ನಾಳೆಯಿಂದ ಆರೋಗ್ಯ ಸಮೀಕ್ಷೆ
Team Udayavani, Apr 23, 2020, 5:54 PM IST
ಸಾಂದರ್ಭಿಕ ಚಿತ್ರ
ಹಾವೇರಿ: ಜಿಲ್ಲೆಯಾದ್ಯಂತ ಏ. 24ರಿಂದ ಮನೆ ಮನೆ ಸಮೀಕ್ಷೆ ಕೈಗೊಂಡು ಜನರ ಆರೋಗ್ಯ ಮಾಹಿತಿ ಸಂಗ್ರಹಿಸಬೇಕು. ಮೂರು ದಿನಗಳೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು ಎಂದು ತಹಶೀಲ್ದಾರ್ ಗಳಿಗೆ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಸೂಚನೆ ನೀಡಿದರು.
ಜಿಲ್ಲೆಯ ವಿವಿಧ ತಾಲೂಕುಗಳ ತಹಶೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಮತಗಟ್ಟೆ ಅಧಿಕಾರಿಗಳ ಮೂಲಕ ಆರೋಗ್ಯ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಮಾಹಿತಿ ಸಂಗ್ರಹಕ್ಕಾಗಿ ಆರೋಗ್ಯ ಇಲಾಖೆಯಿಂದ ಮಾದರಿ ತಯಾರಿಸಲಾಗಿದೆ. ಮನೆ ಮನೆಗೆ ತೆರಳಿ 60 ವರ್ಷ ಮೇಲ್ಪಟ್ಟ ವಯೋಮಾನದವರ ವಿವರ, ಸಕ್ಕರೆ ಕಾಯಿಲೆ ಇರುವವರು, ರಕ್ತದೊತ್ತಡ ಇರುವವರು, ಕ್ಯಾನ್ಸರ್ನಿಂದ ಬಳಲುತ್ತಿರುವವರು, ಜ್ವರ, ಶೀತ, ಕೆಮ್ಮು, ಉಸಿರಾಟದ ತೊಂದರೆ ಇರುವವರ ಹೆಸರು, ವಯಸ್ಸು, ಮೊಬೈಲ್ ಸಂಖ್ಯೆ, ಕಾಯಿಲೆ ವಿವರದ ಮಾಹಿತಿ ಸಂಗ್ರಹಿಸಿ ಆಯಾ ಮೇಲುಸ್ತುವಾರಿ ಅಧಿಕಾರಿಗಳ ಮೂಲಕ ತಹಶೀಲ್ದಾರ್ ಕಚೇರಿಗೆ ತಲುಪಿಸಬೇಕು. ಆರೋಗ್ಯ ಇಲಾಖೆ ಮೂಲಕ ಜಿಲ್ಲಾಡಳಿತಕ್ಕೆ ಮಾಹಿತಿ ಕ್ರೋಢೀಕರಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ತೀವ್ರತರ ರೋಗ ಲಕ್ಷಣ ಗಳು ಕಂಡುಬಂದರೆ ಆರೋಗ್ಯ ಇಲಾಖೆ ಮೂಲಕ ಸೂಕ್ತ ಚಿಕಿತ್ಸೆ ನೀಡುವ ಉದ್ದೇಶ ಹೊಂದಲಾಗಿದೆ ಎಂದು ವಿವರಿಸಿದರು.
ಜಿಪಂ ಸಿಇಒ ರಮೇಶ ದೇಸಾಯಿ ಮಾತನಾಡಿ, ಸಮೀಕ್ಷೆಗೆ ತೆರಳುವ ಬಿಎಲ್ ಒಗಳಿಗೆ ಮಾಸ್ಕ್, ಸ್ಯಾನಿಟೈಸರ್ ನೀಡಬೇಕು. ಕೇಂದ್ರ ಸ್ಥಾನದಲ್ಲಿ ಬಿಎಲ್ಒಗಳು ಇಲ್ಲದಿದ್ದರೆ ಪರ್ಯಾಯ ಶಿಕ್ಷಕರ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು. ಎಸಿ ಡಾ| ದಿಲಿಷ್ ಶಶಿ, ಡಿಡಿಪಿಐ ಅಂದಾನೆಪ್ಪ ವಡಗೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟೆಪನವರ, ಚುನಾವಣಾ ತಹಶೀಲ್ದಾರ್ ಪ್ರಶಾಂತ ನಾಲವಾರ, ಹಾವೇರಿ ತಹಶೀಲ್ದಾರ್ ಶಂಕರ್, ಬಿಇಒ ಎಂ.ಎಚ್.ಪಾಟೀಲ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು
34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ
Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ; ವಿಡಿಯೋ ವೈರಲ್
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
MUST WATCH
ಹೊಸ ಸೇರ್ಪಡೆ
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!
Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ
Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ