ಕೋವಿಡ್ ನಲ್ಲಿ ಕೈಹಿಡಿದ ನರೇಗಾ

ಜಿಲ್ಲೆಯಲ್ಲಿ 33765 ಕೃಷಿ ಕಾರ್ಮಿಕರಿಗೆ ಕೆಲಸ |ನಿಗದಿತ ಗುರಿ ತಲುಪುವಲ್ಲಿ ಹಿನ್ನಡೆ

Team Udayavani, Apr 22, 2020, 12:29 PM IST

22-April-09

ಬಳ್ಳಾರಿ; ಜಿಲ್ಲೆಯ ವಿವಿಧ ತಾಲೂಕಿನಲ್ಲಿ ಕೋವಿಡ್ ಸಂಕಷ್ಟದ ನಡುವೆಯೂ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿರುವುದು.

ಬಳ್ಳಾರಿ: ಕೋವಿಡ್ ವೈರಸ್‌, ಲಾಕ್‌ಡೌನ್‌ ನಿಮಿತ್ತ ಎಲ್ಲ ಕ್ಷೇತ್ರಗಳು ಬಂದ್‌ ಆಗಿದ್ದರೂ ಗ್ರಾಮೀಣ ಭಾಗದಲ್ಲಿ ಕೃಷಿ ಕೂಲಿ ಕಾರ್ಮಿಕರನ್ನು ಉದ್ಯೋಗ ಖಾತ್ರಿ ಯೋಜನೆ ಕೈ ಹಿಡಿದಿರುವುದು ನೆಮ್ಮದಿ ಮೂಡಿಸಿದರೆ, ವೈರಸ್‌ ಹಿನ್ನೆಲೆಯಲ್ಲಿ ಸೀಮಿತ ಜನರಿಗಷ್ಟೇ ಕೆಲಸ ನೀಡಬೇಕಿರುವುದು ಬೇಸರ ಮೂಡಿಸಿದೆ.

ಕೋವಿಡ್ ವೈರಸ್‌ ನಿಯಂತ್ರಿಸುವ ಸಲುವಾಗಿ ಲಾಕ್‌ಡೌನ್‌ ಜಾರಿಗೊಳಿಸಿರುವ ಪರಿಣಾಮ ಎಲ್ಲ ಕ್ಷೇತ್ರಗಳು ಬಂದ್‌ ಆಗಿವೆ. ಆದರೆ, ಗ್ರಾಮೀಣ ಭಾಗದಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯು ಕೃಷಿ ಕೂಲಿ ಕಾರ್ಮಿಕರ ಕೈ ಹಿಡಿದಿದೆ. ಕೊರೊನಾ ಕಂಟಕದಿಂದ ಎಲ್ಲ ಕ್ಷೇತ್ರಗಳು ಬಂದ್‌ ಆಗಿರುವ ಇಂಥ ತುರ್ತು ಸಂದರ್ಭದಲ್ಲಿ ಎಲ್ಲೆಡೆ ನರೇಗಾ ಯೋಜನೆ ಚಾಲನೆಯಲ್ಲಿದ್ದು, ಕೃಷಿ ಕಾರ್ಮಿಕರ ಅಲ್ಪಪ್ರಮಾಣದ ಆರ್ಥಿಕ ಸಂಕಷ್ಟವನ್ನು ನೀಗಿಸುವಲ್ಲಿ ಯಶಸ್ವಿಯಾಗಿದೆ.

90 ಲಕ್ಷ ಮಾನವ ದಿನಗಳ ಸೃಜನೆ: ಬಳ್ಳಾರಿ ಜಿಲ್ಲಾ ಪಂಚಾಯಿತಿಯು ಪ್ರಸಕ್ತ 2020-2021ನೇ ಸಾಲಿನ ಏಪ್ರಿಲ್‌ 1ರಿಂದ ಒಟ್ಟು 90 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಿದೆ. ಏಪ್ರಿಲ್‌ ತಿಂಗಳಲ್ಲೇ 18 ಲಕ್ಷ ಮಾನವ ದಿನಗಳ ಗುರಿ ಹೊಂದಲಾಗಿತ್ತು. ಆದರೆ ಕೊರೊನಾ ವೈರಸ್‌ ಎಫೆಕ್ಟ್ ನಿಂದಾಗಿ ಕೊಂಚಮಟ್ಟಿಗೆ ಹಿನ್ನಡೆಯಾಗಿದೆ. ಈ ವರೆಗೆ ಬಳ್ಳಾರಿ ತಾಲೂಕು 8313, ಹಡಗಲಿ 3859, ಹಗರಿಬೊಮ್ಮನಹಳ್ಳಿ 3873, ಹರಪನಹಳ್ಳಿ 2180, ಹೊಸಪೇಟೆ 3329, ಕೂಡ್ಲಿಗಿ 4465, ಸಂಡೂರು 5483, ಸಿರುಗುಪ್ಪ 2233 ಸೇರಿ ಒಟ್ಟು 33,735 ಜನರು ನರೇಗಾ ಯೋಜನೆಯಡಿ ಕೆಲಸ ಮಾಡುತ್ತಿದ್ದಾರೆ. ಏಪ್ರಿಲ್‌ 1ರಿಂದ ಏ. 21ರವರೆಗೆ ಸರಾಸರಿ 15 ಲಕ್ಷ ಮಾನವ ದಿನಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿಯ ಅಂಕಿ ಅಂಶಗಳು ಸ್ಪಷ್ಟಪಡಿಸುತ್ತವೆ.

2053 ಕಾಮಗಾರಿಗಳು: ಉದ್ಯೋಗ ಖಾತ್ರಿ ಯೋಜನೆಯಡಿ ಹೊಲಗಳಲ್ಲಿನ ಬದು ನಿರ್ಮಾಣ, ಖಾಸಗಿ ತೋಟಗಳಲ್ಲಿನ ಬೋರ್‌ವೆಲ್‌ ರೀಚಾರ್ಜ್‌ಫೀಟ್‌ ನಿರ್ಮಾಣ ಕಾಮಗಾರಿ, ವೈಯಕ್ತಿಕ ಇಂಗುಗುಂಡಿ ನಿರ್ಮಾಣ, ಸಾಮಾಜಿಕ ಅರಣ್ಯ ಇಲಾಖೆಯವರು ಗಿಡಗಳನ್ನು ನೆಡಲು ಸೂಚಿಸಿರುವ ಸರ್ಕಾರಿ ಜಾಗದಲ್ಲಿ ಗುಂಡಿಗಳನ್ನು ತೋಡುವುದು, ಅರಣ್ಯ ಪ್ರದೇಶದಲ್ಲಿ ಮಣ್ಣು ಮತ್ತು ನೀರು ಸಂರಕ್ಷಣೆಯ ಕಾಮಗಾರಿಗಳು, ಕೆರೆ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಪೈಕಿ ಬಳ್ಳಾರಿ ತಾಲೂಕು 366, ಹಡಗಲಿ 324, ಹಗರಿಬೊಮ್ಮನಹಳ್ಳಿ 277, ಹರಪನಹಳ್ಳಿ, 230, ಹೊಸಪೇಟೆ 310, ಕೂಡ್ಲಿಗಿ 305, ಸಂಡೂರು 134, ಸಿರುಗುಪ್ಪ 107 ಕಾಮಗಾರಿಗಳು ಸೇರಿ ಜಿಲ್ಲೆಯಲ್ಲಿ ಒಟ್ಟು 2053 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು ಚಾಲನೆಯಲ್ಲಿವೆ.

ನರೇಗಾಕ್ಕೂ ಕೋವಿಡ್ ಕಂಟಕ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಎಲ್ಲ ಕ್ಷೇತ್ರಗಳು ಬಂದ್‌ ಆಗಿರುವುದರ ನಡುವೆಯೂ ನರೇಗಾ ಕಾಮಗಾರಿ ಚಾಲನೆ ಪಡೆದುಕೊಂಡಿರುವುದು ಕೃಷಿ ಕಾರ್ಮಿಕರಲ್ಲಿ ಒಂದಷ್ಟು ನೆಮ್ಮದಿ ಮೂಡಿಸಿದರೆ, ವೈರಸ್‌ ಎಫೆಕ್ಟ್ನಿಂದಾಗಿ ನಿಗದಿತ ಗುರಿಯಂತೆ ಒಂದೇ ಕಡೆ ನಿರೀಕ್ಷಿತ ಕೃಷಿ ಕಾರ್ಮಿಕರಿಗೆ ಕೆಲಸ ನೀಡದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಕಡೆ ಕೇವಲ 10ರಿಂದ 15 ಜನರಿಗೆ ಮಾತ್ರ ಕೆಲಸ ನೀಡಬೇಕು. ಮಾಸ್ಕ್ ಧರಿಸಿರಬೇಕು. ಸ್ಯಾನಿಟೈಜರ್‌ ನೀಡಬೇಕು. ಜತೆಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಾಗಿದೆ. ಇಂಥ ತುರ್ತು ಪರಿಸ್ಥಿತಿ ಸಂದರ್ಭದಲ್ಲೂ ಕೃಷಿ ಕಾರ್ಮಿಕರಿಗೆ ನರೇಗಾ ಅಡಿ ಕೆಲಸ ದೊರೆಯುತ್ತಿರುವುದು ರೈತರಲ್ಲಿ ನೆಮ್ಮದಿ ಮೂಡಿಸಿದರೂ, ನಿಗದಿತ ಗುರಿ ತಲುಪುವಲ್ಲಿ ಬಳ್ಳಾರಿ ಜಿಪಂಗೆ ಹಿನ್ನಡೆಯಾದಂತಾಗಿದೆ.

ವೆಂಕೋಬಿ ಸಂಗನಕಲ್ಲು

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.