ಗಲಾಟೆಗಳೇ ಸರಕಾರಕ್ಕೆ ವರದಾನ: ಕಾಂಗ್ರೆಸ್‌ಗೆ ಧರ್ಮಸಂಕಟ

ತಬ್ಲಿ ಪ್ರಕರಣ, ಪಾದರಾಯನಪುರ ಗಲಾಟೆಯಿಂದ "ಕೈ' ಇನ್ನಷ್ಟು ಇಕ್ಕಟ್ಟಿಗೆ

Team Udayavani, Apr 22, 2020, 11:26 AM IST

ಗಲಾಟೆಗಳೇ ಸರಕಾರಕ್ಕೆ ವರದಾನ: ಕಾಂಗ್ರೆಸ್‌ಗೆ ಧರ್ಮಸಂಕಟ

ಸಾಂದರ್ಭಿಕ ಚಿತ್ರ

ಬೆಂಗಳೂರು: ಮಹಾಮಾರಿ ಕೋವಿಡ್ ಹರಡುವುದನ್ನು ತಡೆಗಟ್ಟಲು ರಾಜ್ಯ ಸರಕಾರ ಮಾಡುತ್ತಿರುವ ಪ್ರಯತ್ನಕ್ಕಿಂತ ಕೋವಿಡ್ ವಾರಿಯರ್ ಮೇಲೆ ನಡೆಯುತ್ತಿರುವ ಹಲ್ಲೆಗಳು ರಾಜ್ಯ ಸರಕಾರಕ್ಕೆ ವಿಪಕ್ಷಗಳ ಟೀಕೆಯಿಂದ ಪಾರುಮಾಡುವ ಅಂಶವಾಗಿದ್ದು ಇದು ಕಾಂಗ್ರೆಸ್‌ಗೆ ಧರ್ಮಸಂಕಟವಾಗಿ ಪರಿಣಮಿಸಿದೆ.

ವಿಧಾನಸಭೆ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಸರಕಾರದ ವಿರುದ್ಧ ಕೋವಿಡ್ ಬಗ್ಗೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸುತ್ತ ಬಂದಿತ್ತು. ಈ ವಿಷಯದಲ್ಲಿ ರಾಜಕೀಯ ಇಲ್ಲ ಎಂದರೂ ಟೀಕೆ ಮುಂದುವರಿದಿತ್ತು. ವೈಫ‌ಲ್ಯಕ್ಕೆ ತರಾಟೆ ರಾಜ್ಯ ಸರಕಾರ ಆರಂಭದಲ್ಲಿಯೇ ವಿದೇಶಗಳಿಂದ ಬಂದಿರುವವರನ್ನು ವಿಮಾನ ನಿಲ್ದಾಣಗಳಲ್ಲಿಯೇ ಸರಿಯಾಗಿ ತಪಾಸಣೆ ಮಾಡದೆ ಅವರನ್ನು ಮುಕ್ತವಾಗಿ ಒಳಗೆ ಬರಲು ಬಿಟ್ಟಿರುವುದು ರಾಜ್ಯದಲ್ಲಿ ಕೋವಿಡ್ ಹರಡುವಂತೆ ಆಯಿತು ಎಂದು ಕಾಂಗ್ರೆಸ್‌ ಸರಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಸಂದರ್ಭ ಸಿಎಂ ಅವರು ತತ್‌ಕ್ಷಣ ನಾಲ್ವರು ಸಚಿವರ ಟಾಸ್ಕ್ಫೋರ್ಸ್‌ ರಚನೆ ಮಾಡಿ ಪ್ರತಿದಿನ ಕೋವಿಡ್ ನಿಯಂತ್ರಿಸುವ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದರು. ಅಲ್ಲದೇ ಸರ್ವಪಕ್ಷದ ಸಭೆ ಕರೆದು ಅಭಿಪ್ರಾಯ ಪಡೆದು ಸಮಾಧಾನಪಡಿಸುವ ಯತ್ನ ಮಾಡಿದರು.

ತಬ್ಲಿ ಜಮಾತ್‌ ಘಟನೆ
ಆ ಬಳಿಕ ಸೋಂಕಿತರನ್ನು ಪತ್ತೆ ಹಚ್ಚುವಲ್ಲಿ, ಕ್ವಾರಂಟೈನ್‌ ಮಾಡಿಸುವಲ್ಲಿ ವಿಫ‌ಲವಾಗುತ್ತಿದೆ. ಲಾಕ್‌ಡೌನ್‌ ವೇಳೆ ನಿರ್ಗತಿಕರು, ಕಾರ್ಮಿಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಲ್ಲ, ರೈತರ ಬೆಳೆಗಳಿಗೆ ಮಾರುಕಟ್ಟೆ ಸಿಕ್ಕಿಲ್ಲ ಎನ್ನುವುದನ್ನು ಕಾಂಗ್ರೆಸ್‌ ಟೀಕಿಸಿತ್ತು. ಆದರೆ ತಬ್ಲಿ ಪ್ರಕರಣ ವರದಿಯಾಗುತ್ತಿದ್ದಂತೆ ಬಿಜೆಪಿ ನಾಯಕರು ಅಲ್ಪಸಂಖ್ಯಾಕ ಸಮುದಾಯದ ವಿರುದ್ಧ ಹೇಳಿಕೆಗಳನ್ನು ನೀಡತೊಡಗಿದ್ದು, ಕಾಂಗ್ರೆಸ್‌ ಅನ್ನೂ ತೀವ್ರ ತರಾಟೆಗೆ ತೆಗೆದುಕೊಂಡಿದ್ದರು. ನಿಜಾಮುದ್ದೀನ್‌ಗೆ ಹೋಗಿ ಬಂದ ರಾಜ್ಯದ 1,500 ಜನರಲ್ಲಿ ಬಹುತೇಕರು ತಪಾಸಣೆಗೆ ಒಳಪಡಲು ಹಿಂದೇಟು ಹಾಕಿದ್ದು, ಬಿಜೆಪಿ ನಾಯಕರಿಗೆ ಕಾಂಗ್ರೆಸ್‌ ವಿರುದ್ಧ ವಾಗ್ಧಾಳಿ ನಡೆಸಲು ದೊಡ್ಡ ಅಸ್ತ್ರ ದೊರೆತಂತಾಯಿತು. ಅಲ್ಲಿವರೆಗೆ ಸರಕಾರವನ್ನು ಕೋವಿಡ್ ವಿಚಾರದಲ್ಲಿ ಟೀಕಿಸುತ್ತ ಬಂದಿದ್ದ ಕಾಂಗ್ರೆಸ್‌ ತಬ್ಲಿ ವಿಚಾರದಲ್ಲಿ ಬಹಿರಂಗ ಸಮರ್ಥಿಸಿಕೊಳ್ಳಲೂ ಆಗದೆ, ವಿರೋಧಿಸಲೂ ಆಗದೆ ಪಕ್ಷದ ಮುಸ್ಲಿಂ ಸಮುದಾಯದ ನಾಯಕರ ಮೂಲಕ ತೇಪೆ ಹಚ್ಚುವ ಕೆಲಸ ಮಾಡಿತು.

ಸರಕಾರ ಪಾರು
ಅನಂತರದಲ್ಲಿ ಕಾಂಗ್ರೆಸ್‌ ನಾಯಕರು ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ| ಸುಧಾಕರ್‌ ನಡುವಿನ ಶೀತಲ ಸಮರ, ಪ್ರಯೋಗಾಲಯಗಳು ಹೆಚ್ಚಾಗದಿರುವುದು, ರ್ಯಾಪಿಡ್‌ ಟೆಸ್ಟ್‌ ಕಿಟ್‌ಗಳ ಖರೀದಿ ವಿಚಾರದಲ್ಲಿ ಸಚಿವರ ಗುದ್ದಾಟ, ತಪಾಸಣೆ ಪ್ರಮಾಣ ಕಡಿಮೆ, ಇತ್ಯಾದಿಗಳನ್ನಿಟ್ಟುಕೊಂಡು ಸರಕಾರದ ವೈಫ‌ಲ್ಯವನ್ನು ಬಿಚ್ಚಿಡುವ ಯತ್ನ ಮಾಡಿದ್ದರು. ಆದರೆ ಬೆಂಗಳೂರಿನಲ್ಲಿ ತಪಾಸಣೆಗೆ ತೆರಳಿದ ಆಶಾ ಕಾರ್ಯಕರ್ತೆಯ ಮೇಲೆ ಹಲ್ಲೆ, ಪಾದರಾಯನಪುರದ ಘಟನೆ ಬಿಜೆಪಿ ಸರಕಾರಕ್ಕೆ ವರವಾಗಿದೆ. ಕಾಂಗ್ರೆಸ್‌ ಧರ್ಮ ಸಂಕಟಕ್ಕೆ ಸಿಲುಕುವಂತೆಯೂ ಮಾಡಿದೆ. ಈ ಘಟನೆಗೆ ಮುಸ್ಲಿಂ ಸಮುದಾಯ ಹಾಗೂ ಕಾಂಗ್ರೆಸ್‌ ಶಾಸಕರೇ ಕಾರಣ ಎಂದು ಬಿಜೆಪಿಯವರು ವಾಗ್ಧಾಳಿ ನಡೆಸಿದ್ದಾರೆ. ಇದು ಕಾಂಗ್ರೆಸ್‌ ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಕೋವಿಡ್ ವಿಚಾರದಲ್ಲಿ ಸರಕಾರದ ವೈಫ‌ಲ್ಯಗಳನ್ನು ಕಾಂಗ್ರೆಸ್‌ ಎತ್ತಿ ತೋರಿಸುವುದಕ್ಕಿಂತ ತಬ್ಲಿ ಮತ್ತು ಪಾದರಾಯನಪುರ ಪ್ರಕರಣದಲ್ಲಿ ತಾನೇ ವಿರೋಧ ಎದುರಿಸುವಂತಾಗಿದ್ದು ವಿಪರ್ಯಾಸ.

ಟಾಪ್ ನ್ಯೂಸ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.