ಕೃಷಿ ಕಾಯಕ, ಮಳೆಗಾಲದ ಸಿದ್ಧತೆಯಲ್ಲಿ ಹಳ್ಳಿಗರು


Team Udayavani, Apr 23, 2020, 5:48 AM IST

ಕೃಷಿ ಕಾಯಕ, ಮಳೆಗಾಲದ ಸಿದ್ಧತೆಯಲ್ಲಿ ಹಳ್ಳಿಗರು

ಕುಂದಾಪುರ: ಕೋವಿಡ್-19 ಹಿನ್ನೆಲೆಯಲ್ಲಿ ದೇಶವೇ ಲಾಕ್‌ಡೌನ್‌ನಲ್ಲಿದೆ. ನಗರ ಭಾಗದವರು ಸಮಯ ಕಳೆಯುವುದು ಹೇಗೆಂದು ಚಿಂತಿಸಿದರೆ, ಹಳ್ಳಿಗರು ಮಾತ್ರ ಕೃಷಿ ಚಟುವಟಿಕೆಗಳಲ್ಲಿ, ಮಳೆಗಾಲಕ್ಕೆ ಮನೆಗಳಲ್ಲಿ ಆಗಬೇಕಾದ ಸಿದ್ಧತೆಗಳು, ಹಪ್ಪಳ, ಸಂಡಿಗೆಯಂತಹ ತಿಂಡಿ ತಯಾರಿಕೆಯಲ್ಲಿ ನಿರತರಾಗಿದ್ದಾರೆ.

ಲಾಕ್‌ಡೌನ್‌ ಆದೇಶವನ್ನು ನಗರ ಭಾಗದ ಕೆಲ ಮಂದಿ ಗಾಳಿಗೆ ತೂರಿದರೆ, ಗ್ರಾಮೀಣ ಭಾಗಗಳಲ್ಲಿ ಮಾತ್ರ ಜನ ಹೀಗೆ ತಮಗೆ ಸಿಕ್ಕ ಸಮಯಾವಕಾಶವನ್ನು ಹಾಳು ಮಾಡದೇ ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆ.

ಅಡಕೆ ಹೆಕ್ಕುವುದು, ಅಡಕೆ ಒಣಗಿಸುವುದು, ಒಣಗಿದ ಅಡಕೆ ಸುಲಿಯೋದು, ತೋಟಕ್ಕೆ ನೀರು ಹಾಯಿಸುವುದು, ಕಾಳು ಮೆಣಸು ಕೊಯ್ಯುವುದು, ಮಳೆಗಾಲಕ್ಕೆ ಬೇಕಾದ ಕಟ್ಟಿಗೆ ರಾಶಿ ಹಾಕುವುದು, ಹಟ್ಟಿಗೆ ಬೇಕಾದ ತರಗೆಲೆ ರಾಶಿ.. ಇದು ಕುಂದಾಪುರದ ಗ್ರಾಮೀಣ ಭಾಗಗಳಾದ ಹಳ್ಳಿಹೊಳೆ, ಕಮಲಶಿಲೆ, ಯಡಮೊಗೆ, ಅಮಾಸೆಬೈಲು, ದೇವರಬಾಳು, ಕಬ್ಬಿನಾಲೆ ಮತ್ತಿತರ ಗ್ರಾಮೀಣ ಪ್ರದೇಶಗಳಲ್ಲಿ ಕಂಡು ಬಂದ ಚಿತ್ರಣ.

ಮಳೆಗಾಲದಲ್ಲಿ ಅಡಿಕೆ ಕೆಲಸ ಮಾಡುತ್ತಿದ್ದೇವು. ಲಾಕ್‌ಡೌನ್‌ನಿಂದ ಸ್ವಲ್ಪ ಬೇಗ ಈ ಕೆಲಸ ಆರಂಭಿಸಿದ್ದೇವೆ. ಈ ಭಾಗದಲ್ಲಿ ಹೆಚ್ಚು ಅಡಿಕೆ ಕೃಷಿಕರಿದ್ದು, ಲಾಕ್‌ಡೌನ್‌ನಿಂದ ಅಷ್ಟೇನು ತೊಂದರೆಯಾಗಿಲ್ಲ. ಮಳೆಗಾದ ಸಿದ್ಧತೆಯಂತಹ ಕೆಲಸಗಳು ಈ ವರ್ಷ ಬೇಗನೇ ಮುಗಿದಿವೆ ಎನ್ನುತ್ತಾರೆ ಬರೇಗುಂಡಿಯ ರಾಮಕೃಷ್ಣ ರಾವ್‌.

ಹೊರೆಯಾಗದ ಲಾಕ್‌ಡೌನ್‌
ಗ್ರಾಮೀಣ ಭಾಗದ ಜನರಿಗೆ ಕಳೆದ ಅನೇಕ ದಿನಗಳಿಂದ ಲಾಕ್‌ಡೌನ್‌ ಇದ್ದರೂ, ಅಷ್ಟೇನು ಹೊರೆಯಾದಂತೆ ಕಂಡು ಬಂದಿಲ್ಲ. ಬೇರೆ ಕಡೆಗೆ ಕೆಲಸಕ್ಕೆ ಹೋಗುತ್ತಿದ್ದರಿಂದ ಮನೆ ಕೆಲಸಕ್ಕೆ ಸಮಯ ಸಿಗುತ್ತಿರಲಿಲ್ಲ. ಈಗ ಸಿಕ್ಕಿದೆ. ಮನೆ ಕೆಲಸ, ಕಟ್ಟಿಗೆ ರಾಶಿ, ಹೀಗೆ ಸಮಯ ಕಳೆಯುವುದು ಕೂಡ ಅಷ್ಟೇನು ಕಷ್ಟವಾಗುತ್ತಿಲ್ಲ. ಮನೆಯಲ್ಲಿ ದಾಸ್ತಾನಿರುವ ಅಕ್ಕಿಯಿದೆ. ಅಲ್ಪ – ಸ್ವಲ್ಪ ತರಕಾರಿಗಳು ಕೂಡ ಇವೆ. ಬೇರೆ ಏನಾದರೂ ಬೇಕಾದರೆ ವಾರಕ್ಕೊಮ್ಮೆ ಅಥವಾ 2 ವಾರಕ್ಕೊಮ್ಮೆ ಇಲ್ಲೇ ಸಮೀಪದ ಪೇಟೆಗೆ ಹೋಗುತ್ತೇವೆ ಎನ್ನುವುದು ದೇವರಬಾಳು ನಿವಾಸಿ ರಾಜೇಶ್‌ ಅಭಿಪ್ರಾಯ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Anegudde Temple: ಭಕ್ತರ ಸಂಖ್ಯೆ ಹೆಚ್ಚಳ; ವಿಶೇಷ ಪಾನಕ ವಿತರಣೆ 

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.