ಬಂಟ್ವಾಳದಲ್ಲಿ ಮತ್ತೂಂದು ಪ್ರಕರಣ ; ಮೃತ ಮಹಿಳೆಯ ನೆರೆಮನೆಯ ಮಹಿಳೆಯಲ್ಲಿ ಸೋಂಕು ದೃಢ


Team Udayavani, Apr 22, 2020, 5:34 AM IST

ಬಂಟ್ವಾಳದಲ್ಲಿ ಮತ್ತೂಂದು ಪ್ರಕರಣ ; ಮೃತ ಮಹಿಳೆಯ ನೆರೆಮನೆಯ ಮಹಿಳೆಯಲ್ಲಿ ಸೋಂಕು ದೃಢ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಂಗಳೂರು/ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ 67 ವರ್ಷದ ಮಹಿಳೆಗೆ ಮಂಗಳವಾರ ಕೋವಿಡ್ 19 ವೈರಸ್ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಈ ಮಹಿಳೆಯು ಎ. 19ರಂದು ಕೋವಿಡ್ 19 ವೈರಸ್ ನಿಂದ ನಿಧನ ಹೊಂದಿದ ಮಹಿಳೆಯ ನೆರೆಮನೆಯವರು.

ಬಂಟ್ವಾಳ ತಾಲೂಕು ಕಸಬಾ ಗ್ರಾಮದ ಮಹಿಳೆ ಎ. 18ರಂದು ಮಧ್ಯಾಹ್ನ ಜ್ವರ, ಕೆಮ್ಮು, ಉಸಿರಾಟದ ತೊಂದರೆಯಿಂದ ವೆನ್ಲಾಕ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರನ್ನು ಬಂಟ್ವಾಳ ತಾಲೂಕು ಆಸ್ಪತ್ರೆಯಿಂದ ನಿರ್ದೇಶಿಸಲಾಗಿತ್ತು. ಅವರು ಕೆಲವು ವರ್ಷಗಳಿಂದ ಅಸ್ತಮಾ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದು, ಮಧುಮೇಹದಿಂದಲೂ ಬಳಲುತ್ತಿದ್ದಾರೆ.

ಪ್ರಸ್ತುತ ನ್ಯುಮೋನಿಯಾದಿಂದ ಬಳಲುತ್ತಿದ್ದು, ಎ. 19ರಿಂದ ವೆಂಟಿಲೇಟರ್‌ ಅಳವಡಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಸಿರಾಟ ತೊಂದರೆ ಇದ್ದುದರಿಂದ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಮಂಗಳವಾರ ಸ್ವೀಕೃತವಾಗಿದ್ದು, ಸೋಂಕು ಇರುವುದು ದೃಢವಾಗಿದೆ.

47ರಲ್ಲಿ ಓರ್ವರಿಗೆ ದೃಢ
ಮಂಗಳವಾರ ಒಟ್ಟು 47 ಮಂದಿಯ ಗಂಟಲು ದ್ರವ ಮಾದರಿಯ ವರದಿ ಬಂದಿದ್ದು ಓರ್ವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. 429 ಮಂದಿಯ ಗಂಟಲ ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಒಟ್ಟು 31 ಮಂದಿ ಗೃಹ ನಿಗಾದಲ್ಲಿದ್ದಾರೆ. ಇಎಸ್‌ಐ ಆಸ್ಪತ್ರೆಯಲ್ಲಿ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೊದಲ ಪ್ರಕರಣಕ್ಕೆ ಒಂದು ತಿಂಗಳು
ಜಿಲ್ಲೆಯಲ್ಲಿ ಮೊದಲ ಪ್ರಕರಣ ಮಾ. 22ರಂದು ದೃಢಪಟ್ಟಿದ್ದು, ಬುಧವಾರಕ್ಕೆ 1 ತಿಂಗಳಾಯಿತು. ದುಬಾೖಯಿಂದ ಮಾ. 19ರಂದು ಸ್ಪೈಸ್‌ ಜೆಟ್‌ ವಿಮಾನದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಭಟ್ಕಳ ಮೂಲದ 22 ವರ್ಷದ ಯುವಕನಲ್ಲಿ ಕೋವಿಡ್ 19 ವೈರಸ್ ಲಕ್ಷಣಗಳಿದ್ದ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ. 22ರಂದು ಆತನ ಗಂಟಲ ದ್ರವ ಮಾದರಿ ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು, ಸೋಂಕು ದೃಢಪಟ್ಟಿತ್ತು.

ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16ಕ್ಕೆ ಏರಿದೆ. ಈ ಪೈಕಿ 12 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದರೆ, ಓರ್ವರು ಮೃತಪಟ್ಟಿದ್ದಾರೆ. ಮಂಗಳವಾರ ಕೋವಿಡ್ 19 ವೈರಸ್ ದೃಢಪಟ್ಟ ಮಹಿಳೆ ಸಹಿತ ಮೂವರು ಆಸ್ಪತ್ರೆಯಲ್ಲಿದ್ದಾರೆ.

ಬಂಟ್ವಾಳದಲ್ಲಿ 4ನೇ ಪ್ರಕರಣ
ಮಂಗಳವಾರ ಬಂಟ್ವಾಳದ 67 ವರ್ಷದ ಮಹಿಳೆಯೋರ್ವರಿಗೆ ಕೋವಿಡ್ 19 ವೈರಸ್ ಸೋಂಕು ದೃಢಪಡುವ ಮೂಲಕ ತಾಲೂಕಿನಲ್ಲಿ ಸೋಂಕು ದೃಢಪಟ್ಟ 4ನೇ ಪ್ರಕರಣ ಇದಾಗಿದೆ. ಪ್ರಾರಂಭದಲ್ಲಿ ಸಜೀಪನಡುವಿನ ಮಗುವಿನಲ್ಲಿ ಸೋಂಕು ಕಂಡುಬಂದಿರುವ ಕುರಿತು ಜಿಲ್ಲಾಡಳಿತ ತಿಳಿಸಿದ್ದು, ಬಳಿಕ ತುಂಬೆಯ ವ್ಯಕ್ತಿಯೊಬ್ಬರಲ್ಲಿ ಸೋಂಕು ದೃಢಪಟ್ಟಿತ್ತು.

ಎರಡೇ ದಿನಗಳ ಅಂತರದಲ್ಲಿ ಬಂಟ್ವಾಳ ಪೇಟೆಯ ಇಬ್ಬರು ನೆರೆಕರೆಯ ಮಹಿಳೆಯರಲ್ಲಿ ಸೋಂಕು ದೃಢಪಟ್ಟಿದ್ದು, ಅದರಲ್ಲಿ ಓರ್ವ ಮಹಿಳೆ ಸೋಂಕು ಖಚಿತಗೊಳ್ಳುವ ಮುನ್ನವೇ ಸಾವನ್ನಪ್ಪಿದ್ದರು. ಪ್ರಾರಂಭದಲ್ಲಿ ಸೋಂಕು ದೃಢಪಟ್ಟಿದ್ದ ಮಗು ಹಾಗೂ ಮತ್ತೊಬ್ಬರು ಆಸ್ಪತ್ರೆಯಿಂದ ಮನೆಗೆ ಆರೋಗ್ಯವಾಗಿ ಮರಳಿದ್ದಾರೆ. ಪ್ರಸ್ತುತ ಮಹಿಳೆಯೋರ್ವರು ಮಾತ್ರ ಮಂಗಳೂರಿನ ಕೋವಿಡ್‌ (ವೆನ್ಲಾಕ್‌) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿಗು ಬಂದೋಬಸ್ತು
ಸೋಂಕು ದೃಢಪಟ್ಟಿರುವ ಮಹಿಳೆ ಮನೆಯಲ್ಲಿ ಪತಿ, ಪುತ್ರಿ, ಪುತ್ರ ಹಾಗೂ ಮೊಮ್ಮಗಳ ಜತೆ ನೆಲೆಸಿದ್ದಾರೆ. ಪುತ್ರ ನೆರೆಮನೆಯ ಮಹಿಳೆ ಮೃತಪಟ್ಟ ದಿನವೇ ಸ್ವ-ಇಚ್ಛೆಯಿಂದ ಕ್ವಾರಂಟೈನ್‌ಗೆ ದಾಖಲಾಗಿದ್ದು, ಉಳಿದವರನ್ನು ಮಂಗಳವಾರ ಕ್ವಾರಂಟೈನ್‌ಗೆ ಕರೆದುಕೊಂಡು ಹೋಗಲಾಗಿದೆ.

ಯಾರಲ್ಲಾದರೂ ಸೋಂಕು ಪತ್ತೆ ಯಾದರೆ ಆ ಪ್ರದೇಶವನ್ನು ಸೀಲ್‌ಡೌನ್‌ ಮಾಡಬೇಕೆನ್ನುವುದು ನಿಯಮ. ಆದರೆ ಮಹಿಳೆಯೊಬ್ಬರು ಕೋವಿಡ್ 19 ವೈರಸ್ ನಿಂದ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬಂಟ್ವಾಳ ಕಸ್ಬಾ ಗ್ರಾಮದ ನಿರ್ದಿಷ್ಟ ಪ್ರದೇಶ ಈಗಾಗಲೇ ಸೀಲ್‌ಡೌನ್‌ ಆಗಿದ್ದು, ಅದನ್ನೀಗ ಮತ್ತಷ್ಟು ಬಿಗುಗೊಳಿಸಲಾಗಿದೆ. ಜತೆಗೆ ಹಾಲಿ ಸೋಂಕು ದೃಢಪಟ್ಟಿರುವ ಮಹಿಳೆಯ ಟ್ರಾವೆಲ್‌ ಹಿಸ್ಟರಿಯನ್ನು ಇಲಾಖೆ ಕಲೆ ಹಾಕುತ್ತಿದೆ.

ಟಾಪ್ ನ್ಯೂಸ್

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

Road Mishap ಮಂಗಳೂರು: ಕಾರು ಢಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

raichur

Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Chitradurga: ಮಳೆಯಿಂದ ವಿದ್ಯುತ್‌ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.