ಸಿಎಂ ಪರಿಹಾರ ನಿಧಿಗೆ ತಿಂಗಳ ವೇತನ ನೀಡಿದ ಬಸ್ ನಿರ್ವಾಹಕ
Team Udayavani, Apr 22, 2020, 1:20 PM IST
ಹುಬ್ಬಳ್ಳಿ: ಇಲ್ಲಿನ ವಾಯವ್ಯ ಸಾರಿಗೆ ಸಂಸ್ಥೆಯ ನಿರ್ವಾಹಕರೊಬ್ಬರು ತಮ್ಮ ಒಂದು ತಿಂಗಳ ವೇತನವನ್ನು ಕೋವಿಡ್-19 ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
ಇಲ್ಲಿನ ವಾಯವ್ಯ ಸಾರಿಗೆ ಸಂಸ್ಥೆಯ ನಗರ ಸಾರಿಗೆ ವಿಭಾಗದ ನಗರ ಒಂದನೇ ಘಟಕದಲ್ಲಿ ನಿರ್ವಾಹಕರಾಗಿ ಕಾರ್ಯ ನಿರ್ವಹಿಸುತ್ತಿರುವ ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ಬಸವರಾಜ ಗಾಣಿಗೇರ ತಮ್ಮ ಒಂದು ತಿಂಗಳ ವೇತನ 25,000 ರೂ. ಚೆಕ್ನ್ನು ಜಿಲ್ಲಾಧಿಕಾರಿ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು.
ಚೆಕ್ ಸ್ವೀಕರಿಸಿದ ಜಿಲ್ಲಾಧಿಕಾರಿ ದೀಪಾ ಚೋಳನ್, ಸಾರಿಗೆ ಸಂಸ್ಥೆ ನಿರ್ವಾಹಕರೊಬ್ಬರು ಸ್ವಯಂ ಪ್ರೇರಣೆಯಿಂದ ತಮ್ಮ ಒಂದು ತಿಂಗಳ ವೇತನ ನೀಡಿ ಮಾದರಿಯಾಗಿದ್ದಾರೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ವಾಕರಸಾಸಂ ವಿಭಾಗೀಯ ನಿಯಂತ್ರಕರಾದ ವಿವೇಕಾನಂದ ವಿಶ್ವಜ್ಞ, ಹನುಮಂತ ಬೋಜೇದಾರ್, ಬಸವರಾಜ ಅವಾರಿ, ಎಂ.ಎಸ್. ರೋಣದ, ವೆಂಕಟೇಶ ಹರ್ತಿ, ಡಾ| ಪಿ.ವಿ.ಸವದಿ ಈ ವೇಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ