ನಾಲ್ಕಕ್ಕೇರಿದ ಸೋಂಕಿತರ ಸಂಖ್ಯೆ


Team Udayavani, Apr 21, 2020, 3:52 PM IST

gadaga-tdy-1

ಗದಗ: ನಗರದಲ್ಲಿ ಮತ್ತೂಂದು ಕೋವಿಡ್ 19 ಪಾಸಿಟಿವ್‌ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ ನಾಲ್ಕಕ್ಕೆ ಏರಿದೆ. ಇಲ್ಲಿನ ರಂಗನವಾಡ ಗಲ್ಲಿಯಲ್ಲಿ ದಿನಕಳೆದಂತೆ ಸೋಂಕಿತ ಸಂಖ್ಯೆ ಹೆಚ್ಚುತ್ತಿದ್ದು, ಜಿಲ್ಲೆಯ ಹಾಟ್‌ ಸ್ಪಾಟ್‌ ಆಗುವತ್ತ ಸಾಗಿದೆ. ಪರಿಣಾಮ ಜಿಲ್ಲೆಯ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಮೂಡಿಸಿದೆ.

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ವಾರ್ಡ್‌ ನಂ.31ರ ವ್ಯಾಪ್ತಿಯ ರಂಗನವಾಡ ಓಣಿಯ ನಿವಾಸಿ 24 ವರ್ಷದ ಯುವಕನಿಗೆ (ಪಿ.396) ಕೋವಿಡ್‌-19 ಸೋಂಕು ದೃಢಪಟ್ಟಿದೆ. ಇವರಿಗೆ ಪಿ-370 ಪ್ರಕರಣದ ದ್ವಿತೀಯ ಸಂಪರ್ಕದಿಂದ ಸೋಂಕು ಹರಡಿರಬಹುದು. ಈತನ ಮನೆಯಲ್ಲಿ ಒಟ್ಟು 8 ಜನರಿದ್ದು, ಅವರೆಲ್ಲರನ್ನೂ ಮುಂಜಾಗ್ರತಾ ಕ್ರಮವಾಗಿ ನಿಗಾದಲ್ಲಿರಿಸಲಾಗಿದೆ. ಈಗಾಗಲೇ ಅವರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಸಿದಂತೆ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರದ ಕೋವಿಡ-19 ನಿರ್ವಹಣೆ ನಿಯಮಗಳನ್ವಯ ಎಲ್ಲ ಮುನ್ನೆಚ್ಚರಿಕೆ ಕ್ರಮ ಜರುಗಿಸಿ ವ್ಯಕ್ತಿ (ಪಿ.396) ಇದ್ದ ಪ್ರದೇಶವನ್ನು ನಿಯಂತ್ರಿತ ಪ್ರದೇಶವಾಗಿ ಘೋಷಿಸಿ ಸಾರ್ವಜನಿಕರಿಗೆ ಆ ಪ್ರದೇಶದಿಂದ ಹೊರಗೆ ಅಥವಾ ಒಳಗೆ ಪ್ರವೇಶಿಸಿವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ದ್ವಿತೀಯ ಸಂಪರ್ಕದವರಿಗೆ ಸೋಂಕು : ನಗರದಲ್ಲಿ ಕಂಡುಬರುತ್ತಿರುವ ಕೊರೊನಾ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕಕ್ಕಿಂತ ಹೆಚ್ಚು ದ್ವಿತೀಯ ಸಂಪರ್ಕದಲ್ಲಿದ್ದವರಿಗೆ ಹೆಚ್ಚು ಅಪಾಯಕಾರಿ ಎನಿಸಿದೆ. ಸತತ ಮೂರೂ ಪ್ರಕರಣಗಳಲ್ಲಿ ದ್ವಿತೀಯ ಸಂಪರ್ಕದಲ್ಲಿದ್ದವರಲ್ಲಿ ಸೋಂಕು ಕಂಡು ಬಂದಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಮೊದಲ ಬಾರಿಗೆ ಎ.7 ರಂದು ಮೊದಲ ಕೋವಿಡ್ 19 ಸೋಂಕು ಪತ್ತೆಯಾಗಿತ್ತು. ರಂಗನವಾಡದ 80 ವರ್ಷದ ವೃದ್ಧೆ (ಪಿ. 166) ಗೆ ದೃಢ ಪಟ್ಟಿತ್ತು. ದ್ವಿತೀಯ ಪ್ರಕರಣ ಏ.16ರಂದು 52 ವರ್ಷದ ಮಹಿಳೆ(ಪಿ.304) ಗೆ ಸೋಂಕು ಖಚಿತವಾಗಿತ್ತು. ಈಕೆಗೆ ಎದುರು ಮನೆಯ ಗೆಳತಿಯಾಗಿದ್ದ 80 ವರ್ಷದ ವೃದ್ಧೆ(ಪಿ.166) ಯಿಂದ ಹರಡಿತ್ತು.

ಎರಡನೇ ಪ್ರಕರಣದ ಮಹಿಳೆಯೊಂದಿಗೆ ದ್ವಿತೀಯ ಸಂಪರ್ಕದಲ್ಲಿದ್ದ 42 ವರ್ಷ (ಪಿ.370) ವ್ಯಕ್ತಿಗೆ ಸೋಂಕು ದೃಢವಾಗಿತ್ತು. ಇದೀಗ ಸೋಮವಾರ ಖಚಿತವಾಗಿರುವ ಯುವಕನಿಗೂ ದ್ವಿತೀಯ ಸಂಪರ್ಕದಿಂದ ಬಂದಿದೆ ಎನ್ನಲಾಗಿದೆ. ಜಿಲ್ಲೆಯಲ್ಲಿ ಮೊದಲ ಬಾರಿಗೆ 82 ವರ್ಷದ ವೃದ್ಧೆಗೆ (ಪಿ.166) ಸೋಂಕು ಕಾಣಿಸಿಕೊಂಡಿತ್ತು. ಆದೇ, ಆ ಅಜ್ಜಿಗೆ ಸೋಂಕು ತಗುಲಿದ್ದು, ಯಾರಿಂದ ನಿಗೂಢವಾಗಿದೆ. ಇಲ್ಲಿನ ರಂಗನವಾಡಿಯ ಸೋಂಕಿತರಿಗೆ ಯಾವುದೇ ರೀತಿಯಲ್ಲಿ ಟ್ರಾವೆಲ್‌ ಇಸ್ಟರಿ ಇಲ್ಲ. ದೇಶ-ವಿದೇಶದಿಂದ ಆಗಮಿಸಿದವರೊಂದಿಗೂ ಸಂಪರ್ಕವಿಲ್ಲ. ಆದರೂ, ದಿನಕಳೆದಂತೆ ಕೊರೊನಾ ಪ್ರಕರಣಗಳು ದೃಢಪಡುತ್ತಿರುವುದು ನಾಗರಿಕರಲ್ಲಿ ಆತಂಕದ ಛಾಯೆ ಆವರಿಸಿದೆ.

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.