ಸರ್ಕಾರದ ಮಾರ್ಗಸೂಚಿ ಪಾಲಿಸೋಣ
ಚಿಗಟೇರಿ ಹೋಬಳಿಯಲ್ಲಿ ಮಳೆಗೆ ಹಾನಿಗೊಳಗಾದ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ
Team Udayavani, Apr 23, 2020, 12:52 PM IST
ಹರಪನಹಳ್ಳಿ: ಮಳೆಯಿಂದ ಮನೆ ಹಾನಿಗೊಳಗಾದ ಫಲಾನುಭವಿಗಳಿಗೆ ಧನ ಸಹಾಯ ಹಾಗೂ ಆಹಾರ ಕಿಟ್ ವಿತರಿಸಲಾಯಿತು.
ಹರಪನಹಳ್ಳಿ: ಕೋವಿಡ್ ಸೋಂಕು ಯಾವುದೇ ಜಾತಿ-ಜನಾಂಗದಿಂದ ಬಂದಿದ್ದಲ್ಲ. ಜಾತಿ ಬಣ್ಣ ಕಟ್ಟದೇ ಎಲ್ಲರೂ ಕೊರೊನಾ ವಿರುದ್ಧ ಹೋರಾಟ ಮಾಡುತ್ತ ಸರ್ಕಾರದ ಮಾರ್ಗಸೂಚಿ ಪಾಲಿಸೋಣ ಎಂದು ಹೂವಿನಹಡಗಲಿ ಕ್ಷೇತ್ರದ ಶಾಸಕ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.
ತಾಲೂಕಿನ ಚಿಗಟೇರಿ ಹೋಬಳಿಯಲ್ಲಿ ಬುಧವಾರ ಟಾಸ್ಕ್ಫೋರ್ಸ್ ಸಮಿತಿ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಅಕಾಲಿಕ ಮಳೆಯಿಂದ ಹಾನಿಯಾಗಿರುವ ಗ್ರಾಮಗಳಾದ ಮೈದೂರು, ಬಳಿಗನೂರು, ಗೌರಿಪುರ ಗ್ರಾಮದ ಕುಟುಂಬದ ಸದಸ್ಯರಿಗೆ ಆಹಾರ ಕಿಟ್ ಹಾಗೂ ಧನ ಸಹಾಯ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ವಿಶ್ವಕ್ಕೆ ಮಾರಕವಾಗಿರುವ ಈ ವೈರಸ್ ಬಗ್ಗೆ ಯಾರಿಗೂ ಭಯ ಬೇಡ. ಜಾಗೃತಿ ಇರಲಿ. ವಿಶ್ವಾದ್ಯಂತ ಕೋವಿಡ್-19 ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಆದರೆ ಕರ್ನಾಟಕದಲ್ಲಿ ಒಂದಿಷ್ಟು ಸಮಾಧಾನಕರ ವರದಿ ಬರುತ್ತಿದೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಯಾವುದೇ ಹೊಸ ಪ್ರಕರಣ ಬಂದಿಲ್ಲ. ಲಾಕ್ಡೌನ್ ಘೋಷಣೆಯಾಗಿ ಏ. 23ಕ್ಕೆ ಒಂದು ತಿಂಗಳು ಕಳೆಯಲಿದೆ. ಜನರು ಕೂಡ ಸಹಕಾರ ಕೊಟ್ಟಿದ್ದಾರೆ. ಸಾಮಾಜಿಕ ಅಂತರ ಕಾಯ್ದಕೊಂಡು ಮನೆಯಿಂದ ಹೊರಗೆ ಬಾರದೇ ಒಗ್ಗಟ್ಟಿನಿಂದ ಕೊರೊನಾ ಎದುರಿಸುವಂತಾಗಿದೆ ಎಂದರು.
ಅಕಾಲಿಕ ಮಳೆಗೆ ಚಿಗಟೇರಿ ಹೋಬಳಿಯಲ್ಲಿ ಕೆಲ ಮನೆಗಳಿಗೆ ಹಾನಿಯಾಗಿ, ಮನೆ ಮೇಲ್ಛಾವಣಿ ಹಾರಿಹೋಗಿದೆ. ಇಂಥ ಫಲಾನುಭವಿಗಳ ನೆರವಿಗೆ ಚಿಗಟೇರಿ ಮತ್ತು ಹರಪನಹಳ್ಳಿ ಟಾಸ್ಕ್ ಫೋರ್ಸ್ ಪದಾಧಿಕಾರಿಗಳು ಧಾವಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿರುವುದರಿಂದ ಕೆಲಸವಿಲ್ಲದೇ ಆಹಾರಕ್ಕಾಗಿ ಪರದಾಡುವಂತಾಗಿದೆ. ಇಂಥವರಿಗೆ ಉಳ್ಳವರು ಸಹಾಯ-ಸಹಕಾರ ಮಾಡಬೇಕು. ಮನೆಯ ಮೇಲ್ಛಾವಣೆ ಹಾರಿಹೋಗಿರುವ ಫಲಾನುಭವಿಗಳಿಗೆ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸುವೆ ಎಂದು ತಿಳಿಸಿದರು.
ಮನೆ ಹಾನಿಗೊಳಗಾದ 8 ಜನರಿಗೆ ಧನ ಸಹಾಯ ಹಾಗೂ ಆಹಾರ ಕಿಟ್ ವಿತರಿಸಲಾಯಿತು. ಜಿಲ್ಲಾ ಗ್ರಾಮಾಂತರ ಟಾಸ್ಕ್ಫೋರ್ಸ್ ಸಮಿತಿ ಸದಸ್ಯ ಶಶಿಧರ್ ಪೂಜಾರ್, ಪುರಸಭೆ ಮಾಜಿ ಅಧ್ಯಕ್ಷ ಎಚ್. ಕೆ. ಹಾಲೇಶ್, ಜಿಪಂ ಸದಸ್ಯ ಉತ್ತಂಗಿ ಮಂಜುನಾಥ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಲೂರು ಅಂಜಿನಪ್ಪ, ಮುಖಂಡರಾದ ಎಂ. ರಾಜಶೇಖರ್, ಪಿ.ಎಲ್.ಪೋಮ್ಯಾನಾಯ್ಕ, ಎಂ.ಟಿ. ಬಸವನಗೌಡ, ಮುತ್ತಿಗಿ ಜಂಬಣ್ಣ, ಮತ್ತಿಹಳ್ಳಿ ಅಜ್ಜಪ್ಪ, ಪಿ.ಪ್ರೇಮ್ಕುಮಾರಗೌಡ,
ನೀಲಪ್ಪ, ಕಲ್ಲೇಶ್, ದಿವಾಕರ್, ಸಾಬಳ್ಳಿ ಮಂಜಣ್ಣ, ಕುಬೇರಪ್ಪ, ಜಿ.ಎಸ್. ಬಸವನಗೌಡ, ರಿಯಾಜ್, ಮರಿಯಪ್ಪ, ಹನುಮಂತಪ್ಪ, ದುರಗಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!