ಕೋವಿಡ್ : ಸುರಕ್ಷತಾ ಕ್ರಮ ಪರಿಶೀಲನೆ
Team Udayavani, Apr 22, 2020, 12:39 PM IST
ಚಿಕ್ಕಮಗಳೂರು: ಸೂರ್ಯೋದಯ ಸಮಾಜ ಸೇವಾ ಸಂಸ್ಥೆಯ ದತ್ತು ಮಕ್ಕಳ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧಿಧೀಶ ಬಸವರಾಜ್ ಚೇಂಗಟಿ ಭೇಟಿ ನೀಡಿ ಪರಿಶೀಲಿಸಿದರು.
ಚಿಕ್ಕಮಗಳೂರು: ಕೋವಿಡ್ ಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕೈಗೊಂಡಿರುವ ವಿವಿಧ ಯೋಜನೆಗಳು ಮತ್ತು ಸುರಕ್ಷತಾ ಕ್ರಮಗಳ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಸವರಾಜ್ ಚೇಂಗಟಿ ಪರಿಶೀಲನೆ ನಡೆಸಿದರು.
ಮಂಗಳವಾರ ನಗರದ ಸೂರ್ಯೋದಯ ಸಮಾಜ ಸೇವಾ ಸಂಸ್ಥೆಯ ದತ್ತು ಮಕ್ಕಳ ಕೇಂದ್ರಕ್ಕೆ ಭೇಟಿ ನೀಡಿ ಸುರಕ್ಷತಾ ಕ್ರಮಗಳ ಬಗ್ಗೆಪರಿಶೀಲಿಸಿ ಮಾತನಾಡಿದ ಅವರು, ಕೋವಿಡ್ ಸೋಂಕು ವಿಶ್ವವ್ಯಾಪಿಯಾಗಿ ಹರಡುತ್ತಿದ್ದು, ಈ ಸೋಂಕಿನಿಂದ ದೂರವಿರಲು ನಾವುಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಆರೋಗ್ಯ ಹಾಗೂ ಸ್ವಚ್ಛತೆಯ ಕಡೆ ಹೆಚ್ಚು ಗಮನ ನೀಡುವಂತೆ ಸಲಹೆ ನೀಡಿದರು.
ಸೋಮವಾರ ಆಲ್ದೂರಿನ ತುಡುಕೂರಿನ ನಿರಾಶ್ರಿತರ ಕೇಂದ್ರಕ್ಕೆ ನ್ಯಾಯಾಧೀಶ ಶ್ರೀರಾಮ ಹೆಗಡೆ ಹಾಗೂ ಮಂಗಳವಾರ ನಗರದ ಹೌಸಿಂಗ್ ಬೋರ್ಡ್ನಲ್ಲಿರುವ ಬಾಲಕರ ಬಾಲ ಮಂದಿರಕ್ಕೆ ನ್ಯಾಯಾಧೀಶೆ ದೀಪಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿಸಿದರು. ನ್ಯಾಯಾಧೀಶೆ ಶರ್ಮಿಳಾ, ವಕೀಲ ಕೆ.ಎನ್. ಚಂದ್ರಶೇಖರ್ ಇದ್ದರು.