ಉಳ್ಳಾಲ: ಕರ್ನಾಟಕ – ಕೇರಳ ಗಡಿ ವಿವಾದ! ಗಡಿ ಸರ್ವೇ ಕಾರ್ಯಕ್ಕೆ ಚಾಲನೆ
ಕರ್ನಾಟಕ - ಕೇರಳ ಗಡಿ ಸ್ಥಳ ವಿವಾದ
Team Udayavani, Apr 23, 2020, 11:49 AM IST
ಉಳ್ಳಾಲ: ಕರ್ನಾಟಕ – ಕೇರಳ ಗಡಿ ಪ್ರದೇಶವಾದ ದ.ಕ.ಜಿಲ್ಲೆಯ ಮಂಗಳೂರಿನಲ್ಲಿ ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ ಬಳಿಕ ಕೇರಳ ಪೊಲೀಸರು ಗಡಿ ಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಭದ್ರತೆಯನ್ನು ಜಾರಿಗೊಳಿಸಿದ್ದು ತಲಪಾಡಿಯಲ್ಲಿ ಕರ್ನಾಟಕ ಚೆಕ್ ಪೋಸ್ಟ್ ಬಳಿಯೇ ಕೇರಳ ಚೆಕ್ ಪೋಸ್ಟ್ ನಿರ್ಮಾಣ ಇದೀಗ ಗಡಿ ವಿವಾದಕ್ಕೆ ಕಾರಣವಾಗಿದ್ದು, ಆಡಳಿತಾತ್ಮಕ ಚರ್ಚೆಯ ಬಳಿಕ ಇಂದು ಎರಡೂ ಜಿಲ್ಲೆಯ ಕಂದಾಯ ಇಲಾಖೆಯಿಂದ ಗಡಿ ಗುರುತು ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಸೋಂಕು ಹೆಚ್ಚಾದ ಹಿನ್ನಲೆಯಲ್ಲಿ ಕರ್ನಾಟಕ ಕೇರಳ ಗಡಿ ಪ್ರದೇಶದಲ್ಲಿ ಸಂಚಾರ ಬಂದ್ ಮಾಡಲಾಗಿತ್ತು. ಇದರೊಂದಿಗೆ ಮಂಗಳೂರು – ಕಾಸರಗೋಡು ಹೆದ್ದಾರಿಯ ಸಂಪರ್ಕ ಸೇರಿದಂತೆ ಕೇರಳದ ರೋಗಿಗಳಿಗೂ ಮಂಗಳೂರು ಪ್ರವೇಶ ತಡೆಯಲಾಗಿತ್ತು. ಬಳಿಕ ರೋಗಿಗಳ ತಪಾಸಣೆ ನಿಟ್ಟಿನಲ್ಲಿ ಸುಪ್ರಿಂ ಕೋರ್ಟ್ ಆದೇಶದಂತೆ ಷರತ್ತಿನ ಮೇಲೆ ರೋಗಿಗಳಿಗೆ ಅವಕಾಶ ನೀಡಲಾಗಿತ್ತು. ಆದರೆ ವಾರದ ಹಿಂದೆ ಕೋವಿಡ್ ಸೋಂಕಿನಿಂದ ದ.ಕ.ಜಿಲ್ಲೆಯಲ್ಲಿ ಸಾವಿನ ಪ್ರಕರಣದ ಬಳಿಕ ಕೇರಳ ಸರಕಾರ ಕರ್ನಾಟಕದ ಎಲ್ಲಾ ಚೆಕ್ ಪೋಸ್ಡ್ ಗಳಲ್ಲಿ ಇಬ್ಬರಂತೆ ಕೇರಳ ಪೊಲೀಸರನ್ನು ನಿಯುಕ್ತಿಗೊಳಿಸಿದ್ದು ತಲಪಾಡಿಯಲ್ಲಿ ಈ ಹಿಂದೆ ಮಂಜೇಶ್ವರ ತೂಮಿನಾಡು ಬಳಿ ಇದ್ದ ಚೆಕ್ ಪೋಸ್ಟನ್ನು ತಲಪಾಡಿಯ ಕರ್ನಾಟಕ ಚೆಕ್ ಪೋಸ್ಟ್ ನಿಂದ 100 ಮೀಟರ್ ಅಂತರದಲ್ಲಿ ನಿರ್ಮಿಸಿದ್ದರಿಂದ ತಲಪಾಡಿ ಗ್ರಾಮ ಪಂಚಾಯತ್ ಅಕ್ಷೇಪಣೆ ಗಡಿ ವಿವಾದಕ್ಕೆ ಕಾರಣ ವಾಗಿದೆ.
ವಿವಾದಕ್ಕೆ ಕಾರಣವಾಗಿರುವ ತಲಪಾಡಿಯಲ್ಲಿ ಹಾಕಿರುವ ಕೇರಳ ಪೊಲೀಸ್ ಚೆಕ್ ಪೋಸ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು