ಭೂಮಿಯಲ್ಲೇ ಹುದುಗಿದೆ 300 ಕ್ವಿಂಟಲ್‌ ಸುವರ್ಣ ಗೆಡ್ಡೆ!


Team Udayavani, Apr 22, 2020, 4:57 PM IST

22-April-30

ಹೊಸನಗರ: ಮೂಡುಗೊಪ್ಪ ಗ್ರಾಪಂ ವ್ಯಾಪ್ತಿಯ ದೇವಗಂಗೆಯಲ್ಲಿ ಒಂದೂವರೆ ಎಕರೆ ಪ್ರದೇಶದಲ್ಲಿ ಸುವರ್ಣ ಗೆಡ್ಡೆ ಬೆಳೆದಿರುವ ರೈತ ಎಲ್‌. ಗಣಪತಿ.

ಹೊಸನಗರ: ಆ ರೈತ ಬೆಳೆದಿದ್ದು ಬರೋಬ್ಬರಿ 300 ಕ್ವಿಂಟಲ್‌ ಸುವರ್ಣ ಗೆಡ್ಡೆ. ಉತ್ತಮ ಬೆಳೆ, ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದ ಆ ರೈತ ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಇದು ಮೂಡುಗೊಪ್ಪ ಗ್ರಾಪಂ ದೇವಗಂಗೆಯ ರೈತ ಎಲ್‌. ಗಣಪತಿ ಅವರ ಅತಂತ್ರ ಸ್ಥಿತಿ. ಸುಮಾರು ಒಂದೂವರೆ ಎಕರೆ ಪ್ರದೇಶದಲ್ಲಿ ಸುವರ್ಣಗೆಡ್ಡೆ ಬೆಳೆದಿದ್ದು ಮಾರುಕಟ್ಟೆ ಇಲ್ಲದೆ ಅದನ್ನು ಭೂಮಿಯಿಂದ ಹೊರ ತೆಗೆಯಲಾಗದ ಅತಂತ್ರ ಸ್ಥಿತಿಗೆ ಬಂದಿದ್ದಾರೆ.

10 ವರ್ಷದಿಂದ ಸುವರ್ಣ ಗೆಡ್ಡೆ ಬೆಳೆ: ರೈತ ಎಲ್‌. ಗಣಪತಿ 10 ವರ್ಷದಿಂದ ಸುವರ್ಣ ಗೆಡ್ಡೆ ಬೆಳೆಯುತ್ತಾ ಬಂದಿದ್ದಾರೆ. ಈ ಬಾರಿಯ ಬೆಳೆಗೆ ವಿಶೇಷ ಗಮನ ನೀಡಿದ್ದು, ಉತ್ತಮ ಪಸಲಿನ ನಿರೀಕ್ಷೆ ಹುಸಿಯಾಗಿಲ್ಲ. ಆದರೆ ಇದ್ದಕ್ಕಿದ್ದಂತೆ ಬಂದೆರಗಿದ ಕೊರೊನಾಘಾತದಿಂದ ಫಸಲು ಕೈ ಸೇರುವ ನಿರೀಕ್ಷೆ ಮಾತ್ರ ಹುಸಿಯಾಗುತ್ತಿದೆ.

ಮಾರುಕಟ್ಟೆ ಇಲ್ಲ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸುವರ್ಣ ಗೆಡ್ಡೆಗೆ ಬಹು ಬೇಡಿಕೆ ಇದೆ. ಮದುವೆ ಇನ್ನಿತರ ಸಮಾರಂಭಗಳಿಗೆ ಸುವರ್ಣ ಗೆಡ್ಡೆ ವಿಲೇವಾರಿಯಾಗುತ್ತಿತ್ತು. ಆದರೆ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಸಂಪರ್ಕ ವ್ಯವಸ್ಥೆಯೂ ಇಲ್ಲ. ಕಾರ್ಯಕ್ರಮಗಳು ನಡೆಯುತ್ತಿಲ್ಲ. ಪ್ರತಿವರ್ಷ ಉಡುಪಿ ಜಿಲ್ಲೆಗೆ ಸಾಗಿಸುತ್ತಿದ್ದ ಸುವರ್ಣಗೆಡ್ಡೆಯನ್ನು ಕೇಳುವವರು ಇಲ್ಲದಂತಾಗಿದೆ.

ಹಾಕಿದ ದುಡ್ಡು ವಾಪಸಿಲ್ಲ: ಸುವರ್ಣ ಗೆಡ್ಡೆ ಭೂಮಿಯಲ್ಲಿರುವಷ್ಟು ದಿನ ಸೇಫ್‌. ಆದರೆ ಮಳೆ ಆರಂಭಕ್ಕಿಂತ ಮುನ್ನ ಭೂಮಿಯಿಂದ ಹೊರತೆಗೆಯಲೇ ಬೇಕು. ತೆಗೆದ ಮೇಲೆ ಕೂಡಲೇ ಮಾರುಕಟ್ಟೆ ತಲುಪದಿದ್ದರೆ ಗಡ್ಡೆಯ ತೂಕ ಕಡಿಮೆಯಾಗುತ್ತ ಬರುತ್ತದೆ. ಈಗಾಗಲೇ ಬೆಳೆಗೆ 2 ಲಕ್ಷದ ವರೆಗೆ ವೆಚ್ಚ ಮಾಡಲಾಗಿದ್ದು, ಹಾಕಿದ ಹಣ ವಾಪಸ್‌ ಬರುವ ಸಾಧ್ಯತೆ ಕೂಡ ಇಲ್ಲದಂತಾಗಿದೆ.

ಮಾರುಕಟ್ಟೆಯಲ್ಲಿ ಬೆಲೆ ಸಿಕ್ಕೀತೆ?: ಈಗಾಗಲೇ ಬೆಳೆದ ಬೆಳೆಯನ್ನು ಮಾರುಕಟ್ಟೆಗೆ ಕೊಂಡೊಯ್ಯುವ ಕೆಲಸ ಮಾಡಲಾಗುತ್ತದೆ ಎಂಬ ಭರವಸೆಯನ್ನು ಎಪಿಎಂಸಿ
ನೀಡುತ್ತಲೇ ಬಂದಿದೆ. ಆದರೆ ಅಲ್ಲಿ ಖರೀದಿ ಮಾಡುವವರ್ಯಾರು? ಎಂಬ ಆತಂಕಕ್ಕೆ ರೈತರು ಗುರಿಯಾಗಿದ್ದಾರೆ.

ಪ್ರತಿವರ್ಷ ಸುವರ್ಣ ಗಡ್ಡೆಗಾಗಿ ಬೇಡಿಕೆ ಇಡುವ ಉಡುಪಿ ಜಿಲ್ಲೆಗೆ ಹಂತಹಂತವಾಗಿ ಕಳುಹಿಸಿ ಕೊಡಲಾಗುತ್ತಿತ್ತು. ಆದರೆ ಈ ಬಾರಿ ಎಲ್ಲವೂ ಸ್ಥಗಿತಗೊಂಡಿದ್ದು ಕೇಳುವವರು ಇಲ್ಲವಾಗಿದೆ. ಅನುಮತಿ ಕೊಟ್ಟರೆ ಮಾರುಕಟ್ಟೆಗೆ ಸಾಗಿಸಬಹುದು. ಆದರೆ ಸರಾಸರಿ ಬೆಲೆ ಸಿಗದ್ದಿದ್ದರೆ ತೆಗೆದುಕೊಂಡು ಹೋದ ವಾಹನ ಬಾಡಿಗೆಯೂ ಹುಟ್ಟುವುದಿಲ್ಲ. ಎಪಿಎಂಸಿ ಉತ್ತಮ ಬೆಲೆ ನೀಡದಿದ್ದರೂ ಪರವಾಗಿಲ್ಲ. ಆದರೆ ಹಾಕಿದ ಹಣವಾದರೂ ವಾಪಸ್‌ ಸಿಗುವಂತ ಯೋಗ್ಯ ಬೆಲೆಯನ್ನು ನೀಡಬೇಕು.
ಎಲ್‌. ಗಣಪತಿ,
ದೇವಗಂಗೆ, ಸುವರ್ಣಗೆಡ್ಡೆ ಬೆಳೆಗಾವಿ

ಸುವರ್ಣ ಗಡ್ಡೆ ಬೆಳೆದ ರೈತ ಆತಂಕ ಪಡುವ ಅಗತ್ಯವಿಲ್ಲ. ಗಡ್ಡೆಯನ್ನು ಒಂದೇ ಸಲ ಕಟಾವು ಮಾಡುವ ಅಗತ್ಯವಿಲ್ಲ. ಹಂತಹಂತವಾಗಿ ಮಾಡಬಹುದು. ಅಲ್ಲದೆ
ಬೆಂಗಳೂರು ಹಾಪ್‌ಕಾಮ್ಸ್‌ನಲ್ಲಿ ಸುವರ್ಣ ಗಡ್ಡೆಗೆ ಉತ್ತಮ ಬೇಡಿಕೆ ಇದೆ. ರೈತರ ಜೊತೆ ಸಂಪರ್ಕದಲ್ಲಿರುತ್ತೇವೆ.
ಯೋಗೀಶ್‌, ಡೆಪ್ಯುಟಿ ಡೈರೆಕ್ಟರ್‌,
ತೋಟಗಾರಿಕ ಇಲಾಖೆ

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.