ಅಜೀಂ ಪ್ರೇಮಜೀ ಫೌಂಡೇಶನ್ ನೆರವು
Team Udayavani, Apr 22, 2020, 5:14 PM IST
ವಾಡಿ: ಬಡವರಿಗೆ ಉಪ ತಹಶೀಲ್ದಾರ್ ವೆಂಕನಗೌಡ ಪಾಟೀಲ ಆಹಾರ ಕಿಟ್ ವಿತರಿಸಿದರು.
ವಾಡಿ: ಪಟ್ಟಣದ ಪಿಲಕಮ್ಮಾ ದೇವಿ ಬಡಾವಣೆಯ ಎರಡು ವರ್ಷದ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೀಲ್ಡೌನ್ ತೆಕ್ಕೆಗೆ ಜಾರಿದ ನಾಲ್ಕು ರೆಡ್ ಜೋನ್ ಬಡಾವಣೆಗಳ ಅತ್ಯಂತ ಬಡ ಕುಟುಂಬಗಳಿಗೆ ಅಜೀಂ ಪ್ರೇಮಜೀ ಫೌಂಡೇಷನ್ ಬೆಂಗಳೂರು ಇವರ ವತಿಯಿಂದ ದಿನಸಿ ಕಿಟ್ ವಿತರಿಸಲಾಯಿತು.
ಸೀಲ್ಡೌನ್ ಬಡಾವಣೆಗಳಿಗೆ ಭೇಟಿ ನೀಡಿದ ನಾಲವಾರ ಉಪ ತಹಶೀಲ್ದಾರ್ ವೆಂಕನಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಮೈನಾಬಾಯಿ ರಾಠೊಡ ಹಾಗೂ ಮುಖ್ಯಾ ಧಿಕಾರಿ ವಿಠ್ಠಲ ಹಾದಿಮನಿ ಅವರು ಮೊದಲೇ ಗುರುತಿಸಿ ಪಟ್ಟಿ ಮಾಡಲಾಗಿದ್ದ ಪಡಿತರ ಚೀಟಿ ವಂಚಿತ ಬಡ ಕುಟುಂಬಗಳಿಗೆ ಮತ್ತು ಗುಡಿಸಲುವಾಸಿ ಬಡಜನರಿಗೆ ಅಜೀಂ ಪ್ರೇಮಜೀ ಫೌಂಡೇಷನ್ ಒದಗಿಸಿದ ಆಹಾರ ದಾಸ್ತಾನು ವಿತರಿಸಿದರು.
ಹಿರಿಯ ಆರೋಗ್ಯ ನಿರೀಕ್ಷಕ ಶರಣಪ್ಪ ಮಡಿವಾಳ, ಈಡಿಗ ಸಮಾಜದ ಅಧ್ಯಕ್ಷ ಸುನೀಲ ಗುತ್ತೇದಾರ, ಈಶ್ವರ ಅಂಬೇಕರ್, ರಾಹುಲ ಹುಗ್ಗಿ, ವಿಜಯಕುಮಾರ ಮಂಗಳೂರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖಾಸಗಿ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದ ಶಾಸಕ ಶರಣು ಸಲಗರ್
Bidar; ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ನಾಲಿಗೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಸಾವು
Bidar; ಯುವಕರ ಬದುಕು ಹಾಳು ಮಾಡಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ
ಏ… ಇದು ನನ್ ಸೀಟು… ಇಲ್ಲ ನನ್ ಸೀಟು: ಬಸ್ಸಿನೊಳಗೆ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು
Bidar: ಕಳ್ಳತನವಾಗಿದ್ದ 52 ಮೊಬೈಲ್ ಗಳನ್ನು ಪತ್ತೆ ಮಾಡಿದ ಜಿಲ್ಲಾ ಪೊಲೀಸ್