೆ ಸ್ಮಶಾನ ಕಾವಲುಗಾರ ದ್ವಿತೀಯ ಸಂಪರ್ಕ ಹೊಂದಿದ್ದರಿಂದ ಅವರಲ್ಲೂ ಸೋಂಕು ಕಂಡು ಬಂದಿದೆ. ಹೀಗಾಗಿ ಕರಾದಿ ಓಣಿಯ ಸುತ್ತಮುತ್ತಲಿನ 100 ಮೀಟರ್ ಪ್ರದೇಶ ಸೀಲ್ ಡೌನ್ ಆಗಿದ್ದು, ಇದರ ವ್ಯಾಪ್ತಿಯಲ್ಲಿ ಕಮರಿಪೇಟೆ ಪೊಲೀಸ್ ಠಾಣೆ ಬರುವ ಕಾರಣ ರವಿವಾರ ಮಧ್ಯಾಹ್ನವೇ ಈ ಠಾಣೆಯನ್ನು ಕಾರವಾರ ರಸ್ತೆಯ ಬಾಸೆಲ್ ಮಿಷನ್ ಮೇರಿ ಮೊಮೊರಿಯಲ್ ಚರ್ಚ್ ಬಳಿಯ ಹೆಬಿಕ್ ಪ್ರಾರ್ಥನಾ ಮಂದಿರಕ್ಕೆ ತಾತ್ಕಾಲಿಕವಾಗಿ ಸ್ಥಳಾಂತರಗೊಳಿಸಲಾಗಿದೆ.
ಈಗಾಗಲೇ ತಾತ್ಕಾಲಿಕ ಠಾಣೆಗೆ ಪೀಠೊಪಕರಣ, ಅಗತ್ಯ ದಾಖಲೆ ಪತ್ರಗಳನ್ನು ಸ್ಥಳಾಂತರಿಸುವ ಕಾರ್ಯ ನಡೆದಿದೆ. ಠಾಣೆಯ ಸಿಬ್ಬಂದಿ ಸಹಿತ ಇಲ್ಲಿಂದಲೇ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!