ದಯವಿಟ್ಟು ಮನೆಯಿಂದ ಹೊರಬರಬೇಡಿ: ಸಿಂಗಾಪುರದಲ್ಲಿ ಜೂನ್ 1ರವರೆಗೆ ಲಾಕ್ ಡೌನ್ ಮುಂದುವರಿಕೆ
ಶೇ.78ರಷ್ಟು ದೊಡ್ಡ ತಂಗುದಾಣದಲ್ಲಿ ವಾಸವಾಗಿರುವ ಕಾರ್ಮಿಕರಿಗೆ ಕೋವಿಡ್ 19 ಸೋಂಕು ತಗುಲಿದೆ.
Team Udayavani, Apr 21, 2020, 8:00 PM IST
Prime Minister Lee Hsien
ಸಿಂಗಾಪುರ್: ಕೋವಿಡ್ 19 ವೈರಸ್ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಿಂಗಾಪುರದಲ್ಲಿ ಜೂನ್ 1ರವರೆಗೆ ಭಾಗಶಃ ಲಾಕ್ ಡೌನ್ ಮುಂದುವರಿಸುವುದಾಗಿ ಪ್ರಧಾನಮಂತ್ರಿ ಲೀ ಹೈನ್ ಲೂಂಗ್ ಮಂಗಳವಾರ ಘೋಷಿಸಿದ್ದಾರೆ.
ವಲಸೆ ಕಾರ್ಮಿಕರಿಂದಾಗಿ ಕೋವಿಡ್ 19 ವೈರಸ್ ಪ್ರಕರಣದಲ್ಲಿ ಹೆಚ್ಚಳವಾಗುತ್ತಿರುವುದಾಗಿ ಟೆಲಿವಿಷನ್ ನಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ 5.77 ಮಿಲಿಯನ್ ಜನರು ಕಠಿಣವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಸೋಂಕಿತರ ಸಂಖ್ಯೆಯನ್ನು ಒಂದಂಕಿಗೆ ಅಥವಾ ಶೂನ್ಯಕ್ಕೆ ಇಳಿಸಬೇಕಾಗಿದೆ ಎಂದು ತಿಳಿಸಿದರು.
ದ್ವೀಪ ರಾಷ್ಟ್ರವಾಗಿರುವ ಸಿಂಗಾಪುರದಲ್ಲಿ 9,125 ಪ್ರಕರಣ ವರದಿಯಾಗಿದ್ದು, ಇದು ದಕ್ಷಿಣ ಆಗ್ನೇಯ ಏಷ್ಯಾದಲ್ಲಿಯೇ ಅತೀ ಹೆಚ್ಚು ದಾಖಲಾಗಿರುವ ಪ್ರಕರಣವಾಗಿದೆ. ಶೇ.78ರಷ್ಟು ದೊಡ್ಡ ತಂಗುದಾಣದಲ್ಲಿ ವಾಸವಾಗಿರುವ ಕಾರ್ಮಿಕರಿಗೆ ಕೋವಿಡ್ 19 ಸೋಂಕು ತಗುಲಿದೆ. ಅಲ್ಲದೇ ಶೇ.20ರಷ್ಟು ದಿನಂಪ್ರತಿ ದೊಡ್ಡ ಸಮುದಾಯದಲ್ಲಿಯೇ ಪ್ರಕರಣ ಪತ್ತೆಯಾಗುತ್ತಿದೆ ಎಂದು ವರದಿ ತಿಳಿಸಿದೆ.
ಜನರು ಮನೆಯಿಂದ ಹೊರಬರಬಾರದು ಎಂದು ಪ್ರಧಾನಿ ಲೀ ಮನವಿ ಮಾಡಿಕೊಂಡಿದ್ದಾರೆ. ಏಪ್ರಿಲ್ 7ರಿಂದ ಸಿಂಗಾಪುರದಲ್ಲಿ ಭಾಗಶಃ ಲಾಕ್ ಡೌನ್ ಜಾರಿಯಲ್ಲಿದೆ. ಹೆಚ್ಚಿನ ಶಾಲಾ ಕಾಲೇಜುಗಳು ಬಂದ್ ಆಗಿದ್ದು, ತುರ್ತು ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ
China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ
ಪಾಕ್ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್ ಸಾವು
MUST WATCH
ಹೊಸ ಸೇರ್ಪಡೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ