ಕೋವಿಡ್ 19: ಅಬ್ಬಾ ಪಾಕಿಸ್ತಾನದಲ್ಲಿ ಪರಿಸ್ಥಿತಿ ಹೇಗಿದೆ ಗೊತ್ತಾ? ಇಲ್ಲಿನ ವೈದ್ಯರ ಅಳಲು ಓದಿ

ರಂಜಾನ್ ತಿಂಗಳಲ್ಲಿ ಮಸೀದಿಗಳನ್ನು ತೆರೆಯುವುದು ಮತ್ತು ಸಾಮೂಹಿಕ ಪ್ರಾರ್ಥನೆ ನಡೆಸುವುದು ಅಪಾಯಕ್ಕೆ ಎಡೆಮಾಡಿಕೊಡಲಿದೆ

Team Udayavani, Apr 23, 2020, 5:54 PM IST

ಕೋವಿಡ್ 19: ಅಬ್ಬಾ ಪಾಕಿಸ್ತಾನದಲ್ಲಿ ಪರಿಸ್ಥಿತಿ ಹೇಗಿದೆ ಗೊತ್ತಾ? ಇಲ್ಲಿನ ವೈದ್ಯರ ಅಳಲು ಓದಿ

ಇಸ್ಲಾಮಾಬಾದ್:ಮುಂಬರುವ ದಿನಗಳಲ್ಲಿ ಕೋವಿಡ್ 19 ವೈರಸ್ ನ ಪರಿಣಾಮ ಪಾಕಿಸ್ತಾನದಲ್ಲಿ ತುಂಬಾ ಭೀಕರವಾಗಲಿದೆ. ಅಲ್ಲದೇ ರಂಜಾನ್ ತಿಂಗಳಲ್ಲಿ ಜನರು ಮುಖ್ಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲೇಬೇಕಾಗಿದೆ ಎಂದು ಪಾಕಿಸ್ತಾನದ ವೈದ್ಯರು ಎಚ್ಚರಿಕೆ ನೀಡಿದ್ದಾರೆ.

ಇದೊಂದು ವೈದ್ಯ ಸಂಬಂಧಿ ಸಮಸ್ಯೆಯಾಗಿದೆ ಇದರಿಂದ ಆರ್ಥಿಕ ಮತ್ತು ಸಮಾಜದ ಮೇಲೆ ಪರಿಣಾಮ ಬೀಳಲಿದೆ. ಆದರೆ ಇದಕ್ಕಿಂತ ಮುಖ್ಯವಾಗಿ ಇದೊಂದು ವೈದ್ಯಕೀಯ ಸಮಸ್ಯೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ ಎಂದು ಗ್ಯಾಸ್ಟ್ರೋಎಂಟರಾಲೋಜಿಸ್ಟ್ ಡಾ.ಸಾದ್ ನಿಯಾಝ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಕಳೆದ ನಾಲ್ಕು ದಿನಗಳಲ್ಲಿ ಪಾಕಿಸ್ತಾನದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ ಶೇ.30ರಿರಂದ 40ಕ್ಕೆ ಏರಿಕೆಯಾಗಿದೆ. ಇದೊಂದು ನಿಜಕ್ಕೂ ದುರದೃಷ್ಟಕರ ಸಂಗತಿಯಾಗಿದೆ ಇಲ್ಲಿನ ಜನರು ಇದನ್ನು ಗಂಭೀರವಾಗಿ ಪರಿಗಣಿಸಿಯೇ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಕೋವಿಡ್ 19 ಅಪಾಯಕ್ಕಿಂತ ಹೆಚ್ಚು ನಾವು ಮೊದಲು ಇದರ ಬಗ್ಗೆ ಆಲೋಚಿಸಬೇಕು. ಕೋವಿಡ್ ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಒಂದು ವೇಳೆ ಪಾಕಿಸ್ತಾನದಲ್ಲಿ ಲಾಕ್ ಡೌನ್ ಘೋಷಿಸದಿದ್ದರೆ, ಇದರ ಪರಿಣಾಮ ಮುಂದೆ ಮತ್ತಷ್ಟು ಭೀಕರವಾಗಲಿದೆ. ಅಲ್ಲದೇ ನಾವು ಈಗ ಕಾರ್ಯಪ್ರವೃತ್ತರಾಗದೇ ಹೋದರೆ, ಪರಿಸ್ಥಿತಿ ವಿಕೋಪಕ್ಕೆ ಹೋಗಲಿದೆ ಎಂದು ಡಾ.ನಿಯಾಝ್ ಎಚ್ಚರಿಸಿದ್ದಾರೆ.

ದೇಶದಲ್ಲಿನ ವೈದ್ಯಕೀಯ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಬೇಕಾಗಿದೆ. ರೋಗಿಗಳಿಗೆ ಬೇಕಾದ ಬೆಡ್ಸ್ ಗಳು ಇಲ್ಲ. ಬೆಡ್ ಗಳು ಇಲ್ಲದ ಪರಿಣಾಮ ನಾವು ರೋಗಿಗಳನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದರೆ ಮುಂದಿನ ದಿನಗಳು ಮತ್ತಷ್ಟು ಕಠಿಣವಾಗಲಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಪಾಕಿಸ್ತಾನದಲ್ಲಿ ಅಂದಾಜಿನ ಪ್ರಕಾರ 70 ಸಾವಿರ ಮಂದಿಗೆ ಕೋವಿಡ್ ಸೋಂಕು ತಗುಲಬಹುದು ಎಂದು ಅಂದಾಜಿಸಲಾಗಿದೆ. ಒಂದು ವೇಳೆ ಶೇ.10ರಷ್ಟು ರೋಗಿಗಳು ಸೀರಿಯಸ್ ಆದರೂ ಕೂಡಾ ಅವರಿಗೆ ಆಸ್ಪತ್ರೆಯಲ್ಲಾಗಲಿ, ವೆಂಟಿಲೇಟರ್ ವ್ಯವಸ್ಥೆ ಮಾಡಲು ಸಾಧ್ಯವಿಲ್ಲ ಎಂದು ಡಾ.ನಿಯಾಝ್ ತಿಳಿಸಿದ್ದಾರೆ.

ನಾವೀಗ ರೋಗಿಗಳಿಗೆ ಚಿಕಿತ್ಸೆ ನೀಡಲು ಆರಂಭಿಸಿದರೆ ನಾವು 35 ವರ್ಷದವರಿಗೆ ಅಥವಾ 55 ವರ್ಷದವರಿಗೆ ಆದ್ಯತೆ ಕೊಡಬೇಕಾ ಎಂಬ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಆದರೆ ನಾವು ಯುವಕರಿಗೆ ಹೆಚ್ಚಿನ ಆದ್ಯತೆ ನೀಡಬೇಕಾಗುತ್ತದೆ ಎಂದು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ರಂಜಾನ್ ತಿಂಗಳಲ್ಲಿ ಮಸೀದಿಗಳನ್ನು ತೆರೆಯುವುದು ಮತ್ತು ಸಾಮೂಹಿಕ ಪ್ರಾರ್ಥನೆ ನಡೆಸುವುದು ಅಪಾಯಕ್ಕೆ ಎಡೆಮಾಡಿಕೊಡಲಿದೆ ಎಂದು ಈಗಾಗಲೇ ವೈದ್ಯರು ಮಸೀದಿ ಮೌಲ್ವಿಗಳಿಗೆ ಪತ್ರ ಬರೆದು ಮನವಿ ಮಾಡಿಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಪಾಕಿಸ್ತಾನದಲ್ಲಿ ಈಗಾಗಲೇ ಕೋವಿಡ್ 19 ವೈರಸ್ ನಿಂದ 200 ಮಂದಿ ಸಾವನ್ನಪ್ಪಿದ್ದು, 10,513 ಜನರು ಸೋಂಕು ಪೀಡಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.