ಅಬಕಾರಿ ದಾಳಿ: ಪಾವೂರಿನಲ್ಲಿ ಅಕ್ರಮ ಕಳ್ಳಬಟ್ಟಿ ಸಾರಾಯಿ ವಶ
Team Udayavani, Apr 22, 2020, 5:36 PM IST
ಮಂಗಳೂರು: ದಕ್ಷಿಣ ಕನ್ನಡ ಅಬಕಾರಿ ಇಲಾಖೆಯ ತಂಡ ಇಂದು ಪಾವೂರಿನಲ್ಲಿ ದಾಳಿ ನಡೆಸಿ ತಯಾರಿಸಲಾಗುತ್ತಿದ್ದ ಕಳ್ಳಬಟ್ಟಿಯನ್ನು ವಶಕ್ಕೆ ಪಡೆಯಲಾಗಿದೆ.
ಪಾವೂರು ಉಳಿಯ ಗ್ರಾಮದ ನೇತ್ರಾವತಿ ನದಿಯ ದಡದಲ್ಲಿ ಸುಮಾರು 2.5 ಲೀಟರ್ ಕಳ್ಳಭಟ್ಟಿ ಸಾರಾಯಿ, ಭಟ್ಟಿ ಸಾರಾಯಿ ತಯಾರಿಕೆಗಾಗಿ ದಾಸ್ತಾನಿಸಿರುವ 900 ಲೀಟರ್ ಗಳಷ್ಟು ಹುಳಿ ರಸ, 75 ಕೆಜಿ ಬೆಲ್ಲ ಹಾಗೂ ಭಟ್ಟಿ ತಯಾರಿಸಲು ಉಪಯೋಗಿಸುವ ಸಲಕರಣೆಗಳು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ.
ಈ ಸಂಬಂಧ ಆರೋಪಿ ಪ್ರೇಮ್ ಫೆರಾರೋ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಅಬಕಾರಿ ಉಪ ಆಯುಕ್ತರಾದ ಶೈಲಜಾ ಕೋಟೆ ರವರ ನಿರ್ದೇಶನದಂತೆ ಮಂಗಳೂರು ಉಪ ವಿಭಾಗ-1 ರ ಅಬಕಾರಿ ಡಿವೈಎಸ್ಪಿ ಶಿವಪ್ರಸಾದ್ ನೇತೃತ್ವದಲ್ಲಿ ಉಪ ವಿಭಾಗ-1ರ ಅಬಕಾರಿ ಇನ್ಸ್ಪೆಕ್ಟರ್ ಸೀಮಾ, ರತ್ನಾಕರ್ ರೈ, ಸಬ್ ಇನ್ಸ್ಪೆಕ್ಟರ್ ಪ್ರತಿಭಾ ಜಿ ಹಾಗೂ ಉಪ ವಿಭಾಗ 1 ರ ಎಲ್ಲಾ ಸಿಬ್ಬಂದಿಗಳೊಂದಿಗೆ ದಾಳಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!