ತರಾಸು ಜನ್ಮಶತಮಾನೋತ್ಸವ ಸರ್ಕಾರವೇ ಆಚರಿಸಲಿ
Team Udayavani, Apr 22, 2020, 4:19 PM IST
ನಾಯಕನಹಟ್ಟಿ: ತಳಕು ಸಮೀಪದ ಹೊಸಹಳ್ಳಿ ಶಾಲೆ ಆವರಣದಲ್ಲಿರುವ ತರಾಸು ಪುತ್ಥಳಿಗೆ ಗೌರವ ಸಲ್ಲಿಸಲಾಯಿತು
ನಾಯಕನಹಟ್ಟಿ: ತರಾಸುರವರ ಜನ್ಮ ಶತಮಾನೋತ್ಸವದ ವಿಶಿಷ್ಟ ಆಚರಣೆಗೆ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಜಿಪಂ ಸದಸ್ಯ ಓಬಳೇಶ್ ಒತ್ತಾಯಿಸಿದ್ದಾರೆ.
ತಳಕು ಗ್ರಾಮದಲ್ಲಿ ಮಂಗಳವಾರ ನಡೆದ ತರಾಸುರವರ 100 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ಶ್ರೇಷ್ಠ ಕಾದಂಬರಿಕಾರರಲ್ಲಿ ತರಾಸು ಒಬ್ಬರಾಗಿದ್ದಾರೆ. ತ.ಸು. ಶಾಮರಾಯರು, ಟಿ.ಎಸ್. ವೆಂಕಣ್ಣಯ್ಯ ಹಾಗೂ ತರಾಸುರವರು ಚಿತ್ರದುರ್ಗ ಜಿಲ್ಲೆ ಹಾಗೂ ರಾಜ್ಯಕ್ಕೆ ಶ್ರೇಷ್ಠ ಕೊಡುಗೆ ನೀಡಿದ್ದಾರೆ. ಇವರುಗಳಿಂದ ತಳಕು ಗ್ರಾಮ ಇಡೀ ರಾಜ್ಯದಲ್ಲಿ ಹೆಸರು ಪಡೆದಿದೆ. ರಾಷ್ಟ್ರೀಯ ಹೆದ್ದಾರಿ 150 ಗ್ರಾಮವನ್ನು ಪ್ರವೇಶಿಸುವ ಪ್ರದೇಶದಲ್ಲಿ ತರಾಸು ಕಂಚಿನ ಪುತ್ಥಳಿ ನಿರ್ಮಿಸಬೇಕು. ಜನ್ಮ ಶತಮಾನೋತ್ಸವದ ಆಚರಣೆಯನ್ನು ಸರ್ಕಾರ ವಿಜೃಂಭಣೆಯಿಂದ ಆಚರಿಸಬೇಕು. ತಳಕು ಗ್ರಾಮದಲ್ಲಿ ವೆಂಕಣ್ಣಯ್ಯ ಸ್ಮಾರಕ ಗ್ರಂಥಾಲಯವನ್ನು ಮೇಲ್ದರ್ಜೆಗೇರಿಸಬೇಕು ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಈ. ರಾಮರೆಡ್ಡಿ ಮಾತನಾಡಿ, ತಳಕು ಗ್ರಾಮ ತರಾಸುರವರಿಂದ ಗುರುತಿಸಿಕೊಂಡಿದೆ. ಅವರ ಸಾಹಿತ್ಯ ಕೃತಿಗಳನ್ನು ಇಂದಿನ ವಿದ್ಯಾರ್ಥಿಗಳು ಓದುವಂತಾಗಬೇಕು. ಜಿಲ್ಲಾ ಕೇಂದ್ರದಲ್ಲಿ ತರಾಸು ಕಂಚಿನ ಪುತ್ಥಳಿಯನ್ನು ಸ್ಥಾಪಿಸಬೇಕು. ಜನ್ಮ ಶತಮಾನೋತ್ಸವ ಆಚರಣೆಗೆ ಸರ್ಕಾರ ಗಮನ ಹರಿಸಬೇಕು ಎಂದರು. ರೈತ ಮುಖಂಡ ಓಬಣ್ಣ, ಮುಖಂಡ ನಾಗರಾಜ್, ತರಾಸು ಸಹೋದರ ಸಂಬಂಧಿ ಮಧುರನಾಥ್, ಸುರೇಶ್ ಮತ್ತಿತರರು ಇದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
HDK ಹೇಳುತ್ತಿದ್ದದ್ದು ಪ್ರಜ್ವಲ್ ಪೆನ್ಡ್ರೈವ್ ಇರಬೇಕು: ಜಮೀರ್
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ