ಉಡುಪಿ ಜಿಲ್ಲೆ : ಯಥಾಸ್ಥಿತಿ ಜತೆ ಕೆಲವಷ್ಟೆ ರಿಯಾಯಿತಿ; ಗ್ರಾಮಾಂತರಕ್ಕೆ ಆಂಶಿಕ ರಿಯಾಯಿತಿ


Team Udayavani, Apr 23, 2020, 9:34 AM IST

ಉಡುಪಿ ಜಿಲ್ಲೆ : ಯಥಾಸ್ಥಿತಿ ಜತೆ ಕೆಲವಷ್ಟೆ ರಿಯಾಯಿತಿ; ಗ್ರಾಮಾಂತರಕ್ಕೆ ಆಂಶಿಕ ರಿಯಾಯಿತಿ

ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಈಗಿರುವ ಕಾನೂನಿನ ಜತೆಗೆ ಗುರುವಾರ ಮಧ್ಯರಾತ್ರಿ ಬಳಿಕ ಜಾರಿಗೆ ಬರುವಂತೆ ಕೆಲವು ರಿಯಾಯಿತಿಗಳನ್ನು ರಾಜ್ಯ ಸರಕಾರದ ಆದೇಶದಂತೆ ಜಿಲ್ಲಾಡಳಿತ ಘೋಷಿಸಿದೆ.  ಜಿಲ್ಲೆಯಲ್ಲಿ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಈಗಿರುವ ಅವಧಿಯನ್ನು (ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 11ರ ವರೆಗೆ) ವಿಸ್ತರಿಸಬೇಕೆ ಬೇಡವೆ ಎಂದು ಗುರುವಾರ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ನಿರ್ಧರಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಮತ್ತು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕಟ್ಟಡ, ನೀರಾವರಿ, ರಸ್ತೆ, ಮನೆ ನಿರ್ಮಾಣಗಳಿಗೆ ಅವಕಾಶ ನೀಡಲಾಗಿದೆ. ಆದರೆ ಇದಾವುದೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನಡೆಯುವಂತಿಲ್ಲ. ಎಲೆಕ್ಟ್ರಾನಿಕ್ಸ್‌ ಉಪಕರಣ, ಮೊಬೈಲ್‌ ಶಾಪ್‌ಗಳನ್ನು ತೆರೆಯಲು ಅವಕಾಶವಿಲ್ಲ. ಹೊಟೇಲ್‌ಗಳಲ್ಲಿ ಆಹಾರ ವಸ್ತುಗಳನ್ನು ಕೊಂಡೊಯ್ಯಬಹುದೆ ವಿನಾ ಅಲ್ಲಿ ಕುಳಿತು ಸ್ವೀಕರಿಸುವಂತಿಲ್ಲ. ಈ ಆದೇಶ ಹಿಂದಿನಂತೆಯೇ ಮುಂದುವರಿಯಲಿದೆ. ಹಿಂದಿನಂತೆ ಆಸ್ಪತ್ರೆ, ಮೆಡಿಕಲ್‌ ಶಾಪ್‌ಗ್ಳಿಗೆ ಅವಕಾಶಗಳಿವೆ.

ಮೀನುಗಾರಿಕೆ
ಮೀನುಗಾರಿಕೆಯಲ್ಲಿ ಈಗಾಗಲೇ ಇರುವ ರಿಯಾಯಿತಿಗಳು ನಡೆಯಬಹುದು. ಯಾಂತ್ರೀ ಕೃತ ಮೀನುಗಾರಿಕೆ ನಡೆಸುವಂತಿಲ್ಲ. ನಮ್ಮ ಜಿಲ್ಲೆಗೆ ಎಷ್ಟು ಮೀನು ಬೇಕೋ ಅಷ್ಟು ಸಿಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಎಲೆಕ್ಟ್ರಿಕಲ್‌ ಕೆಲಸಕ್ಕೆ ಅವಕಾಶ
ಎಲೆಕ್ಟ್ರಿಕಲ್‌, ಪ್ಲಂಬಿಂಗ್‌ ಇತ್ಯಾದಿ ಮನೆಗಳಿಗೆ ತೆರಳಿ ದುರಸ್ತಿ ಮಾಡುವ ಕೆಲಸಗಳನ್ನು ನಡೆಸಲು ಅವಕಾಶ ನೀಡಲಾಗಿದೆ. ಕೃಷಿ, ತೋಟಗಾರಿಕೆ ಉತ್ಪನ್ನಗಳ ಸಾಗಾಟ, ಮಾರಾಟಗಳಿಗೆ ಈಗಾಗಲೇ ಇರುವಂತೆ ಅವಕಾಶಗಳಿವೆ.

ಜವುಳಿ, ಗೂಡಂಗಡಿ ತೆರೆಯುವಂತಿಲ್ಲ
ಬಟ್ಟೆ ಅಂಗಡಿ, ಗೂಡಂಗಡಿಗಳನ್ನು ತೆರೆಯಲು ಅವಕಾಶಗಳಿಲ್ಲ. ನಗರವಿರಲೀ, ಗ್ರಾಮಾಂತರವಿರಲಿ ಆಹಾರ, ಕೃಷಿ, ತೋಟಗಾರಿಕೆ, ಔಷಧಿ ಉತ್ಪಾದನೆ ಸಂಬಂಧಿತ ವ್ಯವಹಾರ ಗಳನ್ನು ಹೊರತು ಪಡಿಸಿ ಯಾವುದೇ ಕಾರ್ಖಾನೆಗಳ ಉತ್ಪಾದನೆಗೆ ಅವಕಾಶಗಳಿಲ್ಲ. ಆದರೆ ಗ್ರಾಮಾಂತರ ಪ್ರದೇಶದಲ್ಲಿ ಕಾರ್ಖಾನೆಗಳ ಕಟ್ಟಡ ನಿರ್ಮಿಸಲು ಅವಕಾಶಗಳಿವೆ.

ಗುಂಪುಗೂಡಬೇಡಿ ಎಂದ ಆರೋಗ್ಯ ಸಹಾಯಕಿಗೆ ಬೆದರಿಕೆ: ದೂರು
ಪಡುಬಿದ್ರಿ: ಉಚ್ಚಿಲದಲ್ಲಿ ಕರ್ತವ್ಯದಲ್ಲಿದ್ದ ಆರೋಗ್ಯ ಉಪಕೇಂದ್ರದ ಆರೋಗ್ಯ ಸಹಾಯಕಿ ಶ್ಯಾಮಲಾ ಅವರಿಗೆ ಪಕ್ಕದ ಮನೆಯ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಬಗ್ಗೆ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದು ಮುಚ್ಚಳಿಕೆ ಬರೆಸಿ ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ. ಕೋವಿಡ್‌-19 ವಿಚಾರವಾಗಿ ಗುಂಪಾಗಿ ಮನೆಯಲ್ಲಿ ಜನ ಸೇರಿಸಬೇಡಿ ಎಂಬ ಶ್ಯಾಮಲಾ ಅವರ ಸಲಹೆಯಿಂದ ಕುಪಿತರಾದ ಮುಮ್ತಾಜ್‌ ಮತ್ತು ಆಕೆಯ ಸಹೋದರ ಮನ್ಸೂರ್‌ ಬೆದರಿಕೆ ಒಡ್ಡಿದ್ದಾರೆ ಎಂದು ದೂರಲಾಗಿದೆ. ಪಡುಬಿದ್ರಿ ಪೊಲೀಸರು ಸಿಪಿಐ ಮಹೇಶ್‌ ಪ್ರಸಾದ್‌ ಸಮಕ್ಷಮ ಆರೋಪಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿ ಎಚ್ಚರಿಕೆ ನೀಡಿ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ. ಆರೋಗ್ಯ ಯೋಧರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ವಿಧಿಸಬಹುದಾದ ಕಠಿನ ಶಿಕ್ಷೆಗಳಿಂದ ಈ ಆರೋಪಿಗಳು ಸದ್ಯಕ್ಕೆ ಬಚಾವಾಗಿದ್ದಾರೆ.

ದೂರು ನೀಡಿ
ಉಡುಪಿ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ, ದೌರ್ಜನ್ಯ ಪ್ರಕರಣಗಳು ನಡೆದಲ್ಲಿ ಜಿಲ್ಲಾ ಪೊಲೀಸ್‌ ವತಿಯಿಂದ ನೇಮಿಸಲ್ಪಟ್ಟ ನೋಡಲ್‌ ಅಧಿಕಾರಿಯ ಮೊಬೈಲ್‌ 9480800942ಕ್ಕೆ ದೂರು ನೀಡುವಂತೆ ಜಿಲ್ಲಾಡಳಿತ ಸೂಚಿಸಿದೆ.

ಟಾಪ್ ನ್ಯೂಸ್

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8

UP: ಪತಿಯ ಕೈಕಾಲು ಕಟ್ಟಿ ಖಾಸಗಿ ಅಂಗವನ್ನು ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ: ಪತ್ನಿ ಬಂಧನ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.